Home Posts tagged #v4newskarnataka (Page 72)

ಪುರುಷೋತ್ತಮ ಪೂಜಾರಿ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ, 5 ಲಕ್ಷ ರೂ. ನೀಡುವ ಭರವಸೆ

ಮಂಗಳೂರಿನ ನಾಗರಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಕಳೆದ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದರು ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋರಿಕ್ಷಾ ನೀಡುವುದಾಗಿ ಶಾಸಕರು ಭರವಸೆ ನೀಡಿದರು ಎಆರ್‍ಟಿಓ ಸ್ಥಳಕ್ಕೆ

ಪುತ್ತೂರು : ಯುವತಿಗೆ ಚೂರಿ ಇರಿದು ಕೊಲೆ ಪ್ರಕರಣ, ಆರೋಪಿ ಉಮೇಶ್ ಎಂಬಾತನ ಬಂಧನ

ಪುತ್ತೂರು: ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಎಂಬಲ್ಲಿ 23ರ ಹರೆಯದ ಯುವತಿಯನ್ನು ಮನೆಯ ಅಂಗಳದಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕನಕಮಜಲಿನ ಅಂಗಾರ ಎಂಬವರ ಪುತ್ರ ಉಮೇಶ್ ಎಂದು ಗುರುತಿಸಲಾಗಿದೆ. ಉಮೇಶ್ ಜಯಶ್ರೀಯನ್ನು ಪ್ರೀತಿಸುತ್ತಿದ್ದು, ಬಿ.ಎಸ್.ಸಿ ಪದವೀಧರೆಯಾದ ಜಯಶ್ರೀ ಇತ್ತೀಚೆಗೆ ಅವನ ಗುಣ ನಡತೆ ಇಷ್ಟವಾಗದ ಕಾರಣ 2022ರ ನವೆಂಬರ್ ವೇಳೆಗೆ ಉಮೇಶನನ್ನು ದೂರ

ಹಾಡು ಹಗಲೆ ಅಪರಿಚಿತ ವ್ಯಕ್ತಿಯಿಂದ ಯುವತಿಗೆ ಚೂರಿ ಇರಿತ

ಪುತ್ತೂರು: ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮದ ಕಂಪ ಸಮೀಪ ಯುವತಿಗೆ ವ್ಯಕ್ತಿಯೊಬ್ಬರು ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಇಂದು ಮನೆಯಂಗಳದಲ್ಲೇ ನಡೆದಿದ್ದು ಗಿರಿಜಾ ಎಂಬವರ ಪುತ್ರಿ ಜಯಶ್ರೀ(23ವರ್ಷ) ಮೃತಪಟ್ಟವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೆÇಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಇವಳು ಮನೆಯಲ್ಲಿ ಅಡುಗೆ ಕೆಲಸ ಮಾಡಿಕೊಳ್ಳುತ್ತಿದ್ದಳು.ತಾಯಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು ಇವಳು ಬೊಬ್ಬೆ

ರೆನಾಲ್ಟ್ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ ; ಗ್ರಾಹಕರಿಗೆ ಆಫರ್ ಗಳ ಸುರಿಮಳೆ

ನೀವು ಏನಾದ್ರೂ ಕಾರು ಖರೀದಿ ಮಾಡುವ ಪ್ಲಾನ್‍ನಲ್ಲಿದ್ದೀರಾ…. ಹಾಗಾದ್ರೆ ನಿಮಗೆ ರೆನಾಲ್ಟ್ ಒಳ್ಳೆಯ ಆಫರ್ ಕೊಡ್ತಾ ಇದೆ. ಈಗಾಗಲೇ ಹಲವಾರು ಆಫರ್‍ಗಳನ್ನ ನೀಡುತ್ತಾ ಬಂದಿರುವ ರೆನೋ ಮಂಗಳೂರು , ಇದೀಗ ಮತ್ತೊಮ್ಮೆ ಗ್ರಾಹಕರಿಗೆ ಆಫರ್ ಸುರಿಮಳೆ ನೀಡ್ತಾ ಇದೆ.ರೆನ್ಟಾಲ್ ಗ್ರಾಹಕರ ಅಚ್ಚುಮೆಚ್ಚಿನ ಕಾರು.. ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ರೆನಾಲ್ಟ್ ಭರ್ಜರಿ ಆಫರ್‍ಗಳನ್ನು ನೀಡಲು ಸಜ್ಜಾಗಿದೆ. ರೆನಾಲ್ಟ್ ಕಾರಿನ ಮೇಲೆ ಡಿಸ್ಕೌಂಟ್

ಬೆಂಗಳೂರಿನ ಚಿಕ್ಕಬಳ್ಳಾಪುರದಲ್ಲಿ 112 ಅಡಿಯ ಆದಿಯೋಗಿಯ ಮೂರ್ತಿ ಅನಾವರಣ

ಯೋಗದ ಮೂಲವಾದ ಆದಿಯೋಗಿಯ 112 ಅಡಿ ಮೂರ್ತಿಯನ್ನು ಬೆಂಗಳೂರಿನ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರುಗಳ ಸಮ್ಮುಖದಲ್ಲಿ ಭಾನುವಾರ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ನಾನು ಕೊಯಮತ್ತೂರಿಗೆ ಹೋಗಿದ್ದೇನೆ. ಆದಿಯೋಗಿ ಬಹಳ ಸಮಯದಿಂದ ಜನರನ್ನು ಪ್ರೇರೇಪಿಸಿದ್ದಾರೆ. ಕೆಲವು ಸೆಕೆಂಡುಗಳ ಕಾಲ ಆದಿಯೋಗಿಯನ್ನು ನೋಡಿ ನಾವು ಅನೇಕ ವಿಷಯಗಳನ್ನು

ಕಾಪು : ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾ.ಹೆ. 66 ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಗೂಡಂಗಡಿಯ ಮುಂಭಾಗ ಸಂಪೂರ್ಣ ನಜ್ಹುಗುಜ್ಜಾಗಿದ್ದು ಗೂಡಂಗಡಿಯಲ್ಲಿದ್ದ ವ್ಯಕ್ತಿಯೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು

ಭಜಕರ ಹಾಗೂ ಹಿಂದೂ ಸಂಘಟನೆಗಳ ನಿಂದನೆ ಆರೋಪ, ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಮಾನತು

ಭಜಕರ ಹಾಗೂ ಹಿಂದೂ ಸಂಘಟನೆಗಳ ನಿಂದನೆ ಹಾಗೂ ಗ್ರಾಮ ಸಭೆಯಲ್ಲಿ ಉಡಾಫೆ ಉತ್ತರ ಆರೋಪ – ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಫಾರಸ್ಸಿನ ಮೆರೆಗೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಮಾನತು. ಗ್ರಾಮ ಸಭೆಯಲ್ಲಿ ಉಡಾಫೆ ಉತ್ತರ, ಸಾಮಾಜಿಕ ಜಾಲತಾಣದಲ್ಲಿ ಭಜಕರ ನಿಂದನೆ ಹಾಗೂ ಹಿಂದೂ ಸಂಘಟನೆಯನ್ನು ಗುರಿಯಾಗಿಸಿ ಪೋಸ್ಟ್ ಹಾಕುತ್ತಿದ್ದ ಆರೋಪ ಎದುರಿಸುತಿದ್ದ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಫಾರಸ್ಸಿನ ಮೆರೆಗೆ

ಬೈತುರ್ಲಿ : 32 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಭೂಮಿಪೂಜೆ

ನಗರ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ವಾರ್ಡುಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಬೇಡಿಕೆಯ ಕಾಮಗಾರಿಗಳಿಗೆ ನನ್ನ ಅವಧಿಯಲ್ಲಿ ದಾಖಲೆ ಪ್ರಮಾಣದ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸಮಾನವಾಗಿ ಅನುದಾನ ಬಿಡುಗಡೆಗೊಳಿಸಿದ್ದೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಪದವಿಪೂರ್ವ ವಾರ್ಡಿನ ಬೈತುರ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ 32 ಲಕ್ಷ ರೂಪಾಯಿ ವೆಚ್ಚದಲ್ಲಿ

ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್. ಅಂಗಾರರಿಂದ ಶಂಕುಸ್ಥಾಪನೆ

ಕಡಬ : ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ರಾಜ್ಯ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯ 1.20 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶಿ ಭಗವಾನ್ ಸೋಣವಾಣೆ, ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್, ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸೈ ಮಂಜುನಾಥ್,

ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ : ಆಚಾರ್ಯ ನಾಗಾರ್ಜುನ ವಿವಿ, ಕೇರಳ ಪ್ರೀ ಕ್ವಾರ್ಟರ್ ಫೈನಲ್‍ಗೆ

ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಕೇರಳ ವಿವಿ, ತಮಿಳುನಾಡು ಚಿದಂಬರಂನ ಅಣ್ಣಾಮಲೈ ವಿವಿ ಮತ್ತು ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿವಿ ತಂಡಗಳು ಫ್ರಿ ಕ್ವಾರ್ಟರ್ ಫೈನಲ್‍ಗೆ ಪ್ರವೇಶಿಸಿವೆ. ಚೆನ್ನೈನ ಅಣ್ಣಾ ವಿವಿ, ತಮಿಳುನಾಡು ತಿರುಚಿನಾಪಳ್ಳಿಯ ಭಾರತಿದಾಸನ್ ವಿವಿ,