ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೆÇಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ. ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ಮೂಡುಬಿದಿರೆ : ಹಿಂದೂ ದೇವರುಗಳನ್ನು ಅವಮಾನಿಸಿ ಮಕ್ಕಳನ್ನು ಬಲತ್ಕಾರದ ಮತಾಂತರಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ವಿದ್ಯಾಗಿರಿಯಲ್ಲಿ ಬಂಧಿಸಿದ್ದಾರೆ. ಮೈಸೂರಿನ ನಿವಾಸಿ ಬೆಂಜಮಿನ್ ವಾಸ್ ಎಂಬಾತ ಬಂಧಿಸಲ್ಪಟ್ಟ ವ್ಯಕ್ತಿ. ವಿದ್ಯಾಗಿರಿಯಲ್ಲಿ ನಡೆಯುತ್ತಿದ್ದ ಸ್ಕೌಟ್ಸ್ ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಜನರು ಸೇರುತ್ತಿದ್ದ ಕಡೆಗೆ ಧಾವಿಸುತ್ತಿದ್ದ ಬೆಂಜಮಿನ್, ಹಿಂದುಗಳ
ಬೆಳ್ತಂಗಡಿ ತಾಲೂಕಿನ ಶಿಬಾಜೆ ಕುರುಂಜಿ ಗ್ರಾಮದ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಗೈದಿರುವ ಆರೋಪಿಗಳ ಮೇಲೆ ಕೊಲೆ, ದರೋಡೆ, ಹಲ್ಲೆ, ದಲಿತ ದೌರ್ಜನ್ಯ ದಾಖಲಾದರೂ ರಾಜಕೀಯ ಒತ್ತಡಕ್ಕೆ ಒಳಗಾದ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸದೆ ರಕ್ಷಣೆಗೆ ಮುಂದಾಗಿರುವ ಘಟನೆ ನಡೆದಿದೆ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕ್ರಮ ಜರುಗಿಸಬೇಕೆಂದು ಮೊಗೇರ ಸಂಘ ಮತ್ತು ದಲಿತ ಸಂಘಗಳು ಒತ್ತಾಯಿಸಿವೆ. ಈ
ಮಂಗಳೂರು ನಗರ ಮತ್ತು ಗ್ರಾಮಾಂತರ ಆಟೋ ರಿಕ್ಷಾಗಳ ಕಲರ್ ಕೋಡಿಂಗ್ ಆದೇಶ ಕೂಡಲೇ ಜಾರಿಯಾಗಬೇಕು. ರಿಕ್ಷಾ ಪಾರ್ಕ್ಗಳ ನೋಂದಾವಣಿಗೆ ವಿಳಂಬ ಮಾಡುತ್ತಿರುವುದು ಯಾಕೆ ಮತ್ತು ನಗರದೊಳಗೆ ಗ್ರಾಮಾಂತರ ರಿಕ್ಷಾಗಳ ಅಕ್ರಮ ಸಂಚಾರ ಮಾಡಿ ಬಾಡಿಗೆ ಮಾಡುವುದನ್ನು ನಿಲ್ಲಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಆಟೋ ಚಾಲಕ ಮಾಲಕರ ಸಂಘಟಗಳ ಒಕ್ಕೂಟದ ಗೌರವಾಧ್ಯಕ್ಷರಾದ ವಿಷ್ಣುಮೂರ್ತಿ ಭಟ್ ಆಗ್ರಹಿಸಿದ್ದಾರೆ. ಅವರು ನಗರದ ಪ್ರೆಸ್ಕ್ಲಬ್ದಲ್ಲಿ
ಮತಾಂಧ ಕ್ರಿಮಿನಲ್ ಗಳಿಂದ ಕೊಲೆಗೀಡಾದ ಕಾಟಿಪಳ್ಳದ ಜಲೀಲ್ ನಿವಾಸಕ್ಕೆ ಮಂಗಳೂರಿನ ನಾಗರಿಕ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿತು. ಕೊಲೆಗಡುಕರಿಗೆ ಶಿಕ್ಷೆ ನೀಡಲು, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ನಡೆಸುವ ಪ್ರಯತ್ನದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿತು. ಯಾರ ತಂಟೆತಕರಾರಿಗೂ ಹೋಗದ, ತನ್ನ ಪಾಡಿಗೆ ಬದುಕು ನಡೆಸುತ್ತಿದ್ದ ಜಲೀಲ್ ಹತ್ಯೆ ಮತಾಂಧ ಶಕ್ತಿಗಳಿಂದ ಕುರುಡು
ಮಂಜೇಶ್ವರ : ಯೇಸು ಕ್ರಿಸ್ತರ ಬೋಧನೆಗಳಾದ ಪರಸ್ಪರ ಕ್ಷೇಮ ಪ್ರೀತಿ ಕರುಣೆ ದಯೆ ಸಹನೆ ಸೇವೆಯಿಂದ ಬಾಳುವ ಮೂಲಕ ಶಾಂತಿ ಸೌಹಾರ್ದತೆ ಬಂಧುತ್ವ ಸಮಾಜದಲ್ಲಿ ನೆಲೆಗೊಳ್ಳಲಿ. ಪ್ರಮುಖವಾಗಿ ಮನುಕುಲದಲ್ಲಿ ಮನುಷ್ಯತ್ವದಿಂದ ಜೀವಿಸುವುದೇ ಧರ್ಮವಾಗಿದೆ ಮಾತ್ರವಲ್ಲದೆ ಇದುವೇ ಕ್ರಿಸ್ಮಸ್ ಸಂದೇಶವಾಗಿದೆ ಎಂದು ಮಂಜೇಶ್ವರ ಮರ್ಸಿ ಅಮ್ಮನ ದೇವಾಲಯದ ಧರ್ಮಗುರು ಎಡ್ವಿನ್ ಪಿಂಟೋ ಹೇಳಿದರು. ಮಂಜೇಶ್ವರ ಮರ್ಸಿ ಅಮ್ಮನವರ ಚರ್ಚ್ ಅಂಗಣದಲ್ಲಿ ಆಯೋಜಿಸಲಾದ ಕ್ರಿಸ್ಮಸ್ ಹಬ್ಬದ ಸಹಮಿಲನ
ಮೂಡುಬಿದಿರೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 20ಕ್ಕಿಂತಲೂ ಅಧಿಕ ಅಕ್ರಮ ಕಸಾಯಿಖಾನೆಗಳಿದ್ದು, ಪೊಲೀಸರು ಈ ಅಕ್ರಮ ಕಸಾಯಿಖಾನೆಯ ವಿರುದ್ಧ ಯಾವುದೇ ಕಾನೂನು ಕ್ರಮವನ್ನು ಜರಗಿಸದೆ ಅಕ್ರಮ ಗೋವುಗಳ ಕಸಾಯಿಖಾನೆಯನ್ನು ನಡೆಸುವವರಿಗೆ ಸಹಕಾರವನ್ನು ನೀಡುತ್ತಿದ್ದು ಈ ಬಗ್ಗೆ ಉಗ್ರ ಹೋರಾಟವನ್ನು ಮಾಡುವುದಾಗಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ್ ಸಮಿತ್ ರಾಜ್ ದರೆಗುಡ್ಡೆ ಎಚ್ಚರಿಕೆ ನೀಡಿದ್ದಾರೆ. ಅವರು ಮೂಡುಬಿದಿರೆಯಲ್ಲಿ ನಿರಂತರವಾಗಿ ನಡೆಯುತ್ತಿರುವ
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನ ಸಭೆಯು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಾತನಾಡಿದ ಸಂಸದ ಬಿ. ವೈ ರಾಘವೇಂದ್ರ ಅವರು, “ಸಾಕಷ್ಟು ಅನುದಾನವು ಈ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ನೀಡಿದೆ. ರೂ.1500 ಕೋಟಿ ಮೊತ್ತದ ವಿವಿಧ ಕಾಮಗಾರಿಗಳು ಶಂಕುಸ್ಥಾಪನೆ ಹಾಗೂ
ಮೂಡುಬಿದಿರೆ: ಹಿರಿಯ ಯಕ್ಷಗಾನ ಕಲಾವಿದ ಪ್ರಸಂಗಕರ್ತ ಇರುವೈಲು ಕಟ್ಟಣಿಗೆ ಸಂಜೀವ ಪ್ರಭು(83) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ. ಇರುವೈಲು ಮೇಳವನ್ನು ಯಶಸ್ವಿಯಾಗಿ ಮುನ್ನಡೆಸಿ, ಸೇವಾ ರೂಪದಲ್ಲಿ ಕಟೀಲು ಮತ್ತು ಸುರತ್ಕಲ್ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದರು. ಇರುವೈಲು ಕ್ಷೇತ್ರ ಮಹಾತ್ಮೆ, ನಾಗಲಿಂಗೇಶ್ವರ ಮಹಿಮೆ, ರಕ್ತೇಶ್ವರಿ ಕಾರ್ಣಿಕ ಸೇರಿದಂತೆ ಹಲವು ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದ ಸಂಜೀವ ಪ್ರಭು ಅವರು ವೃತ್ತಿಯಲ್ಲಿ
ವಿದ್ಯಾಗಿರಿ ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ 2022 ಕಾರ್ಯಕ್ರಮದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ಸಾರಥ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ರಂಗ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ. ಶ್ರೀಲಂಕಾ , ಕೊರಿಯಾ, ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ರಂಗ ವ್ಯಾಯಾಮ, ಗೀತಾಭಿನಯ , ರಂಗ ಚಾಲನೆ ,




























