Home Posts tagged #v4newskarnataka (Page 9)

ವಿಶ್ವ ಪರಿಸರ ದಿನಾಚರಣೆ : ಕಾಂಡ್ಲಾ ಸಸಿ ನೆಟ್ಟ ಶೋಭಾ ಕರಂದ್ಲಾಜೆ

ಉಡುಪಿ : ಅರಣ್ಯ ಇಲಾಖೆ ಮಂಗಳೂರು ವೃತ್ತ, ಕುಂದಾಪುರ ವಿಭಾಗದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 5 ರಂದು ಕುಂದಾಪುರ-ಕೋಡಿ ಸೇತುವೆ ಬಳಿಯ ಶ್ರೀನಾಗ ಜಟ್ಟಿಗೇಶ್ವರ ದೇವಸ್ಥಾನದ ಎದುರು ಹಮ್ಮಿ ಕೊಂಡ ಕಾಂಡ್ಲಾ ಸಸಿ ನೆಡುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೋಟ್ ಮೂಲಕ ತೆರಳಿ ನದಿ ನಡುವೆ ಬೆಳೆಸಿದ ಕಾಂಡ್ಲಾ ವನಗಳ ವೀಕ್ಷಣೆ ಮಾಡಿದ ಬಳಿಕ

ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೊದಲ ಬಾರಿಗೆ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ನವೀನ ಎಂಡೋಸ್ಕೋಪಿ (ಈ ಯು ಎಸ್ – ಗ್ಯಾಸ್ಟ್ರೊಜೆಜುನ್ಸೋಟಮಿ)

ಉಡುಪಿ : ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಶಿರನ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಡಾ. ಗಣೇಶ್ ಭಟ್, ಡಾ. ಅತಿಶ್ ಶೆಟ್ಟಿ, ಡಾ. ಬಾಲಾಜಿ ಮತ್ತು ಡಾ. ಸಂದೇಶ್ ಶೇಟ್ (ಅರಿವಳಿಕೆ) ಇವರುಗಳು ಎಂಡೋಲ್ಟ್ರಾಸೌಂಡ್ ಗೈಡೆಡ್ ಗ್ಯಾಸ್ಟ್ರೋಜೆಜುನೋಸ್ಟೋಮಿ ಎಂಬ ಸಂಕೀರ್ಣ ವಿನೂತನ ಎಂಡೋಸ್ಕೋಪಿ ಕಾರ್ಯವಿಧಾನ (ಶಸ್ತ್ರಚಿಕಿತ್ಸೆ)ಯನ್ನು ಉಡುಪಿ ಜಿಲ್ಲೆಯ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಇತ್ತೀಚೆಗೆ ನಡೆಸಲಾಯಿತು.

ತೂಫಾನ್ ವೇಗದಲ್ಲಿ ಪ್ರಾಣಕ್ಕೆ ಕಂಟಕ ತರುವ ಎಚ್ಚರಗೇಡಿ ಪ್ರಯಾಣ

ಉಡುಪಿ ಜಿಲ್ಲೆಯ ಮೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಪ್ರವಾಸಿಗರು ತೂಫಾನ್ ವಾಹನದಲ್ಲಿ ನೇತಾಡಿಕೊಂಡು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ವಾಹನದ ಒಳಗೆ ಭರ್ತಿ ಜನರನ್ನು ತುಂಬಿಸಿಕೊಂಡು, ಜೀವಕ್ಕೆ ಅಪಾಯ ತರುವಂತೆ ವಾಹನದ ಮೇಲ್ಭಾಗದಲ್ಲಿ ಮತ್ತು ಸ್ಪೇರ್ ಟೈರ್ ಮೇಲೆ ಕುಳಿತು ನೇತಾಡುತ್ತಾ ನಿರ್ಲಕ್ಷ್ಯವಾಗಿ ವಾಹನದಲ್ಲಿ ಸಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೈವೇ ನಲ್ಲಿ ಪ್ರವಾಸಿಗರ ತೀರ ಬೇಜವಾಬ್ದಾರಿ ವರ್ತನೆಗೆ ಸಾರ್ವಜನಿಕರು

ಉಡುಪಿಯ ಯಕ್ಷಗಾನ ಕಲಾರಂಗ : ಯಕ್ಷನಿಧಿ ಕಲಾವಿದರ ಸಮಾವೇಶ

ಉಡುಪಿಯ ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಯಕ್ಷನಿಧಿ ಕಲಾವಿದರ 2023ರ ಸಮಾವೇಶವು ಜೂನ್ 1 ರ ಗುರುವಾರದಂದು ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಸಂಪನ್ನಗೊಂಡಿತು. ಸಮಾವೇಶವನ್ನು ಖ್ಯಾತ ಕಥಕ್ ಕಲಾವಿದೆ ವಿದುಷಿ ಮಧು ನಟರಾಜ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅದಮಾರು ಎಜುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ಡಾ. ಎ. ಪಿ. ಭಟ್, ಕಲಾವಿದರಾದ ಆರ್ಗೋಡು ಮೋಹನದಾಸ್ ಶೆಣೈ, ಕೊಂಡದಕುಳಿ ರಾಮಚಂದ್ರ ಹೆಗಡೆ,

ವಿದ್ಯುತ್ ಸ್ಪರ್ಶ : ನವಿಲ ರಕ್ಷಣೆಗೆ ಬಂತು ಆಂಬುಲೆನ್ಸ್

ಉಡುಪಿ : ವಿದ್ಯುತ್ ಸ್ಪರ್ಶಿಸಿ ರಾಷ್ಟ್ರಪಕ್ಷಿ ನವಿಲೊಂದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಕ್ಕಿಕಟ್ಟೆ ಬಳಿ ನಡೆದಿದೆ. ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ನವಿಲನ್ನು ಕಂಡ ಸ್ಥಳೀಯರು ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅವರು, ನವಿಲನ್ನು ಆ್ಯಂಬುಲೆನ್ಸ್ ನ ಮೂಲಕ ಉದ್ಯಾವರದ ಪಶುವೈದ್ಯ ಸಂದೀಪ್ ಶೆಟ್ಟಿ ಅವರ ಬಳಿ ಕೊಂಡೊಯ್ದು ಮಾನವೀಯತೆಯನ್ನು ಮೆರೆದಿದ್ದಾರೆ. ಆದರೆ, ನವಿಲನ್ನು ಪರೀಕ್ಷಿಸಿದ

ಶಾಲಾ ಪ್ರಾರಂಭೋತ್ಸವದಲ್ಲಿ ಉಡುಪಿ ಡಿಸಿ ಕೂರ್ಮಾರಾವ್ ಎಂ. ಭಾಗಿ

ಉಡುಪಿ : ಉಡುಪಿಯಲ್ಲಿ ಮೇ 29 ರಿಂದ ಶಾಲೆಗಳು ತೆರೆದುಕೊಂಡಿದ್ದು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳು ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ನಿರ್ವಹಿಸಿದರು. ಮೇ 31 ರಂದು ತರಗತಿಗಳು ಆರಂಭಗೊಂಡು, ಬೇಸಿಗೆ ರಜೆಯನ್ನು ಮುಗಿಸಿ ಬಂದ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಗಿತ್ತು. ವಿಶೇಷವೆಂಬಂತೆ ಜಿಲ್ಲೆಯ ಹಲವು ಶಾಲೆಗಳಲ್ಲಿ ತೋರಣ, ರಂಗೋಲಿ ಹಾಕಿ ಮಕ್ಕಳನ್ನು ಬರಮಾಡಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಯ

ಸರಕಾರ ಖಾಸಗಿ ಬಸ್ ಗಳ ವೆಚ್ಚ ಭರಿಸಿದ್ರೆ ಖಾಸಗಿ ಬಸ್ ನಲ್ಲೂ ಉಚಿತ ಪ್ರಯಾಣ : ಉಡುಪಿ ಸಿಟಿ ಬಸ್ ಮಾಲಕರ ಸಂಘ

ಉಡುಪಿ : ರಾಜ್ಯದಾದ್ಯಂತ ಕಾಂಗ್ರೆಸ್ ನ ಭರವಸೆ ನೀಡಿದ ಗ್ಯಾರಂಟಿ ಗಳು ಒಂದೊಂದೆ ಜಾರಿ ಆಗುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ನಿನ್ನೆಯಷ್ಟೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ರಾಜ್ಯದಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಿದ್ದರು. ಆದರೆ ರಾಜ್ಯದಲ್ಲಿ ಸರಕಾರಿ ಬಸ್ ಮಾತ್ರ ಅಲ್ಲ, ಖಾಸಗಿ ಬಸ್ ಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ಮಾಡುತ್ತಿವೆ. ಇಲ್ಲಿ ಮಹಿಳೆಯರಿಗೆ ಸಮಸ್ಯೆ ಅಗುವ ಸಾದ್ಯತೆ ಇದೆ. ರಾಜ್ಯದಾದ್ಯಂತ 17

‘ಹೋದ್ರೆ ನನ್ನದೊಂದು ತಲೆಕೂದಲು ಮಾತ್ರ ಅಲ್ವಾ’ : ಸರ್ಕಾರದ 5 ಗ್ಯಾರಂಟಿಗಳ ಜಾರಿ ಬಗ್ಗೆ ಕುಯಿಲಾಡಿ ಮಾರ್ಮಿಕ ನುಡಿ

ಉಡುಪಿ : ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಸರಕಾರ ನೀಡಿದ 5 ಗ್ಯಾರಂಟಿಗಳ ಪ್ರಣಾಳಿಕೆ ಕುರಿತು ಉಡುಪಿ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ನೀಡಿರುವ ಹೇಳಿಕೆ ಚುನಾವಣಾ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಬಹಳ ಸದ್ದು ಮಾಡಿತ್ತು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಐದು ಗ್ಯಾರಂಟಿಗಳ ಪೂರೈಕೆ ಮಾಡಿದರೆ ನಾನು ಕೆಪಿಸಿಸಿ ಕಚೇರಿ ಎದುರು ತಲೆ ಬೋಳಿಸಿ ಕೂತುಕೊಳ್ಳಲು ಸಿದ್ದನಿದ್ದೇನೆ ಎಂದು ಚುನಾವಣಾ ಸಂದರ್ಭದಲ್ಲಿ ಕುಯಿಲಾಡಿ ಸುರೇಶ್

‘ಕೇಂದ್ರ ಸರ್ಕಾರ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ’ : ಕುಸ್ತಿ ಪಟುಗಳ ಪರವಾಗಿ ಉಡುಪಿಯಲ್ಲಿ ಪ್ರತಿಭಟನೆ

ಹಲವು ದಿನಗಳಿಂದ ಭಾರತೀಯ ಮಹಿಳಾ ಕುಸ್ತಿ ಪಟುಗಳು ಭಾರತ ಕುಸ್ತಿ ಫೆಡರೇಶನ್ ನ ಅಧ್ಯಕ್ಷರಾದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ತೀವ್ರ ಪ್ರತಿಭಟನೆ ನಡೆಸುತ್ತಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ವಿಚಾರವಾಗಿ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ, ದೇಶದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕೊಡಿ ಎಂದು ಒತ್ತಾಯಿಸಿ, ಸಮಾನ ಮನಸ್ಕ ಸಂಘಟನೆಗಳು ಉಡುಪಿಯಲ್ಲಿ ಮೇ 31 ರ ಬುಧವಾರದಂದು ಪ್ರತಿಭಟಿಸಿವೆ. ಕರ್ನಾಟಕ ದಲಿತ

ಲೋಕಾಯುಕ್ತ ಅಬ್ಬರ : ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಮನೆಗೆ ದಾಳಿ

ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಅವರ ಉಡುಪಿಯ ಕೊರಂಗ್ರಪಾಡಿಯಲ್ಲಿರುವ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಮೇ 31 ರ ಬುಧವಾರದಂದು ದಾಳಿ ನಡೆಸಿದ್ದಾರೆ. ಬೆಳಗ್ಗೆ ಆರಂಭಗೊಂಡ ಶೋಧ ಕಾರ್ಯಾಚರಣೆ ತಡರಾತ್ರಿ ವರೆಗೂ ನಡೆಸಲಾಗಿತ್ತು. ದಾಳಿ ವೇಳೆ ಕುಮಾರ್ ರವರ ನಿವಾಸದಲ್ಲಿ ಚಿನ್ನಾಭರಣ, ಐಷಾರಾಮಿ ಕಾರು, ಬೆಲೆಬಾಳುವ ಪೀಠೋಪಕರಣಗಳು, ಲಕ್ಷಾಂತರ ರೂಪಾಯಿ ನಗದು ಹಾಗೂ ಹೊರಜಿಲ್ಲೆಯಲ್ಲಿರುವ ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಿಕ್ಕಿದ್ದು,