Home Posts tagged #v4newskarnataka (Page 96)

ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತಾರೆ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ

ಕುಂದಾಪುರ : ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು

ಜಾಂಬೂರಿಗೆ ಮೆರಗು ನೀಡಲಿರುವ ಕೃಷಿ ,ವಿಜ್ಞಾನ ಮೇಳ

ಮೂಡುಬಿದಿರೆ: ದೇಶಿಯ ಸಂಸ್ಕೃತಿಯನ್ನು ಆಳ್ವಾಸ್ ನುಡಿಸಿರಿ, ವಿರಾಸತ್ ಮುಖೇನ ಕಳೆದ ಎರಡುವರೆ ದಶಕಗಳಲ್ಲಿ ಸಾದರಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಈ ಬಾರಿ ಒಂದು ವಾರಗಳ ಅಂತಾರಾಷ್ಟ್ರೀಯ ಸ್ಕೌಟ್‍ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುತ್ತಿದೆ. ಈ ಬಾರಿ ಜಾಂಬೂರಿಗೆ ವಿಶೇಷವಾಗಿ ಕೃಷಿ ಮತ್ತು ವಿಜ್ಞಾನ ಮೇಳಗಳು ವಿಶೇಷ ಮೆರುಗು ನೀಡಲಿದೆ. ಕೃಷಿ ಮಹತ್ವವನ್ನು ಬಿಂಬಿಸುವ ನಿಟ್ಟಿನಲ್ಲಿ ಜಾಂಬೂರಿಯಂದು ಆಳ್ವಾಸ್ ಆವರಣದ ಸುಮಾರು 12 ಎಕರೆ

ಆಟೋ ಮತ್ತು ಸ್ಕೂಟರ್ ಢಿಕ್ಕಿ-ಪ್ರಗತಿಪರ ಕೃಷಿಕ ದಾರುಣ ಅಂತ್ಯ – belthangady

ಬೆಳ್ತಂಗಡಿ: ಆಟೋ ಮತ್ತು ಸ್ಕೂಟರ್ ಪರಸ್ಪರ ಢಿಕ್ಕಿ ಹೊಡೆದು ಪ್ರಗತಿಪರ ಕೃಷಿಕರೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯ ಕಾಶಿಪಟ್ಟ ಗ್ರಾಮದಲ್ಲಿ ನಡೆದಿದೆ.ಕೊಕ್ರಾಡಿ- ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಹಂಬಡ ನಿವಾಸಿ,ನಿತ್ಯಾನಂದ ಪೂಜಾರಿ (48) ಮೃತಪಟ್ಟ ದುರ್ದೈವಿ. ನಿತ್ಯಾನಂದ ಪೂಜಾರಿ ಅವರು ಶಿರ್ತಾಡಿ ಕಡೆಯಿಂದ ಪೆರಾಡಿಯತ್ತ ಸ್ಕೂಟರ್‌ನಲ್ಲಿ ಸಾಗುತ್ತಿದ್ದರು. ವಿರುದ್ಧ

ಮಂಗಳೂರು: ಮ್ಯಾಂಡಸ್ ಚಂಡಮಾರುತ – ಮೀನುಗಾರಿಕೆ ದೋಣಿಗಳು ದಡ ಸೇರಲು ಸೂಚನೆ

ಡಿ.16ರವರೆಗೆ ಮ್ಯಾಂಡಸ್ ಚಂಡಮಾರುತದಿಂದ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ, ಈ ವೇಳೆ ಸಂಭವಿಸುವ ಅನಾಹುತವನ್ನು ತಡೆಗಟ್ಟಲು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಂಗಳೂರು ಕೋಸ್ಟ್‍ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಅವರು ಎಚ್ಚರಿಸಿದ್ದಾರೆ.

ಹವಾಮಾನ ವೈಪರೀತ್ಯ; ಆರೋಗ್ಯ ಇಲಾಖೆಯಿಂದ ರಾಜ್ಯದ ಜನತೆಗೆ ಮಾರ್ಗಸೂಚಿ ಪ್ರಕಟ

ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ, ಶೀತ ಗಾಳಿ ಮತ್ತು ಅತಿ ಕಡಿಮೆ ತಾಪಮಾನವು ವರದಿಯಾಗಿದೆ.ಚಳಿಗಾಲವೂ ಆಗಿರುವುದರಿಂದ ಎಲ್ಲ ಸಾರ್ವಜನಿಕರು ಆರೋಗ್ಯವನ್ನು ಕಾಪಾಡಿಕೊಳ್ಳಲು ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆ ಸೂಚಿಸಿದೆ. ಈ ರೀತಿಯ ವಾತಾವರಣದಲ್ಲಿ ಹೆಚ್ಚಾಗಿ ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಚಳಿಯ ವಾತಾವರಣ ಹಿನ್ನೆಲೆ ಆರೋಗ್ಯ

ಸುಳ್ಯದಲ್ಲಿ 26ನೇ ಕನ್ನಡ ಸಾಹಿತ್ಯ ಸಮ್ಮೇಳನ

ಸುಳ್ಯ: ಮಕ್ಕಳಿಗೆ ಸಾಹಿತ್ಯದ ಅಭಿರುಚಿ ಮೂಡಿಸುವ ಅವಶ್ಯಕತೆ ಇದೆ.ಮಕ್ಕಳಿಗೆ ನಾವು ಸಾಹಿತ್ಯವನ್ನು ಓದುವ ಮೂಲಕ ಸಾಹಿತ್ಯವನ್ನು ಸಾಹಿತ್ಯದ ವಿಚಾರವನ್ನು ಅವರಿಗೆ ಹೇಳಬೇಕೆಂದು ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕೆ.ಆರ್ ಗಂಗಾಧರ ಹೇಳಿದರು. ಅವರು ಗೂನಡ್ಕ ಸಜ್ಜನ ಸಭಾಭವನದಲ್ಲಿ ನಡೆದ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ವಿಮರ್ಶಕ ವಿಜಯಶಂಕರ ಸಮ್ಮೇಳನವನ್ನು ಉದ್ಘಾಟಿಸಿದರು.

ನಂದಾವರ ದೇವಳಕ್ಕೆ ನೂತನ ರಜತ ಪಲ್ಲಕಿ ಹಾಗೂ ಪೀಠ ಪ್ರಭಾವಳಿ ಸಮರ್ಪಣೆ

ನಂದಾವರ ದೇವಳಕ್ಕೆ ನೂತನ ರಜತ ಪಲ್ಲಕಿ ಹಾಗೂ ಪೀಠ ಪ್ರಭಾವಳಿ ಸಮರ್ಪಣೆ ನಂದಾವರ ಶ್ರೀ ವೀರ ಮಾರುತಿ ದೇವಸ್ಥಾನ ದ ಶ್ರೀ ದೇವರ ಉತ್ಸವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ರಜತ ಪಲ್ಲಕಿ ಹಾಗೂ ಶ್ರೀ ದೇವರ ರಜತ ಪೀಠ ಪ್ರಭಾವಳಿಗಳನ್ನು ಶ್ರೀದೇವರಿಗೆ ಹತ್ತು ಸಮಸ್ತರ ಪರವಾಗಿ ಶ್ರೀ ದೇವರಿಗೆ ಸಮರ್ಪಿಸಲಾಯಿತು . ಸುಮಾರು 28ಕಿಲೋ ಬೆಳ್ಳಿಯನ್ನು ಬಳಸಲಾಗಿದ್ದು , 25 ಲಕ್ಷ ವೆಚ್ಚ ತಗಲಿದ್ದು ಶ್ರೀದೇವಳದ ವೈದಿಕರಿಂದ ವಿಧಿ ವಿಧಾನಪೂರ್ವಕ ಪೂಜೆನಡೆದು

ಕಡಬ ಪ.ಪಂ. ವ್ಯಾಪ್ತಿಗೆ ನಗರೋತ್ಥಾನ ಯೋಜನೆಯಡಿ ವಿಶೇಷ ಅನುದಾನ

ಕಡಬ:ಸಚಿವ ಎಸ್. ಅಂಗಾರ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದಿಂದ ನಗರೋತ್ಥಾನ ಯೋಜನೆಯಡಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಮಂಜೂರಾದ 5 ಕೋಟಿ ರೂ. ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಮಂಜೂರಾದ 2.90 ಕೋಟಿ ರೂ. ಕಾಮಗಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಬಳಿಕ ಕಡಬ ಸಿ.ಎ.ಬ್ಯಾಂಕ್ ವಠಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆ ದೇಶ ಮತ್ತು ರಾಜ್ಯವನ್ನು ಆಳಿದ ಕಾಂಗ್ರೆಸ್ ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದ ಅಭಿವೃದ್ದಿ

ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಮೃತ್ಯು

ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ , ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ ( 22) ಮೃತರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡಿದ್ದಾರೆ. ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್‍ಶಿಪ್ ನಡೆಸುತ್ತಿದ್ದರು. ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ

ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಸುವರ್ಣ ಪ್ರಾಶನ ಶಿಬಿರ.

ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಸುವರ್ಣ ಪ್ರಾಶನ ಕಾರ್ಯಕ್ರಮ ಪುಷ್ಯ ನಕ್ಷತ್ರದ ದಿನ 12-12-2023 ರಂದು ಜರುಗಿತು.ಮಠಾಧಿಪತಿಗಳಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರು ಮಕ್ಕಳ ಸ್ವಾಸ್ಥ್ಯ ರಕ್ಷಣೆಯ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 16 ವರ್ಷದ ವರೆಗಿನ ಮಕ್ಕಳಿಗಾಗಿ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು ಸುವರ್ಣ ಪ್ರಾಶನ ಶಿಬಿರ ಜರುಗಲಿದೆ.. ಇಲ್ಲಿನ ವೈದ್ಯಕೀಯ ಸೇವಾ ವಿಭಾಗದ ಆಯುರ್ವೇದ ತಜ್ಞ ವೈದ್ಯ