ಪ್ರಸ್ತುತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಯರಾಂ ಬನನ್ ಅವರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಭಾಜರಾಗಿದ್ದಾರೆ. ದೆಹಲಿ ಸೇರಿದಂತೆ ದೇಶದ ಉದ್ದಕ್ಕೂ ಹೋಟೆಲ್ ಉದ್ಯಮ ನಡೆಸುತ್ತಿರುವ ಕಾರ್ಕಳದ ಮಠದಬೆಟ್ಟುವಿನ ಹೊಟೇಲ್ ಉದ್ಯಮಿ ಸಮಾಜ ಸೇವಕ ಜಯರಾಂ ಬನನ್
ಕಾವೂರಿನಲ್ಲಿ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. ಇದೇ ವೇಳೆ ಹಕ್ಕು ಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮದಲ್ಲಿ , ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ ,ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ
ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 7ನೇ ವಾರ್ಡಿನ ಅಂಬಿತ್ತಡಿ ಎಂಬಲ್ಲಿ ಶೆಡ್ಡ್ನಲ್ಲೇ ಅಂಗನವಾಡಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಈ ತನಕ ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರ ನಿರ್ಮಾಣಗೊಂಡಿಲ್ಲ. ಶೀಘ್ರದಲ್ಲೇ ಸುಸಜ್ಜಿತವಾದ ಅಂಗನವಾಡಿ ಕೇಂದ್ರ ನಿರ್ಮಿಸಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈಗಾಗಲೇ ಪಂಚಾಯತಿನಿಂದ ಫಂಡ್ ಮಂಜೂರಾಗಿದ್ದರೂ ಪಂಚಾಯತಿನ ಸ್ಥಳ ಇಲ್ಲದೇ ಇರುವ ಹಿನ್ನೆಲೆಯಲ್ಲಿ ಊರವರಿಗೆ ಅಂಗನವಾಡಿಯ ಭಾಗ್ಯ ಲಭ್ಯವಾಗಲಿಲ್ಲ.
ಮೂಡುಬಿದಿರೆ: ತಾನು ನೀಡಿದ ಅಭಿವೃದ್ಧಿ ಕಾಮಗಾರಿಯ ಅರ್ಜಿ ಅಜೆಂಡಾದಲ್ಲಿ ಬಂದಿಲ್ಲವೆಂದು ಆರೋಪಿಸಿ ಸದಸ್ಯ ಕೊರಗಪ್ಪ ಅವರು ಬಟ್ಟೆ ತೆಗೆದು ಅರೆನಗ್ನ ರೀತಿಯಲ್ಲಿ ಪ್ರತಿಭಟಿಸಿದ ಘಟನೆ ಸೋಮವಾರ ಪುರಸಭೆಯಲ್ಲಿ ನಡೆಯಿತು. ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊರಗಪ್ಪ ಅವರು ತಾನು ಅರ್ಜಿ ಕೊಟ್ಟಿರುವುದು ಅಜೆಂಡಾದಲ್ಲಿ ಬಂದಿಲ್ಲವೆಂದು ಆರೋಪಿಸಿದರು. ಅರೆನಗ್ನ ಸ್ಥಿತಿಯಲ್ಲಿ ಪ್ರತಿಭಟಿಸಿರುವುದನ್ನು ಆಡಳಿತ ಪಕ್ಷದ ಸದಸ್ಯರು ತೀವೃವಾಗಿ
ಕುಂದಾಪುರದ ಜಾಲಾಡಿ ಸಮೀಪದ ರಾ.ಹೆದ್ದಾರಿ 66 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ಕಾರು ಅಪಘಾತಕ್ಕೀಡಾಗಿದೆ. ಸೋಮವಾರ ಬೆಳಿಗ್ಗೆ ಪತ್ನಿಯೊಂದಿಗೆ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಿರುದ್ದ ಧಿಕ್ಕಿನಿಂದ ಏಕಾಏಕಿ ಅಡ್ಡಲಾಗಿ ಬಂದ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಕಾರು ಚಾಲಕನ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾದ
ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನ.12, 13ರಂದು ಅಮ್ಮುಂಜೆ ಅನುದಾನಿತ ಶಾಲೆಯಲ್ಲಿ ನಡೆಯಲಿದ್ದು, ಸಮ್ಮೇಳನಾಧ್ಯಕ್ಷ ಪ್ರೊ. ಕೆ.ಬಾಲಕೃಷ್ಣ ಗಟ್ಟಿ ಅವರನ್ನು ಅಧಿಕೃತವಾಗಿ ಆಮಂತ್ರಿಸಲಾಯಿತು. ಈ ಸಂದರ್ಭ ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ಗೌರವ ಕಾರ್ಯದರ್ಶಿಗಳಾದ ವಿ.ಸು.ಭಟ್ ಮತ್ತು ರಮಾನಂದ ನೂಜಿಪ್ಪಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಗೀತಾ ಎಸ್.ಕೊಂಕೋಡಿ, ವಿಟ್ಲ ಹೋಬಳಿ ಅಧ್ಯಕ್ಷರಾದ ಗಣೇಶ
ಎಸ್ಡಿಎಂ ಕಾನೂನು ಕಾಲೇಜು ಆಯೋಜಿಸಿದ ಸ್ಕ್ರಿಪ್ಟ್ ರೈಟಿಂಗ್ ಸ್ಪರ್ಧೆಯಲ್ಲಿ ಸತ್ಯಾತ್ಮ ಭಟ್ ಕುಂಟಿನಿ , ೨ನೇ ವರ್ಷ ಬಿ.ಎ. ಎಲ್ ಎಲ್ ಬಿ ಶಿಕ್ಷಣವನ್ನು ಪಡೆಯುತ್ತಿರುವ ಇವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಹಾಗೆಯೇ ಇವರು ಬರೆದ ” ಸ್ವಪ್ನ ಕಥಾ ” ಎಂಬ ಕಥೆಯನ್ನು ಬೀದಿ ನಾಟಕವಾಗಿ ಮಂಗಳೂರಿನ ನಿರ್ಮಾರ್ಗ ಪಂಚಾಯತ್ ಮುಂಭಾಗದಲ್ಲಿ ಹಾಗೂ ಸ್ಟೇಟ್ ಬ್ಯಾಂಕ್ ಬಸ್ಟ್ಯಾಂಡಿನಲ್ಲಿ ಬೀದಿ ನಾಟಕವಾಗಿ ಪ್ರದರ್ಶಿಸಲಾಗಿದೆ.ಈ ಕಥೆಯು ಬಾಲ್ಯವಿವಾಹ ವಾಗಿರುವ
ಸುಳ್ಳು ಭರವಸೆಗಳು ಬಿಜೆಪಿ ಜನಪ್ರತಿನಿಧಿಗಳ ಜಾಯಮಾನ ಎಂಬುದು ಇಂದು ಜನರಿಗೆ ಅರ್ಥ ಆಗಿದೆ. ಸುರತ್ಕಲ್ ಟೋಲ್ ಗೇಟ್ ತೆರವಿಗೆ ಸಂಬಂಧಪಟ್ಟು ಜನರ ಸಹನೆ ಮುಗಿದಿದೆ. ಟೋಲ್ ಗೇಟ್ ತೆರವು ಆದೇಶ ಹೊರಡಿಸದೆ ಹಗಲು ರಾತ್ರಿ ಧರಣಿ ನಿಲ್ಲಿಸುವ ಮಾತೇ ಇಲ್ಲ. ಮಹಿಳೆಯರನ್ನು ದೊಡ್ಡ ಸಂಖ್ಯೆಯಲ್ಲಿ ಈ ಹೋರಾಟಕ್ಕಾಗಿ ಸಂಘಟಿಸಿ ಮುಂಚೂಣಿಯಲ್ಲಿ ಇರುತ್ತೇವೆ. ಹೋರಾಟ ಯಶಸ್ಸು ಕಂಡ ನಂತರವೇ ವಿಶ್ರಾಂತಿ ಎಂದು ಹೋರಾಟಗಾರ್ತಿ ಮಂಜುಳಾ ನಾಯಕ್ ಹೇಳಿದರು. ಸುರತ್ಕಲ್ ಟೋಲ್ ಗೇಟ್ ತೆರವಿಗೆ
ಮಂಗಳೂರು: ರಾಜ್ಯ ಸರಕಾರ ಮೇಲ್ಜಾತಿಯವರು ಕೇಳಿದರೆ ನಿಗಮ ಕೊಡುತ್ತಾರೆ. ಹಿಂದುಳಿದ ಈಡಿಗ-ಬಿಲ್ಲವ ಸಮುದಾಯವರು ಕೇಳಿದರೆ ಕೋಶ ಕೊಡುತ್ತಾರೆ. ಇದ್ಯಾವ ನ್ಯಾಯ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ.ಪ್ರಣವಾನಂದ ಸ್ವಾಮೀಜಿ ಪ್ರಶ್ನಿಸಿದ್ದಾರೆ.ಸರಕಾರ ನಾರಾಯಣ ಗುರು ಕೋಶ (ಕೋರ್ಪಸ್ ಫಂಡ್) ಘೋಷಿಸಿ ನೀಡಿರುವ ಆದೇಶ ಬೋಗಸ್ ಎಂದು ಸ್ವಾಮೀಜಿಯವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆದೇಶದ ಪ್ರತಿಯನ್ನು ಹರಿದು ಬಿಸಾಡಿ ಆಕ್ರೋಶ ವ್ಯಕ್ತಪಡಿಸಿದರು. ಈಡಿಗ
ತಿರುವನಂತಪುರಂ: ಬ್ರೇಕಪ್ ಮಾಡಿಕೊಳ್ಳುವಂತೆ ಹೇಳಿದರೂ ಆತ ಬ್ರೇಕಪ್ ಮಾಡಿಕೊಳ್ಳಲಿಲ್ಲ. ನನ್ನ ಜಾತಕದಲ್ಲಿ ಮೊದಲ ಗಂಡ ಸಾಯುತ್ತಾನೆ ಎಂದು ಬರೆದಿದೆ ಎಂದು ಸುಳ್ಳು ಹೇಳಿ ಅವನ ಮನಸ್ಸು ಬದಲಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ. ಆಕೆ ತೆಗೆದುಕೊಂಡ ಕೊನೆಯ ದಾರಿ ಮಾತ್ರ ಅತ್ಯಂತ ಕಠೋರವಾಗಿತ್ತು. ಕೇರಳದ ತಿರುವನಂತಪುರಂ ಮೂಲದ ಶರೋನ್ ರಾಜ್ ಎಂಬ ಯುವಕನ ನಿಗೂಢ ಸಾವು ಹೊಸ ತಿರುವು ಪಡೆದುಕೊಂಡಿದ್ದು, ಪ್ರಿಯತಮೆಯೇ ಆತನನ್ನು ಪಾನೀಯದಲ್ಲಿ ವಿಷ ಬೆರೆಸಿ ಹತ್ಯೆ




























