Home Posts tagged #v4newskarnataka (Page 99)

ಸುರತ್ಕಲ್: ಇಂದಿನಿಂದ ನವೆಂಬರ್ 3 ರವರೆಗೆ ಟೋಲ್ ಗೇಟ್ ಸುತ್ತ 144 ಸೆಕ್ಷನ್ ಜಾರಿ: ಕಮಿಷನರ್

ಮಂಗಳೂರು: ಇಂದಿನಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ

ಇಂಗ್ಲೆಂಡ್: ಬ್ರಿಟನ್’ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ.

ಇಂಗ್ಲೆಂಡ್: ಬ್ರಿಟನ್’ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಮಾಜಿ ಹಣಕಾಸು ಸಚಿವರಾಗಿದ್ದ ರಿಷಿ ಸುನಕ್ ಅವರಿಗೆ 193 ಸಂಸದರ ಬೆಂಬಲ ಲಭಿಸಿದ್ದು, ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರಿಗೆ 26 ಸಂಸದರ ಬೆಂಬಲ ದೊರೆತಿದ್ದವು. ಬ್ರಿಟನ್’ನಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿನ ಮಧ್ಯೆ 45 ದಿನಗಳ ಹಿಂದೆ ಪ್ರಧಾನಿ ಹುದ್ದೆಗೇರಿದ ಲಿಝ್ ಟ್ರಸ್ ಅವರು ದಿಢೀರ್ ಬೆಳವಣಿಗೆಯಲ್ಲಿ ಪ್ರಧಾನಿ ಹುದ್ದೆಗೆ ಕಳೆದ ವಾರ

ಪ್ರಧಾನಿ ನರೇಂದ್ರ ಮೋದಿ : ಕಾರ್ಗಿಲ್‌ಗೆ ತೆರಳಿ ಯೋಧರೊಂದಿಗೆ ದೀಪಾವಳಿ ಆಚರಣೆ

ಕಾರ್ಗಿಲ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್ ​ನಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ಗೆ ಆಗಮಿಸಿದ್ದಾರೆ. ಇನ್ನು ಮೋದಿಯರವರು 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಂತಹ ರಾಜ್ಯಗಳಲ್ಲಿ ದೀಪಾವಳಿಯಂದು

ಮಂಗಳೂರು : ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ

ವಿಶ್ವದ ಹಲವಾರು ದೇಶಗಳಲ್ಲಿ ಅಕ್ಟೋಬರ್ 25ರಂದು ಕಾಣಲಿರುವ ಸೂರ್ಯಗ್ರಹಣ, ಭಾರತದ ಭೂಭಾಗದಲ್ಲಿ ಪಾರ್ಶ್ವ ಸೂರ್ಯಗ್ರಹಣವಾಗಿ ಗೋಚರಿಸಲಿದೆ. ಮಂಗಳೂರಿನ ಆಸುಪಾಸಿನಲ್ಲಿ ಸುಮಾರು ಘಂಟೆ ಸಂಜೆ 5:09 ರಿಂದ 6:06ರ ವರೆಗೆ ಕಾಣಸಿಗುವ ಈ ಘಟನೆಯಲ್ಲಿ ಸುಮಾರು ಘಂಟೆ ಸಂಜೆ 5:50ರ ಹೊತ್ತಿಗೆ ಅತಿಹೆಚ್ಚು ಅಂದರೆ ಸೂರ್ಯನ ಬಿಂಬದ 10.9% ಶೇಕಡದಷ್ಟು ಭಾಗವನ್ನು ಮರೆಮಾಚಲಿದೆ. ಗ್ರಹಣವೀಕ್ಷಣೆ ಬರಿಗಣ್ಣಿನಿಂದ ನೋಡುವುದು ಹಾನಿಕಾರಕ. ಇದನ್ನು ದೂರದರ್ಶಕದಿಂದ (ಟೆಲೆಸ್ಕೋಪ್)

ಬಂಟ್ವಾಳ : ಕಣಜಗಳ ಹಿಂಡು ದಾಳಿ ; ಮಹಿಳೆ ಸಾವು

ಬಂಟ್ವಾಳ ತಾಲೂಕಿನಲ್ಲಿ ಕಡಜಗಳ ಹಿಂಡು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೆÇಲೀಸರು ಸೋಮವಾರ ತಿಳಿಸಿದ್ದಾರೆ ದಿನಗೂಲಿ ನೌಕರರಾದ ಮೀನಾಕ್ಷಿ ಎಂಬುವವರು ಎರಡು ದಿನಗಳ ಹಿಂದೆ ರಸ್ತೆ ಬದಿಯಲ್ಲಿ ಒಣ ಕೊಂಬೆಗಳನ್ನು ಸಂಗ್ರಹಿಸುತ್ತಿದ್ದಾಗ ಕಣಜಗಳ ದಾಳಿಗೆ ಒಳಗಾಗಿದ್ದರು. ಆಕೆ ಸಂಗ್ರಹಿಸಿದ ಕೊಂಬೆಗಳಲ್ಲಿದ್ದ ಕಡಜಗಳ ಹಿಂಡು ಆಕೆಯ ಮೇಲೆ ದಾಳಿ ನಡೆಸಿವೆ. ಕೂಡಲೇ ಸಮೀಪದ ಮನೆಗೆ ತೆರಳಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಸಮೀಪದ

ಮಂಗಳೂರು; ಕಮಿಷನರ್ ಸೀಟೇರಿದ ಮಗು

ಮಂಗಳೂರು;ಕರಾವಳಿಯ ಮಂಗಳೂರಿನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ.ಅಪಘಾತದಲ್ಲಿ ಮೃತ ಪೊಲೀಸ್ ಅಧಿಕಾರಿಯ ಮಗಳನ್ನು ಕಮಿಷನರ್ ಶಶಿಕುಮಾರ್ ತನ್ನ ಕುರ್ಚಿಯಲ್ಲಿ ಕೂರಿಸಿ ಗೌರವಿಸುವ ಮೂಲಕ ಪ್ರಸಂಸೆಗೆ ಪಾತ್ರರಾಗಿದ್ದಾರೆ. 2016-17ರ ವೇಳೆಯಲ್ಲಿ ಮಂಗಳೂರಿನಲ್ಲಿ ರವಿಕುಮಾರ್ ಎಂಬವರು ಎಎಸ್ಪಿಯಾಗಿದ್ದರು.ಮಂಗಳೂರು ಎಸಿಪಿ ಆಗಿದ್ದ ರವಿ ಕುಮಾರ್ 2017ರಲ್ಲಿ ಮೈಸೂರಿಗೆ ಲೋಕಾಯುಕ್ತ ಎಸ್ಪಿ ಆಗಿ ಬಡ್ತಿ ಹೊಂದಿ ವರ್ಗಾವಣೆಗೊಂಡಿದ್ದರು.ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ

ಪ್ರತಿಭಾ ಕುಳಾಯಿ ವಿರುದ್ದ ಅಶ್ಲೀಲ ಬರಹ ಪೋಸ್ಟ್ ಹಾಕಿದವರು ವಿರುದ್ದ ಕ್ರಮ ಕೈಗೊಳ್ಳುತ್ತೇವೆ : ಕಮೀಷನರ್

ಮಂಗಳೂರು; ಸಾಮಾಜಿಕಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಾಕಾರಿ ಹಾಗೂ ಅಶ್ಲೀಲವಾಗಿ ಪೆÇೀಸ್ಟ್ ಹಾಕಿದ ಆರೋಪಿಗಳನ್ನು ಶೀಘ್ರವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸತ್ತೇವೆ ಎಂದುಮಿಷನರ್ ಶಶಿಕುಮಾರ್ ತಿಳಿಸೊದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಹೋರಾಟ ಎರಡು ಮೂರಿ ದಿನದ ಹಿಂದೆ ನಡೆದಿತ್ತು, ಈ ವೇಳೆ ಮಹಿಳಾ ಹೋರಾಟಗಾರರ ಪೋಟೋಗೆ ಅಶ್ಲೀಲವಾಗಿ ಬರಹ, ಪೋಸ್ಟ್ ಬಗ್ಗೆ ದೂರುದಾಖಲಾಗಿದೆ. ಇದರಿಂದ ಅವರ ಗೌರವಕ್ಕೆ ಧಕ್ಕೆ ಬರುವುದು,ಸಾಮಾಜಿಕ

ನಾನೇ ನಾಗವಲ್ಲಿ, ಮೊನ್ನೆ ನೋಡಿದ್ದು ಕಾಂತಾರ ಪಾರ್ಟ್ 2 ಅಲ್ಲ 3″

ಸುರತ್ಕಲ್: “ನಾನೇ ಒರಿಜಿನಲ್ ನಾಗವಲ್ಲಿ, ಮೊನ್ನೆ ಸುರತ್ಕಲ್ ಟೋಲ್ ಗೇಟ್ ಬಳಿ ನೀವು ನೋಡಿದ್ದು ಕಾಂತಾರ ಚಿತ್ರದ ಎರಡನೇ ಭಾಗವಲ್ಲ ಮೂರನೇ ಭಾಗ” ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಮಾಧ್ಯಮಗಳ ಮುಂದೆ ಹೇಳಿದರು. ಸುರತ್ಕಲ್ ಟೋಲ್ ವಿರೋಧಿ ಪ್ರತಿಭಟನೆ ಸಂದರ್ಭದ ತಮ್ಮ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾಗಳ ಟೈಟಲ್ ಕೊಟ್ಟು ಟ್ರೋಲ್ ಮಾಡಲಾಗುತ್ತಿದ್ದು ಈ ಕುರಿತು ಮಾತಾಡಿದ ಪ್ರತಿಭಾ ಅವರು, “ಟ್ರೋಲ್ ಒಳ್ಳೆಯದು,

ಬಂಟ್ವಾಳ ಮಣಿಹಳ್ಳದಲ್ಲಿ ಸರಣಿ ಅಪಘಾತ: ಮೆಸ್ಕಾಂ ಎಇಇ ಪ್ರವೀಣ್ ಜೋಶಿ ಮೃತ್ಯು

ಬಂಟ್ವಾಳ: ಮಣಿಹಳ್ಳದಲ್ಲಿ ಕಾರು ಮತ್ತು ಬಸ್ಸಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂನ ಎಇಇ ಪ್ರವೀಣ್ ಜೋಶಿ ಅವರು ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ಎರಡು ಕಾರು ಹಾಗೂ ಬಸ್‍ಗಳ ನಡುವೆ ಅಪಘಾತ ನಡೆದಿದ್ದು, ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ವಗ್ಗದ ಮದ್ವ ಮನೆಯಿಂದ

ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಸ್ಪೂರ್ತಿಯನ್ನು ತುಂಬುತ್ತದೆ : ಪ್ರತಿಭಾ ಕುಳಾಯಿ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಮಂಗಳೂರಿನ ಮಹಾಜನಗಳೇ ನೀವು ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಇನ್ನಷ್ಟು ನಿಮ್ಮ ಪರವಾಗಿ ನಿಲ್ಲಲು ಮತ್ತು ಸಾಮಾಜಿಕ ಹೋರಾಟಗಳಲ್ಲಿ