Home Posts tagged #v4newskarnataka (Page 99)

5G ವಂಚಕರ ಬಗ್ಗೆ ಇರಲಿ ಎಚ್ಚರ : ಓಟಿಪಿ ನೀಡಿ ವಂಚನೆಗೊಳ್ಳಬೇಡಿ

5G ಅಥವಾ 5 ನೇ ಜನರೇಷನ್ನಿನ ಮೊಬೈಲ್ ನೆಟ್ ವರ್ಕ್ ಕೇವಲ ಇಂಟರ್ನೆಟ್ ಸ್ಪೀಡ್ ನ್ನು ಮಾತ್ರವೇ ಅಪ್ ಗ್ರೇಡ್ ಮಾಡುವುದಿಲ್ಲ ಬದಲಾಗಿ ಇದು ಮುಂದಿನ ಜನರೇಷನ್ನಿನ ಟೆಕ್ನಾಲಜಿಯನ್ನು ಡ್ರೈವ್ ಮಾಡುತ್ತದೆ. ಇದೀಗ 5G ಯಲ್ಲಿ ಕೆಲ ಸೈಬರ್ ಹ್ಯಾಕರ್’ಗಳು ಕೂಡ ಹೊಸ ರೀತಿಯ ವಂಚನೆಗೆ ಮುಂದಾಗಿದ್ದಾರೆ. ಈ ಹೊಸ ರೂಪದ ಸೈಬರ್ ಕ್ರೈಮ್ಗೆ ಬಲಿಯಾಗಬೇಡಿ ಎಂದು ತಜ್ಞರು

ಮಹಾರಾಷ್ಟ್ರ: ಟ್ರಕ್‌ ಹಾಗೂ ಬಸ್ ಅಪಘಾತ: ಬೆಂಕಿ ಹೊತ್ತಿ 10 ಮಂದಿ ಸಜೀವ ದಹನ, 24 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಸಂಭವಿಸಿದ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಲೀಪರ್ ಕೋಚ್ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ನಂದೂರ್ ನಾಕಾ ಎಂಬಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಕೆಲವೇ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ:ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮವನ್ನು ನಗರದ ತುಳು ಭವನದಲ್ಲಿ ಆಯೋಜಿಸಲಾಗಿತ್ತು. ಮಂಗಳೂರಿನ ಉರ್ವಸ್ಟೋರಿನ ತುಳಭವನದಲ್ಲಿ ಸಿರಿ ಚಾವಡಿಯಲ್ಲಿ ನಾಟಕಕಾರ , ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮದ ಪ್ರಯಕ್ತ ಅವರ ಭಾವಚಿತ್ರಕ್ಕೆ ಗಣ್ಯರು ಪುಪ್ಪನಮನ ಸಲ್ಲಿಸಿದರು. ಇನ್ನು ಸಭಾ ಕಾರ್ಯಕ್ರಮವನ್ನು ಪ್ರಪುಲ್ಲ

ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭ

ರಾಷ್ಟ್ರೀಯ ಹೆದ್ದಾರಿ 66ರ ನಾಯ್ಕನಕಟ್ಟೆ ಸರ್ಕಲ್ ಬಳಿ ನೂತನವಾಗಿ ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ತರಹದ ಕಂಪನಿ ಮೊಬೈಲಗಳು ಹಾಗೂ ವಿವಿಧ ಕಂಪನಿಯ ಮೊಬೈಲ್ ರೀಚಾರ್ಜ್‍ಗಳು ಸಿಮ್ ಕಾರ್ಡ್‍ಗಳು, ಗ್ರಾಹಕರಿಗೆ ಪಾನ್ ಕಾರ್ಡ್, ಲ್ಯಾಂಡ್ ಲಿಂಕ್ಸ್, ವಿವಿಧ ಕಂಪನಿಯ ಮೋಟಾರ್ ಸೈಕಲ್‍ಗಳು, ಮಿನಿ ಎಟಿಎಂ ಇನ್ನಿತರ ಎಲ್ಲಾ ಗ್ರಾಹಕರಿಗೆ ಬೇಕಾಗುವ ಸೌಲಭ್ಯಗಳು ಸಿಗುತ್ತದೆ

ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು :ಎನ್. ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

“ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಂದ ಕೇವಲ ಕೆಲಸ ಮಾಡಿಸಲು ಇರುವುದಲ್ಲ. ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳು ಸಾಮಾಜಿಕವಾಗಿ ತಾವು ಹೇಗೆ ಬದುಕಬೇಕು, ಜೀವನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ಮೆಟ್ಟಿ ನಿಲ್ಲುವುದು, ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು, ಸಹಬಾಳ್ವೆಯ ಮಹತ್ವ ಮೊದಲಾದವುಗಳನ್ನು ತಿಳಿಸಿಕೊಡುತ್ತದೆ. ಒಟ್ಟಿನಲ್ಲಿ ವಿದ್ಯಾರ್ಥಿಯ ವ್ಯಕ್ತಿತ್ವದ ಸರ್ವತೋಮುಖ ಅಭಿವೃದ್ಧಿಗೆ ಎನ್‍ಎಸ್‍ಎಸ್ ದಾರಿದೀಪವಾಗಬಲ್ಲ ಜೀವನ

ಬೈಂದೂರು ಶ್ರೀ ಭದ್ರಕಾಳಿ ದೇವಸ್ಥಾನ ಚಣಕ್ಕಳಿ ಬಡಾಕೆರೆ ಶರನ್ನವರಾತ್ರಿ ಉತ್ಸವ

ಬೈಂದೂರು ತಾಲೂಕಿನ ಸುಪ್ರಸಿದ್ಧ ದೇವಸ್ಥಾನ ಶ್ರೀ ಭದ್ರಕಾಳಿ ದೇವಸ್ಥಾನ ಚಣಕ್ಕಳಿ ಬಡಾಕೆರೆ ಇಂದು ವಿಜಯ ದಶಮಿ ಪ್ರಯುಕ್ತ ಮಂಜುನಾಥ್ ಅಡಿಗ ಬಡಾಕೆರೆ ಇವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನದ ಮೂಲಕ ಇಂದು ದೇವಿಯ ಸನ್ನಿಧಾನದಲ್ಲಿ ದುರ್ಗಾ ಹೋಮ ವಿಶೇಷ ಮಹಾಪೂಜೆ ಅನ್ನದಾನ ಸೇವೆ ಸಂಪನ್ನಗೊಂಡಿದೆ. ಸಂಜೆ 6:00 ರಿಂದ 8.30 ರವರೆಗೆ ಶ್ರೀ ರಾಮ ಭಜನಾ ಮಂಡಳಿ ಬಡಾಕೆರೆ ಇವರಿಂದ ಭಜನಾ ಕಾರ್ಯಕ್ರಮವು ಅದ್ದೂರಿನಿಂದ ನಡೆದಿದೆ. ಈ ಸಂದರ್ಭದಲ್ಲಿ ಸಂತೋಷ್ ಮೊಗವೀರ

ಪ್ರಸಿದ್ಧ ವೈದ್ಯ ಡಾ. ಸುರೇಶ್ ಸುರತ್ಕಲ್ ನಿಧನ

ಪ್ರಸಿದ್ಧ ವೈದ್ಯ ಡಾ. ಸುರೇಶ್ ಸುರತ್ಕಲ್ ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಜ್ಞ ವೈದ್ಯರಾಗಿ ಜಿಲ್ಲೆಯಲ್ಲಿಯೇ ಪ್ರಸಿದ್ಧ ರಾಗಿದ್ದರು. ಕೋವಿಡ್ ಸಂದರ್ಭದಲ್ಲಿಯೂ ಜೀವನದ ಹಂಗು ತೊರೆದು ಅನೇಕ ಮಂದಿಗೆ ಚಿಕಿತ್ಸೆ ನೀಡಿ ಮಾದರಿಯಾಗಿದ್ದರು. ಅವರು ಸುರತ್ಕಲ್‍ನಲ್ಲಿ ತನ್ನ ತಾಯಿಯ ಹೆಸರಿನಲ್ಲಿ ಆರಂಭಿಸಿದ್ದ ಸುಸಜ್ಜಿತ ಪುಷ್ಪಾ ಕ್ಲಿನಿಕ್ ಮತ್ತು ಡಯಾಗ್ನೋಸಿಸ್ ಸೆಂಟರ್ ಆರಂಭಿಸಿ ಸುಮಾರು 5 ದಶಕಗಳಿಂದ ಅದನ್ನು

ಪಿಲಿಕುಳ‌ : ಇರುವೆಗಳಿಂದ ಹಾನಿಗೊಳಗಾಗಿದ್ದ ಹಾವು ಸುರಕ್ಷಿತ

ಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ಪಿಲಿಕುಳ‌ ಜೈವಿಕ ಉದ್ಯಾನವನದಲ್ಲಿ ಹಾವೊಂದಕ್ಕೆ ಇರುವೆಗಳ ಹಿಂಡು ಕಾಟ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಸ್ವತಃ ಪಿಲಿಕುಳದ ನಿರ್ದೇಶಕರೇ ಸ್ಪಷ್ಟನೆ ನೀಡಿದ್ದು, ‘ಇರುವೆಯ ಕಿರುಕುಳಕ್ಕೊಳಗಾಗಿದ್ದ ಹಾವು ಸುರಕ್ಷಿತವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ಪಿಲಿಕುಳ‌ ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ, ಮಾತನಾಡಿ ವಿಡಿಯೋ ವೈರಲ್ ಆಗಿರುವ ಬಗ್ಗೆ

ಉತ್ತರಕಾಶಿ : ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತ

ಉತ್ತರಕಾಶಿಯಲ್ಲಿ ನಡೆದ ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.  ಹಿಮಪಾತ ಅಪಘಾತದ ಮೂರನೇ ದಿನ ಎಲ್ಲಾ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.ಈಗಾಗಲೇ  ರಕ್ಷಣಾ ತಂಡವು  19 ಪರ್ವತಾರೋಹಿಗಳ ಮೃತದೇಹಗಳನ್ನು ಹೊರತೆಗೆದಿದ್ದು ಇನ್ನುಳಿದವರ ಶೋಧ ಕಾರ್ಯ ಹೆಲಿಕಾಪ್ಟರ್‌ ಮೂಲಕ  ಮುಂದುವರಿದಿದೆ. ಹಿಮಪಾತದ ತೀವ್ರತೆಯಿಂದ  ಗುರುವಾರ ಮಧ್ಯಾಹ್ನದ ನಂತರ  ರಕ್ಷಣಾವನ್ನು

ಪಿಲಿಕುಳ ನಿಸರ್ಗಧಾಮ : ಹಾವಿನ ಕೋಣೆಯೊಂದರಲ್ಲಿ ಕಚ್ಚುವ ಇರುವೆ ಪ್ರತ್ಯಕ್ಷ

ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಹಾವೊಂದರ ಕೋಣೆ ತುಂಬಾ ಕಚ್ಚುವ ಇರುವೆಗಳು ಸೃಷ್ಠಿಯಾಗಿದ್ದು ಇದರಿಂದ ಹಾವು ನರಕ ಅನುಭವಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಲಿಕುಳ ನಿಸರ್ಗಧಾಮದಲ್ಲಿರುವ ಹಾವೊಂದು ಇರುವೆಗಳು ಕಚ್ಚಿ ನೋವನ್ನು ಅನುಭವಿಸುತ್ತಿರುವ ದೃಶ್ಯವನ್ನು ಪಿಲಿಕುಳಕ್ಕೆ ಭೇಟಿ ಕೊಟ್ಟ ಪ್ರವಾಸಿಗರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟಿದ್ದಾರೆ. ಪಿಲಿಕುಳದಲ್ಲಿ ಪ್ರವಾಸಿಗರ ವೀಕ್ಷಣೆಗೆ