ಮಂಗಳೂರು ಮಹಾನಗರ ಪಾಲಿಕೆ ಆನ್ಲೈನ್ ನಲ್ಲಿ ಉದ್ದಿಮೆ ಪರವಾನಿಗೆ, ಆಸ್ತಿ ತೆರಿಗೆ ಆರಂಭಿಸಿದ ಬಳಿಕ ಇ-ಖಾತಾ ನೀಡಿಕೆಯನ್ನು ಡಿಎಂಡಿಎಸ್ನಿಂದ ಇ-ಗವರ್ನೆನ್ಸ್ಗೆ ವರ್ಗಾಯಿಸಿ ಇನ್ನಷ್ಟು ಸರಳೀಕರಣ ಮಾಡಲಾಗಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. 2020ರಲ್ಲಿ ಜಾರಿಗೆ ಬಂದ ಇ-ಖಾತಾದಲ್ಲಿ ಕೆಲವೊಂದು ತಾಂತ್ರಿಕ ಆಡಚಣೆ
ಮೂಡುಬಿದಿರೆ: ಮಾರೂರು ಗ್ರಾಮದಲ್ಲಿ 36 ಫಲಾನುಭವಿಗಳ ಪೈಕಿ 30 ಫಲಾನುಭವಿಗಳಿಗೆ ನಿವೇಶನ ಹಂಚಿಕೆಯಾಗಿ ಉಳಿದ 6 ಫಲಾನುಭವಿಗಳ ಅರ್ಜಿಯನ್ನು ತಡೆಹಿಡಿದ ಮಂಗಳೂರಿನ ಹೌಸಿಂಗ್ ಕನ್ಸಲ್ಟೆಂಟ್ ಅಧಿಕಾರಿ ಗಿರೀಶ್ ಅವರನ್ನು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡು ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಿಕೊಡುವಂತೆ ಸೂಚಿಸಿದರಲ್ಲದೆ ಈ ವಿಷಯವನ್ನು ನೀವು ಕೂಡ ಫಾಲೊಅಪ್ ಮಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಇಂದು ಅವರಿಗೆ
ದೇಶದ ಐಕ್ಯತೆಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರು ವಯನಾಡು ಸಂಸದರು ರಾಹುಲ್ ಗಾಂಧೀಜಿಯವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 6 ತಿಂಗಳ ಕಾಲ ಸುಮಾರು 3574 ಕಿಮೀ ಭಾರತ ಐಕ್ಯತಾ ಯಾತ್ರೆ ಪಾದಯಾತ್ರೆ ಇಂದು ಕನ್ಯಾಕುಮಾರಿಯಿಂದ ಪ್ರಾರಂಭಗೊಂಡಿದೆ. ಈ ಯಾತ್ರೆಯ ಯಶಸ್ಸಿಗಾಗಿ ಸರ್ವ ಧರ್ಮಗಳ ಪ್ರಾರ್ಥನಾ ಕೇಂದ್ರಗಳಲ್ಲಿ ಪ್ರಾರ್ಥಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಡಿ ಕೆ ಶಿವಕುಮಾರ್ ಸೂಚನೆ ಮೇರೆಗೆ
ಸೇವಾಸಾಗರ ಟ್ರಸ್ಟ್ ಸಾಗರದ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಜನರ ಸೇವೆಗಾಗಿ ಸೇವಸಾಗರ ಟ್ರಸ್ಟ್ ಮುಂದೆ ಬಂದಿದ್ದು, ಇದೀಗ ನೂತನ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಹೆಚ್ ಹರತಾಳು ಹಾಲಪ್ಪ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹರಾದ ಪಟ್ಟಾಭಿರಾಮ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಸ್
ಓಣಂ ಹಬ್ಬ ಕೇರಳದ ಜನರ ಪ್ರೀತಿಯ ಹಬ್ಬ,ಎಲ್ಲೆಡೆಯು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದ್ದು, ಮಂಜೇಶ್ವರದಲ್ಲಿರುವ ಓಷಿಯನ್ ಎಂಪೈರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಸಂಸ್ಕೃತಿ, ಸಂಪ್ರದಾಯದ ಪ್ರತಿರೂಪವೇ ಓಣಂ ಹಬ್ಬ. ಕೇರಳದ ಜನತೆ ಬಹಳ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಓಣಂ ಅನೇಕ ಆಸಕ್ತಿದಾಯಕ ಆಚರಣೆಗಳನ್ನು ಹೊಂದಿದೆ. ಅತ್ಯಂತ ವರ್ಣರಂಜಿತ ಓಣಂ ಆಚರಣೆಗಳಲ್ಲಿ ಒಂದು ಹೂವಿನ ರಂಗೋಲಿಗಳು
ವೈದ್ಯರ ಕಾರ್ಯ ವೈಖರಿಯನ್ನು ಗಮನಿಸಿ ಲಯನ್ಸ್ ಕ್ಲಬ್ ನಾವುಂದ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಆಯುರ್ವೇದಿಕ್ ಚಿಕಿತ್ಸಾಲಯ ಇಲ್ಲಿನ ಪಿಹೆಚ್ಸಿ ವೈದ್ಯರಾದ ವಿನಯ ವೈದ್ಯ ಸಾಕ್ಷಿಯಾಗಿದ್ದಾರೆ. ನಾಲ್ಕೈದು ಗ್ರಾಮಕ್ಕೆ ವಿನಯ ಡಾಕ್ಟರ್ ಎಂದರೆ ಹೆಸರುವಾಸಿ ನಗುಮುಖದಿಂದ ಚಿಕಿತ್ಸೆ ನೀಡುವ ವ್ಯಕ್ತಿತ್ವದ್ದು ಇವರದ್ದು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಲಯನ್ಸ್
ಮೂಡುಬಿದಿರೆಯ ನಿತ್ಯ ಸಹಾಯ ಮಾತಾ ದೇವಾಲಯ ಗಂಟಾಲ್ ಕಟ್ಟೆ ಇಲ್ಲಿ ಮೊಂತಿ ಫೆಸ್ತ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚರ್ಚಿನ ಧರ್ಮಗುರು ರೆ/ಫಾ ರೊನಾಲ್ಡ್ ಡಿ’ಸೋಜಾ ಹಾಗೂ ಅತಿಥಿ ಧರ್ಮಗುರು ರಾಕೇಶ್ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಹಬ್ಬದ ಸಂದೇಶವನ್ನು ನೀಡಿದರು. ನಂತರ ಮನೆ ಮನೆಗೆ ಭತ್ತವನ್ನು ನೀಡಲಾಯಿತು. ಧರ್ಮಗುರು ರಾಕೇಶ್ ಮಥಾಯಿಸ್ ಭಾಗವಹಿಸಿದ್ದರು.
ಉಜಿರೆ, ಸೆ.6: ಧಾರವಾಡವನ್ನು ಕಾರ್ಯಕ್ಷೇತ್ರವನ್ನಾಗಿಸಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸುತ್ತ, ಉತ್ತರ ಕರ್ನಾಟಕ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ನಡುವೆ ಕೊಂಡಿಯಾಗಿ, ಜನಾನುರಾಗಿಯಾಗಿ ಬಾಳಿದವರು ಡಾ. ನ. ವಜ್ರಕುಮಾರ್ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎ. ಜಯ ಕುಮಾರ ಶೆಟ್ಟಿ ಹೇಳಿದರು. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ, ಇತ್ತೀಚೆಗೆ ನಿಧನರಾದ ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಹಾಗೂ
ಬೆಂಗಳೂರು, ಸೆ, 7; ಶಿಕ್ಷಣ ತಜ್ಞ, ಕರ್ಮಯೋಗಿ ಎಂ.ಎಸ್. ರಾಮಯ್ಯ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಟೂರ್ನಿ ಯಶಸ್ವಿಯಾಗಿ ನಡೆಯಿತು. ಬೆಂಗಳೂರು ಗ್ರಾಮೀಣ ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ನಿಂದ ಆಯೋಜಿಸಲಾಗಿದ್ದ ಟೇಬಲ್ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ಹಾಗೂ 17 ವಯೋಮಿತಿ ಬಾಲಕಿಯರ ವಿಭಾಗದಲ್ಲಿ ದೇಶ್ನಾ ಎಂ ವೆಂಕಟೇಶ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಬಾಲಕರ 17 ವಯೋಮಿತಿಯೊಳಗಿನ ವಿಭಾಗದಲ್ಲಿ
ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯು ಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಪ್ರತಿಭಟನೆ ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ವತಿಯಿಂದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಂಭಾಗ ನಡೆಯಿತು. ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ