Home Posts tagged #v4stream (Page 119)

ಕಡಬ : ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕಡಬದಲ್ಲಿ ನಡೆದಿದೆ. ಕುಂತೂರು ಕಾಲಾಯಿಲ್ ನಿವಾಸಿ ಮನೋಜ್(43) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಮನೋಜ್ ಅವರು ಮರದ ಕೊಂಬೆಯೊಂದು ಕಡಿಯುವಾಗ 33 kv ವಿದ್ಯುತ್ ತಂತಿ ತಾಗಿ ದುರ್ಮರಣ ಸಂಭವಿಸಿದೆ. ಮನೋಜ್ ಮೃತದೇಹ ಮರದಲ್ಲೇ ನೇತಾಡುತ್ತಿತ್ತುಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು,

ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆ, ಎಸ್ ಡಿ ಎಂ ಗೆ ಸಮಗ್ರ ಪ್ರಶಸ್ತಿ

ಬೆಂಗಳೂರಿನ ಆಕ್ಸ್ಫರ್ಡ್ ಕಾನೂನು ಕಾಲೇಜಿಸಲಾಗಿದ್ದ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆಯಲ್ಲಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಥೇಶ್ವರ ಕಾನೂನು ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ ಲಭಿಸಿದೆ.ಸೆ.1 ರಿಂದ 3ರ ವರೆಗೆ ನಡೆದಿದ್ದ ಈ ಸ್ಪ ರ್ಧೆಯಲ್ಲಿ ಎಸ್ ಡಿ ಎಂ ಕಾನೂನು ಕಾಲೇಜಿನ ವಿದ್ಯಾಥಿಗಳಾದ ಸಚಿನ್ ಹೆಗ್ಡೆ, ವಿನೀತ್ ಹಾಗೂ ಮಯೂರ್ ಅವರು ಭಾಗವಹಿಸಿ ವಿವಿಧ ವಿಭಾಗಳಲ್ಲಿ ವಿಜೇತರಾಗಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಎಂ. ಅತ್ಯತ್ತಮ

ಮೂಡುಬಿದಿರೆಯ ವಾಲ್ಪಾಡಿಯಲ್ಲಿ ಸೋಣದ ಕೋಲ

ಮೂಡುಬಿದಿರೆ : ತಾಲೂಕಿನ ವಾಲ್ಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ವಾಲ್ಪಾಡಿ ಗ್ರಾಮದಲ್ಲಿ ಶ್ರೀ ರಾಜಂದೈವ ಮತ್ತು ಬ್ರಹ್ಮ ಬೈದರ್ಕಳ ದೈವಸ್ಥಾನ ಇಲ್ಲಿ ಮಂಗಳವಾರ ಕೊಡಮಣಿತ್ತಾಯ ಮತ್ತು ಕುಕ್ಕಿನಂತ್ತಾಯ ದೈವಗಳಿಗೆ ಸೋಣದ ಕೋಲ ನಡೆಯಿತು. ಸುಮಾರು 105 ವರ್ಷಗಳ ಇತಿಹಾಸವಿರುವ ಈ ದೈವಸ್ಥಾನವನ್ನು ಏಳ್ನಾಡು ಗುತ್ತಿನವರು ಕಟ್ಟಿ ಬೆಳೆಸಿದ್ದರು. ನಂತರ ನಾಗಣ್ಣ ಹೆಗ್ಡೆ ಅವರ ಅವರ ನೇತೃತ್ವದಲ್ಲಿ ಪುನರ್ ನಿರ್ಮಾಣಗೊಂಡಿದ್ದು ಕಳೆದ 10 ವರ್ಷಗಳಿಂದ ಇಲ್ಲಿ ಸೋಣದ ಕೋಲ

ಆತ್ರಾಡಿ ಗ್ರಾ.ಪಂ ಸದಸ್ಯನಿಂದ ಮಹಿಳೆ ಮತ್ತಾಕೆಯ ಮಗಳ ಮೇಲೆ ಹಲ್ಲೆ!

ಉಡುಪಿ: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯನೋರ್ವ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿವಾಗಿ ಹಲ್ಲೆ ನಡೆಸಿದ ಪ್ರಸಂಗ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಆತ್ರಾಡಿ ಪರೀಕದ ಪಡುಮನೆ ನಾಗಬನ ನಿವಾಸಿ ಆರತಿ (45) ಹಲ್ಲೆಗೊಳಗಾದ ಮಹಿಳೆಯಾಗಿದ್ದು,ಆರತಿಯವರ ಹೆಸರಿನಲ್ಲಿರುವ ಜಾಗದಲ್ಲಿ ಆತ್ರಾಡಿ ಗ್ರಾಮ ಪಂಚಾಯತ್ ವಿರೋಧದ ನಡುವೆಯೂ ಕಾಂಕ್ರೀಟ್

ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ

ಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿಯವರು ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದಿನ ಪೂರ್ತಿ ಚೆನ್ನಾಗಿಯೇ ಇದ್ದ ಉಮೇಶ್ ಕತ್ತಿ, ಬೆಂಗಳೂರಿನ ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದಿದ್ದರು. ಆದರೆ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಅಲ್ಲಿಯೇ ಹತ್ತಿರದಲ್ಲಿದ್ದ ಎಂಎಸ್ ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಕರ್ನಾಟಕ ರಾಜ್ಯ ರೈತಸಂಘ : ಪಾಣೆಮಂಗಳೂರು ಗ್ರಾಮ ರೈತ ಘಟಕ ರಚನೆ ಕುರಿತಾಗಿ ಪೂರ್ವಭಾವಿ ಸಭೆ

ಪಾಣೆಮಂಗಳೂರು ಗ್ರಾಮ ರೈತ ಘಟಕ ರಚನೆ ಕುರಿತಾಗಿ ದಿನಾಂಕ 06-09-2022ರ ಮಂಗಳವಾರ ಮೇಲ್ಕಾರಿನ ಬಿರ್ವ ಸಂಕೀರ್ಣದ ಸಭಾಭವನದಲ್ಲಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪ್ರೇಮನಾಥ ಶೆಟ್ಟಿ ಬಾಳ್ತಿಲ ಇವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತುರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರವಿಕಿರಣ್ ಪುಣಚ ಪ್ರಾಸ್ತವಿಕವಾಗಿ ಮಾತಾನಾಡಿ ರೈತಸಂಘದ ಹುಟ್ಟು ,ಸೈದ್ಧಾಂತಿಕ ಹಿನ್ನೆಲೆ, ವೈಚಾರಿಕತೆ, ಮತ್ತು ಮುಂದಿನ ಗುರಿಗಳ

ಬೆಳ್ಳಾರೆ : ಮನೆಗೆ ಬೆಂಕಿ ಬಿದ್ದು ಮನೆ ಯಜಮಾನ ಜೀವಂತ ದಹನ

ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ. ಇಂದು ಬೆಳಿಗ್ಗೆ ಸುಧಾಕರರು ಮನೆಯಲ್ಲಿ ಮಲಗಿದ್ದು, ಪತ್ನಿ ಟ್ಯಾಪಿಂಗ್‌ಗೆಂದು ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ಹೊತ್ತಿನಲ್ಲಿ ಬೆಂಕಿ ಮನೆಯ ಒಂದು

ಸುಬ್ರಹ್ಮಣ್ಯ: ಕುಲ್ಕುಂದಲ್ಲಿ ರಸ್ತೆ ಕಾಮಗಾರಿಗೆ ಸಚಿವ ಅಂಗಾರರಿಂದ ಗುದ್ದಲಿ ಪೂಜೆ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರು ಕುಲ್ಕುಂದದಲ್ಲಿ ಇಂದು 22 ಕೋಟಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಯ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ಉಡುಪಿ ರಾಜ್ಯ ಹೆದ್ದಾರಿ 37ರ ಕುಲ್ಕುಂದದಿಂದ ವೆಂಕಟಪುರ ಮತ್ತು ಕೈಕಂಬದಿಂದ ನೆಟ್ಟಣ ಒಟ್ಟಾಗಿ 7.08

ದುಬೈನಲ್ಲಿ ಈ-ಮಣ್ಣು ಚಲನಚಿತ್ರ ಪ್ರದರ್ಶನ

ಈ-ಮಣ್ಣು ಚಲನ ಚಿತ್ರವನ್ನು ದುಬೈನ ಗಲೇರಿಯಾ ಚಿತ್ರಮಂದಿರದಲ್ಲಿ ವಿಶೇಷ ಅತಿಥಿಗಳನ್ನು ಆಹ್ವಾನಿಸಿ ಪ್ರದರ್ಶಿಸಿದ್ದು, ಯು.ಎ.ಇ.ಕನ್ನಡಿಗರಲ್ಲಿ ಸಡಗರ ಮೂಡಿಸಿತ್ತು. ಹೃದಯ ಸ್ವರ್ಶಿ ಮತ್ತು ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಈ ಚಲನಚಿತ್ರವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಶಿವಧ್ವಜ್ ಶೆಟ್ಟಿ ನಿರ್ದೇಶಿಸಿದ್ದು, ದುಬೈನ ಅನಿವಾಸಿ ಕನ್ನಡಿಗ ಈಶ್ವರಿದಾಸ್ ಶೆಟ್ಟಿ ನಿರ್ಮಿಸಿದ್ದಾರೆ. ಈ ಚಲನಚಿತ್ರದ ಕನ್ನಡ ಭಾಷೆ ಮತ್ತು ಲಾಭ ರಹಿತ ಪ್ರದರ್ಶನಕ್ಕೆ

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ರಾಷ್ಟ್ರೀಯತೆಯ ಅರಿವು ಮೂಡಲು ಸಾಧ್ಯ : ಶಾಸಕ ಉಮಾನಾಥ ಕೋಟ್ಯಾನ್

ಮೂಡುಬಿದಿರೆ : ಪ್ರತಿಯೊಬ್ಬ ಮಗುವಿನಲ್ಲೂ ಅದರದ್ದೇ ಆದ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಹೊರಗೆಳೆಯುವ ಪ್ರಯತ್ನವನ್ನು ಶಿಕ್ಷಕರು ಮಾಡಬೇಕಾಗಿದೆ. ನಮ್ಮ ಉಸಿರು ಇರುವವರೆಗೆ ನಾವು ವಿದ್ಯಾರ್ಥಿಗಳೇ. ಹಾಗಾಗಿ ನಾವು ನಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಿದಾಗ ಸಮಾಜಕ್ಕೆ ಉತ್ತಮವಾದ ಕೊಡುಗೆಯನ್ನು ನೀಡಿದಂತ್ತಾಗುತ್ತದೆ. ಅಲ್ಲದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದಿಂದ ರಾಷ್ಟ್ರೀಯತೆಯ ಅರಿವು ಮೂಡಲು ಸಾಧ್ಯ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್