Home Posts tagged #v4stream (Page 199)

ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ ನಿಧನ

ಬಂಟ್ವಾಳ : ಪತ್ರಕರ್ತ,ಸಾಹಿತಿ ಫಾರೂಕ್ ಗೂಡಿನಬಳಿ( 38) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದರು. ಪಾಣೆಮಂಗಳೂರು ಸಮೀಪದ ಗೂಡಿನಬಳಿ ನಿವಾಸಿಯಾಗಿರುವ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ಸರಳವಾಗಿ ಗಾಂಧಿ ಜಯಂತಿ ಆಚರಣೆ

ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ನಗರದ ಗಾಂಧಿ ಪಾಕ್೯ನಲ್ಲಿ ಅ.2 ರ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗಾಂಧಿ ಪ್ರತಿಮೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ,  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಸ್ಪಿ ಋಷಿಕೇಷ್ ಭಗವಾನ್ ಸೋನಾವಣೆ,

ಗೋವು ಕಳ್ಳತನದ ವಿರುದ್ಧ ಹಿಂಜಾವೇ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಗೋವು ಕಳ್ಳತನದ ವಿರುದ್ಧ ಹಿಂದು ಜಾಗರಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು. ಹಿಂದುಗಳ ಧಾರ್ಮಿಕ ನಂಬಿಕೆಗಳ ಪ್ರಕಾರ ಗೋವು ಆರಾಧ್ಯ ದೇವತೆ ಯಾಗಿದ್ದು ಗೋಮಾತೆ ಎಂದು ಕರೆಯಲ್ಪಡುತ್ತದೆ, ಅಂತಹ ಗೋಮಾತೆಯನ್ನು ಹಿಂಸಾತ್ಮಕವಾಗಿ ಕೊಂದು ಅದನ್ನು ಚಿತ್ರಿಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಹಿಂದುಗಳ ಭಾವನೆಗಳನ್ನು ಕೆರಳಿಸುವ ಕೆಲಸ ನಡೆಯುತ್ತಿದೆ. ಹಲವಾರು ಬಾರಿ ದೂರು ನೀಡಿದರೂ

ಅನೈತಿಕ ಪೊಲೀಸ್ ಗಿರಿ ವಿರುದ್ಧ ಯುವಜನತೆ ಧ್ವನಿ ಎತ್ತಬೇಕಾಗಿದೆ : ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ

ದ.ಕ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ದ್ವೇಷದ ರಾಜಕಾರಣ ಮತ್ತು ಅನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದೆ. ಇದರ ವಿರುದ್ಧ ಯುವಜನತೆ ಧ್ವನಿ ಎತ್ತಬೇಕಿದೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾದ್ಯಂತ ಅಭಿಯಾನ ನಡೆಸಲಾಗುವುದು ಎಂದು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಹೇಳಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದೊಂದು ವರ್ಷದಲ್ಲೇ 12 ಅನೈತಿಕ ಪೆÇಲೀಸ್ ಗಿರಿ

ಭಂಡಾರ ದೇವಸ್ಥಾನಕ್ಕೆ ಹೋದ್ರೆ ಮತ್ತೆ ವಾಪಸು ತೆಗಿಯುವಂತಿಲ್ಲ ಆದೇಶ ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ : ಮಾಜಿ ಸಚಿವ ರಮಾನಾಥ ರೈ

ತುಳುನಾಡು ಉಭಯ ಜಿಲ್ಲೆಗಳ ವಿಶೇಷ ಸಂಸ್ಕೃತಿಗಳ ಜಿಲ್ಲೆಯಾಗಿದೆ. ದೈವಾರದನೆಯ ಒಂದು ವಿಶೇಷ ಸಂಸ್ಕೃತಿಯ ಜಿಲ್ಲೆ. ಧಾರ್ಮಿಕ ಪರಿಷತ್ ಬಿಜೆಪಿ ಆಡಳಿತ ವೇಳೆ ರಚಿಸಲಾಗಿತ್ತು. ಇದ್ರ ಅಡಿಯಲ್ಲಿ ದೈವಾರಾದನೆಯನ್ನು ಸೇರಿಸಲಾಗುತ್ತು. ಭಂಡಾರ ದೇವಸ್ಥಾನಕ್ಕೆ ಹೋದ್ರೆ ಮತ್ತೆ ವಾಪಸು ತೆಗಿಲಿಕ್ಕಿಲ್ಲ. ಇದು ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಸಕ್ರ್ಯೂಟ್ ಹೌಸ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ದೈವದ ಭಂಡಾರ

ಚುನಾವಣೆ ವೇಳೆ ಬಿಜೆಪಿ ನನ್ನ ಮೇಲೆ ಅಪಪ್ರಚಾರ ಮಾಡಿದೆ : ಮಾಜಿ ಸಚಿವ ರಮಾನಾಥ್ ರೈ ಆರೋಪ

ಚುನಾವಣೆಯ ವೇಳೆ ಬಿಜೆಪಿ ನನ್ನ ಮೇಲೆ ಅಪಪ್ರಚಾರ ಮಾಡಿದೆ. ಎರಡು ಭಾರಿ ಚುನಾವಣೆ ವೇಳೆ ಅಪಪ್ರಚಾರ ಮಾಡಿದ್ದಾರೆ. ಎರಡು ಹತ್ಯೆ ಬಗ್ಗೆ ನನ್ನ ಮೇಲೆ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಸೋಲಿಸಲು ಹತ್ಯೆಯ ಬಗ್ಗೆ ಅಪಪ್ರಚಾರ ಮಾಡಿದ್ರುಒಂದು ವೇಳೆ ನಾನು ಹತ್ಯೆ ಮಾಡಿದ್ರೆ ಜೈಲ್‍ನಲ್ಲಿ ಇರ್ತಿದ್ದೆ. ನಮ್ಮ ದೇಶದ ಕಾನೂನು ಅಷ್ಟು ಬಲಿಷ್ಠ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಮಂಗಳೂರಿನ ಸಕ್ರ್ಯೂಟ್ ಹೌಸ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ಮೀನಿನ ವ್ಯಾಪಾರಿಯ ಅಪಹರಣ: ವಿಟ್ಲ ಪೊಲೀಸ್ ಠಾಣೆಗೆ ದೂರು

ವಿಟ್ಲ: ಕೊಳ್ನಾಡು ಗ್ರಾಮದ ಕೆ.ಪಿ ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡವೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.   ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ ಅವರ ಪತ್ನಿ ಅಪ್ಸ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೊಹಮ್ಮದ್ ಅನ್ಸಾರ್ (31) ಎಂಬವರು ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ

ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು:  ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ (ಕ್ಲೀನ್ ಇಂಡಿಯಾ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಈ ಚಟುವಟಿಕೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಅದರ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ  ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು. ಅವರು

ಅ.4. ಬಂಟ್ವಾಳದ ಭಂಟರ ಭವನದಲ್ಲಿ “ಅಂತ್ಯೋದಯ” ಮಾಹಿತಿ ಕಾರ್ಯಗಾರ

ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾಯಿತ ಸದಸ್ಯರು ಗಳಿಗೆ ಇಲಾಖಾ ಯೋಜನೆಗಳ ಬಗ್ಗೆ ಒಂದು ದಿನದ “ಅಂತ್ಯೋದಯ” ಮಾಹಿತಿ ಕಾರ್ಯಗಾರ ಅಕ್ಟೋಬರ್ 4 ರಂದು ಬಂಟ್ವಾಳದ ಭಂಟರ ಭವನ ಸಭಾಂಗಣದಲ್ಲಿ ನಡೆಯಲಿದೆ. ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು : ಯು.ಟಿ. ಖಾದರ್ 

ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..? ಕಾನೂನು ಕ್ರಮ ತೆಗೆದುಕೊಳ್ಳಲು ಪ್ರತಿಭಟನೆ ನಡೆಸಬೇಕೇ..? ಎಂದು ಪ್ರಶ್ನಿಸಿದರು. ಮಂಗಳೂರಲ್ಲಿ ಇಂತಹ