Home Posts tagged #v4stream (Page 285)

ಮಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ

ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಆರ್ಥಿಕ ನಷ್ಟದಿಂದಾಗಿ ದಂಪತಿ ಆತ್ಮಹತ್ಯೆ ಮಾಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಕಳೆದ 2 ತಿಂಗಳಿಂದ ಕೆಲಸವಿಲ್ಲದೇ ಮನೆಯಲ್ಲಿ ಇದ್ದ ದಂಪತಿ ತೀರಾ ಹಣಕಾಸಿನ ಮುಗ್ಗಟ್ಟಿಗೆ ಬಿದ್ದು, ಆತ್ಮಹತ್ಯೆಗೆ ಶರಣಾರಾಗಿದ್ದಾರೆ. ಈ ಘಟನೆ ಪತಿಯು ಕಲಾವಿದರು ಆಗಿದ್ದು, ಇದೀಗ ಅವರ ಸಾವು ಕಲಾವಿದರಿಗೆ ತಲ್ಲಣಗೊಳ್ಳಿಸಿದೆ. ಪಿಂಟೋಸ್ ಲೇನ್

ಬ್ಯ್ಲಾಕ್ ಫಂಗಸ್ ರೋಗಕ್ಕೆ ಔಷಧ ಮಂಗಳೂರಿಗೆ : ಶಾಸಕ ಡಾ.ವೈ ಭರತ್ ಶೆಟ್ಟಿಯವರ ವಿಶೇಷ ಪ್ರಯತ್ನದ ಫಲ

ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧದ ಕೊರತೆ ಇರುವುದನ್ನು ಮನಗಂಡ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಾಡಿದ ವಿಶೇಷ ಪ್ರಯತ್ನದ ಫಲವಾಗಿ Association of Oral and Maxillofacial Surgeons of India ( AOMSI) ಸಂಘಟನೆಯ ಮಾಜಿ ಅಧ್ಯಕ್ಷರಾದ ಡಾ.ಕೃಷ್ಣಮೂರ್ತಿ ಬೊನತಾಯ ಹಾಗೂ ಡಾ.ಬದ್ರಿ ಅವರು ಯುನೈಟೆಡ್ ಕಿಂಗಡಂನಿಂದ ಬ್ಲ್ಯಾಕ್ ಫಂಗಸ್ ಗೆ ಬೇಕಾಗಿರುವ Amphotericin ಔಷಧವನ್ನು ಭಾರತಕ್ಕೆ ತರಿಸಿದ್ದು ಅದನ್ನು ಮಂಗಳೂರಿನ

ಲಾಕ್‌ ಡೌನ್‌‌ ನಿಯಮ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು

ಪುತ್ತೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಯವರು ಲಾಕ್‌ಡೌನ್ ನಿಯಮಗಳನ್ನು ಬಿಗಿಗೊಳಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪುತ್ತೂರು ತಹಸೀಲ್ದಾರ್ ರಮೇಶ್ ಬಾಬು ಮತ್ತು ನಗರಸಭೆ ಪೌರಾಯುಕ್ತ ಮಧು ಎಸ್.ಎಮ್ ರವರು  ಕಾರ್ಯಾಚರಣೆಗೆ ಇಳಿದಿದ್ದಾರೆ. ಅನಗತ್ಯವಾಗಿ ತಿರುಗಾಡುತ್ತಿರುವ ವಾಹನಗಳಿಗೆ ಪುತ್ತೂರು ಪೊಲೀಸರ ಸಹಕಾರದೊಂದಿಗೆ ಅವರು ಕಡಿವಾಣ ಹಾಕಿದ್ದಾರೆ. ಡಿ.ಸಿ ಸೂಚನೆಯಂತೆ ತಾಲೂಕು ಮಟ್ಟದಲ್ಲಿ ಕೊರೋನಾ ನಿಂತ್ರಣಕ್ಕಾಗಿ ಮೂರು ವಿಚಕ್ಷಣ ದಳ

ಮದುವೆ ನಿಶ್ಚಿತಾರ್ಥವಾಗಿದ್ದ ಈಶ್ವರಮಂಗಲದ ಯುವತಿ ಆತ್ಮಹತ್ಯೆ

ವಿವಾಹ ನಿಶ್ಚಿತಾರ್ಥಗೊಂಡಿದ್ದ 25 ರ ಹರೆಯದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಹೊರವಲಯ ಈಶ್ವರಮಂಗಲ ಸಮೀಪದಿಂದ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ನೆಟ್ಟನಿಗೆ ಗ್ರಾಮದ ಕುಳದಪಾರೆ ಸಮೀಪದ ನಿದಿಯಡ್ಕದ ಸುಬ್ಬಣ್ಣ ನಾಯ್ಕ ಎಂಬವರ ಪುತ್ರಿ ಪ್ರಿಯಾ ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಈಗಾಗಲೇ ವಿವಾಹ ನಿಶ್ಚಿತಾರ್ಥವಾಗಿದ್ದೂ ಕಳೆದ ಮೇ ತಿಂಗಳಿನಲ್ಲಿ ವಿವಾಹಕ್ಕೆ ದಿನಾಂಕ ನಿಗದಿಯಾಗಿತ್ತು .  ಲಾಕ್ ಡೌನ್ ಹೇರಲ್ಪಟ್ಟ

ಹಾನಗಲ್ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಅವರಿಗೆ 85ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ರಕ್ತ ಸಂಬಂಧಿ‌ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸಿಎಂ ಉದಾಸಿ ಈಶ್ವರಪ್ಪ, ಗೃಹ ಸಚಿವ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ . 1983 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು

ತಲ್ಲೂರು ಕೊರೋನಾ ಮುಕ್ತ ಗ್ರಾಮವಾಗಬೇಕು:ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಮಹಾಮಾರಿ ಕೊರೋನಾ ಹೊಡೆದುರುಳಿಸಲು ಸರ್ಕಾರ ಇಷ್ಟೊಂದು ಪ್ರಮಾಣದಲ್ಲಿ ಗಟ್ಟಿಯಾಗಿ ನಿಂತಿದೆ. ಕಾರ್ಯಪಡೆಯವರು ಮನೆಮನೆಗೆ ಭೇಟಿ ನೀಡಿ, ಸಭೆ ನಡೆಸಿ ಶ್ರಮ ಹಾಕಿದ್ದರಿಂದಾಗಿ ನಿಮ್ಮ ವ್ಯಾಪ್ತಿಯಲ್ಲಿ 80ರಷ್ಟಿದ್ದ ಪಾಸಿಟಿವ್ ಪ್ರಕರಣ ಈಗ 8ಕ್ಕೆ ಬಂದು ತಲುಪಿದೆ. ಈ ಸಂಖ್ಯೆ ಶೂನ್ಯಕ್ಕಿಳಿದು ತಲ್ಲೂರು ಗ್ರಾಮಪಂಚಾಯತ್ ಶೀಘ್ರವೇ ಕೊರೋನಾ ಮುಕ್ತವಾಗಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಲ್ಲಿಗೆ ಸಮೀಪದ ತಲ್ಲೂರಿನ ಅಂಬೇಡ್ಕರ್

ಲಸಿಕೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ:ಎಲ್ಲವೂ ಪಾರದರ್ಶಕವಾಗಿದೆ: ಸಚಿವ ಕೋಟ ಸ್ಪಷ್ಟನೆ

ಕುಂದಾಪುರ: ಸರ್ಕಾರ ಹೊರಡಿಸಿರುವ ನಿಯಮಗಳ ಪ್ರಕಾರವಾಗಿಯೇ ಲಸಿಕೆ ಹಂಚಿಕೆಯಾಗುತ್ತಿದೆ. ರಾಜಕೀಯ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಅಧಿಕಾರದಲ್ಲಿರುವಾಗ ಕೆಲವರಿಗೆ ಬಿಜೆಪಿಯವರು ಲಸಿಕೆ ಕೊಡುತ್ತಿದ್ದಾರೆ ಎಂದು ಅನಿಸಿರಬಹುದು. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಲಸಿಕೆ ಹಂಚಿಕೆ ಪಾರದರ್ಶಕವಾಗಿಯೇ ನಡೆಯುತ್ತಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಮಂಗಳವಾರ ತಲ್ಲೂರು ಗ್ರಾ.ಪಂ ನಲ್ಲಿ ನಡೆದ ಕೋವಿಡ್ ಟಾಸ್ಕ್‌ಫೋರ್ಸ್ ಸಭೆಯ

ಉದ್ಯಮಿ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳು ದೋಷಿ ಎಂದು ತೀರ್ಪು

ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ ಉದ್ಯಮಿ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ತೀರ್ಪು ಇಂದು ಪ್ರಕಟಗೊಂಡಿದ್ದು, ಮೂವರು ಪ್ರಮುಖ ಆರೋಪಿಗಳು ದೋಷಿಗಳೆಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ ತೀರ್ಪು ನೀಡಿದ್ದಾರೆ. ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳು ರಾಜೇಶ್ವರಿ ಶೆಟ್ಟಿ, ರಾಜೇಶ್ವರಿ ಶೆಟ್ಟಿ ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಆರೋಪಿಗಳಾಗಿದ್ದರು. ಆರೋಪಿಗಳು ದೋಷಿ ಎಂದು ನ್ಯಾಯಾಲಯ

ವೃತ್ತಿಪರ ಕೋರ್ಸ್‌ಗೆ ಸಿಇಟಿ ಅಂಕ ಮಾನದಂಡ : ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಆಗಸ್ಟ್ 28 ಹಾಗೂ ಆಗಸ್ಟ್ 29ರಂದು ಸಿಇಟಿ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಇಂದು ನಡೆದ ಸಭೆ ಬಳಿಕ ಮಾತನಾಡಿದ ಅವರು, ಜೂನ್ 15ರಿಂದ ಸಿಇಟಿ ನೋಂದಣಿ ಆರಂಭವಾಗಲಿದೆ. ಆಗಸ್ಟ್ 28 ಹಾಗೂ ಆಗಸ್ಟ್ 29ರಂದು ಸಿಇಟಿ ನಡೆಯಲಿದ್ದು, ಮೊದಲ ದಿನ ಗಣಿತ, ಜೀವಶಾಸ್ತ್ರ ಪರೀಕ್ಷೆಗಳು ನಡೆಯುತ್ತದೆ. ಎರಡನೇ ದಿನ ರಸಾಯನಶಾಸ್ತ್ರ,

ತೊಕ್ಕೊಟ್ಟುವಿನಲ್ಲಿ ಪೊಲೀಸರಿಂದ ಬಿಗಿ ತಪಾಸಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಈಗಾಗಲೇ ಜಿಲ್ಲಾಧಿಕಾರಿಗಳು ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ತೊಕ್ಕೊಟ್ಟುವಿನಲ್ಲಿ ಉಳ್ಳಾಲ ಪೊಲೀಸರಿಂದ ಬಿಗು ತಪಾಸಣೆ ಕೈಗೊಂಡಿದ್ದಾರೆ. ಉಳ್ಳಾಲ ಪಿಎಸ್‌ಐ ರೇವಣ್ಣ ಸಿದ್ದಯ್ಯ ಅವರ ನೇತೃತ್ವದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಹಲವು ವಾಹನಗಳನ್ನು ಪೊಲೀಸರು ಸೀಝ್ ಮಾಡಿದ್ದಾರೆ.