Home Posts tagged #v4stream (Page 289)

ಸ್ಟ್ಯಾನ್ ಸ್ವಾಮಿಗೆ ನ್ಯಾಯ ಒದಗಿಸುವಂತೆ ವಿನೋದ್ ವಾಲ್ಟರ್ ಪಿಂಟೊ ಒತ್ತಾಯ

ಮೂಡುಬಿದಿರೆ: ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಜೈಲು ಸೇರಿ ಕಾನೂನು ಹೋರಾಟ ನಡೆಸುತ್ತಿರುವಾಗಲೇ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಮೃತಪಟ್ಟ ಧರ್ಮಗುರು, ಸಾಮಾಜಿಕ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಅವರಿಗೆ ಇನ್ನಾದರು ಸರ್ಕಾರ ನ್ಯಾಯ ಒದಗಿಸಬೇಕೆಂದು ವಿನೋದ್ ವಾಲ್ಟರ್ ಪಿಂಟೊ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರ ಆರೋಪವನ್ನು

ಮೂಡುಬಿದಿರೆಯಲ್ಲಿ ರಾಣಿ ಅಬ್ಬಕ್ಕ ಬಿದಿರು ಉದ್ಯಾನವನ ಲೋಕಾರ್ಪಣೆ

ಮೂಡುಬಿದಿರೆ: ಆನೆಗಳ ಆಹಾರವಾಗುವ ಬಿದಿರಿನ ತಳಿಗಳನ್ನು ಕಾಡಿನಂಚಿನಲ್ಲಿ ನೆಟ್ಟರೆ ಆನೆಗಳು ನಾಡಿಗೆ ಬರುವ ಪ್ರಮೇಯ ತಪ್ಪುತ್ತದೆ. ಅಂತಹ ಬಿದಿರಿನ ತಳಿಗಳನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಒಂಟಿಕಟ್ಟೆಯ ಕಡಲ ಕೆರೆ ನಿಸರ್ಗಧಾಮದ ಸಾಲುಮರ ತಿಮ್ಮಕ್ಕ ಸಸ್ಯೋದ್ಯಾನವನ ಆವರಣದಲ್ಲಿ ರಾಣಿ ಅಬ್ಬಕ್ಕ ಬಿದಿರು ಉದ್ಯಾನವನವನ್ನು ಶುಕ್ರವಾರ ಸಾಯಂಕಾಲ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪರಿಸರವನ್ನು ನಾವು ಸಂರಕ್ಷಿಸಿದಲ್ಲಿ

ಬಂಟ್ವಾಳದ ಕಲ್ಲಗುಡ್ಡೆಯಲ್ಲಿ ಮನೆ ಮೇಲೆ ಆವರಣಗೋಡೆ ಕುಸಿತ: ಮನೆಮಂದಿ ಪವಾಡ ಸದೃಶ ಪಾರು

ಬಂಟ್ವಾಳ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂಟ್ವಾಳದ ಕಲ್ಲಗುಡ್ಡೆ ಎಂಬಲ್ಲಿ ಮಣ್ಣು ಸಹಿತ ಆವರಣ ಗೋಡೆ ಮನೆಯೊಂದರ ಮೇಲೆ ಕುಸಿದು ಬಿದ್ದು ಮನೆಮಂದಿ ಪವಾಡ ಸದೃಶ್ಯರಾಗಿ ಪಾರಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆ ಸಂಪೂರ್ಣ ಜಖಂಗೊಂಡಿದ್ದು 5 ಲಕ್ಷ ರೂಪಾಯಿಗಿಂತಲೂ ಅಧಿಕ ನಷ್ಟ ಸಂಭವಿಸಿದೆ. ಸೋಮನಾಥ ಕುಲಾಲ್ ಎಂಬವರಿಗೆ ಸೇರಿದ ಈ ಮನೆಯನ್ನು ನವೀನ್ ಎಂಬವರಿಗೆ ವಾಸ್ತವ್ಯಕ್ಕಾಗಿ ಬಾಡಿಗೆಗೆ ನೀಡಲಾಗಿತ್ತು. ಅವರು ಪತ್ನಿ ಪವಿತ್ರ ಹಾಗೂ ಮಗಳೊಂದಿಗೆ ಈ ಮನೆಯಲ್ಲಿ

ಮಂಗಳೂರು ಉವ೯ ಮಾರುಕಟ್ಟೆ ಹಸ್ತಾಂತರ ಕುರಿತು ಸಭೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉವ೯ ಮಾರುಕಟ್ಟೆಯನ್ನು ಮೂಡದಿಂದ ಪಾಲಿಕೆಗೆ ಹಸ್ತಾಂತರಗೊಳಿಸುವ ಕುರಿತು ಮೇಯರ್ ಪ್ರೇಮಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಸಭೆ ಕರೆಯಲಾಗಿತ್ತು. ಮೂಡ ಕಛೇರಿಯಿಂದ ಈಗಾಗಲೇ ಉವ೯ ಮಾರುಕಟ್ಟೆಯಲ್ಲಿನ ಮೇಲಿನ ಮಹಡಿಗಳಲ್ಲಿರುವ ಕಛೇರಿ ಉಪಯೋಗಿತ ಕೆಲವೊಂದು ಅಂಗಡಿಗಳನ್ನು ಹರಾಜು ರೂಪದಲ್ಲಿ ನೀಡಲು ಹರಾಜು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಈ ಹಿಂದೆ ಹಳೇ ಮಾರುಕಟ್ಟೆಯಲ್ಲಿ ವ್ಯಾಪಾರ

ವಿನಾಯಕ ಬಾಳಿಗಾ ಕೊಲೆ ಪ್ರಕರಣ ಸದನದಲ್ಲಿ ಪ್ರತಿಧ್ವನಿಸಲಿದೆ: ಡಿಕೆಶಿ ಭರವಸೆ

ಆರ್‌ಟಿಐ ಕಾರ್ಯಕರ್ತ ವಿನಾಯ ಬಾಳಿಗರವರ ಅಮಾನುಷ ಹತ್ಯೆ ನಡೆದು ಇಂದಿಗೆ 5 ವರುಷಗಳೇ ಸಂದರೂ ನೈಜ ಕೊಲೆ ಆರೋಪಿಗಳಿಗೆ ಇನ್ನೂ ಕೂಡ ಶಿಕ್ಷೆಯಾಗದಿರುವ ಹಿನ್ನೆಲೆಯಲ್ಲಿ ದುಃಖ ತೃಪ್ತ ಬಾಳಿಗಾ ಕುಟುಂಬ ಸದಸ್ಯರು ಮತ್ತು ಜಸ್ಟೀಸ್ ಫಾರ್ ವಿನಾಯಕ ಬಾಳಿಗ ಫೋರಂ, ಕಾನೂನು ಹೋರಾಟಗಾರರು ಸೇರಿಕೊಂಡು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರಲ್ಲಿ ತಮ್ಮ ಸಂಕಟವನ್ನು ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಹಾಯ ಹಸ್ತ ಕಾರ್ಯಕ್ರಮದಲ್ಲಿ

ಬಂಟ್ವಾಳದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ

ಬಂಟ್ವಾಳ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಮೇರಮಜಲು ಗ್ರಾಮ ಪಂಚಾಯತಿ ಆಶ್ರಯದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮ ಶುಕ್ರವಾರ ಮೇರಮಜಲಿನ ಶ್ರಿ ರಾಜೇಶ್ವರೀ ಸಭಾಂಗಣದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಕಾರ್ಮಿಕರಿಗೆ ಕಿಟ್ ವಿತರಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರ ಕೋವಿಡ್ ಸಂಕಷ್ಟ ಕಾಲದಲ್ಲಿ ಬಡ ಕಾರ್ಮಿಕರಿಗೆ ಆಹಾರದ ಕಿಟ್

ವೆನ್ಲಾಕ್ ಆಸ್ಪತ್ರೆಯಲ್ಲಿ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾ ವತಿಯಿಂದ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು.  ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾದ ವತಿಯಿಂದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು. ಶುಕ್ರವಾರದಂದು

ಪುತ್ತೂರು ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್:ರೋಗಿಯನ್ನು ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್‌ಗೆ ಅಡ್ಡಿ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕ್ ಮಾಡಿದ ಹಿನ್ನಲೆಯಲ್ಲಿ ತುರ್ತಾಗಿ ಹೋಗುವ ಆಂಬ್ಯುಲೆನ್ಸ್‌ಗೆ ಅಡ್ಡಿಯಾದ ಘಟನೆ ನಡೆದಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿ ಒಂದು ಕಡೆ ಕೋವಿಡ್ ಲಸಿಕೆ ನೀಡಿಕೆ ಮತ್ತೊಂದು ಕಡೆ ಉತ್ತಮ ಸೇವೆ ಸಿಗುವ ಹಿನ್ನಲೆಯಲ್ಲಿ ಸರಕಾರಿ ಆಸ್ಪತ್ರೆಗೆ ದಿನದಿಂದ ದಿನಕ್ಕೆ ಸಾರ್ವಜನಿಕರ ಸಂಖ್ಯೆ ಹೆಚ್ಚಾಗುತ್ತಿದು, ಆಸ್ಪತ್ರೆಗೆ ಬರುವವರು ಆಸ್ಪತ್ರೆಯ ವಠಾರದ ದಾರಿಯಲ್ಲೆ ಅಡ್ಡಾದಿಡ್ಡಿ ವಾಹನ

ಹೆಂಡತಿಯನ್ನು ಬಿಟ್ಟು ನಾದಿನಿಯೊಂದಿಗೆ ಗಂಡ ಪರಾರಿ..!! ಬೆಳ್ತಂಗಡಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು.!

ಮದುವೆಯಾಗಿ ಒಂದು ವರ್ಷವಾಗುವ ಮೊದಲೇ ಹೆಂಡತಿಯನ್ನು ತೊರೆದು ನಾದಿನಿಯೊಂದಿಗೆ ಓಡಿ ಹೋದ ಘಟನೆ ಬೆಳ್ತಂಗಡಿ ತಾಲೋಕಿನ ಕನ್ಯಾನದ ಕೈಕಂಬ ಎಂಬಲ್ಲಿ ನಡೆದಿದ್ದು ಸದ್ಯ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.ಕನ್ಯಾನದ ಮಹಮ್ಮದ್ ಎಂಬುವವರ ಪುತ್ರಿ ಸೌಧಳನ್ನು ಒಂಭಂತು ತಿಂಗಳ ಹಿಂದೆ ಪುಸ್ತಾಫಾ ಎಂಬುವವನು ಮದುವೆಯಾಗಿದ್ದ. ನಾದಿನಿ ರೈಹಾನಾಳೊಂದಿಗೆ ಮುಸ್ತಾಫಾ ಸಲುಗೆಯಿಂದ ಇದ್ದ. ಈ ನಡುವೆ ಸೌಧಳೊಂದಿಗೆ ಜಗಳವಾಡಿ ಮಾತು ಬಿಟ್ಟಿದ್ದ

ಮಂಗಳೂರು ಸ್ಮಾರ್ಟ್‍ಸಿಟಿ ಕಾಮಗಾರಿ : ಡೊಂಗರಕೇರಿ ಕಟ್ಟೆಯ ಬಳಿ ಪುರಾತನ ಬಾವಿ ಪತ್ತೆ

ಮಂಗಳೂರು ನಗರದಾದ್ಯಂತ ಸ್ಮಾರ್ಟ್‍ಸಿಟಿ ಕಾಮಗಾರಿ ನಡೆಯುತ್ತಿದ್ದು ನಗರದ ಡೊಂಗರಕೇರಿ ಕಟ್ಟೆಯ ಬಳಿ ಕಾಮಗಾರಿಯನ್ನು ನಡೆಸುತ್ತಿರುವ ಸಂದರ್ಭ ಪುರಾತನ ಬಾವಿಯೊಂದು ಪತ್ತೆಯಾಗಿದೆ. ನಗರದ ಅಲ್ಲಿಲ್ಲಿ ಕಾಮಗಾರಿ ವೇಳೆ ಬಾವಿ ಪತ್ತೆಯಾಗುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ನಗರದ ಡೊಂಗರಕೇರಿ ಕಟ್ಟೆಯ ಬಳಿ ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ರಸ್ತೆ ಫುಟ್‍ಬಾತ್ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ವೇಳೆ ಪುರಾತನ ಬಾವಿ ಪತ್ತೆಯಾಗಿದ್ದು, ತಕ್ಷಣ ಮಹಾನಗರ ಪಾಲಿಕೆ