Home Posts tagged #v4stream (Page 290)

ಮರವೂರು ಸೇತುವೆ ಕುಸಿತದಿಂದ ಕಂಗೆಟ್ಟ ಸ್ಥಳೀಯರು : ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಸೇತುವೆಯೆಂದರೆ ಕೇವಲ ಎರಡು ಊರಿನ ಸಂಪರ್ಕದ ಕೊಂಡಿ ಮಾತ್ರವಲ್ಲ ಎರಡು ಊರಿನ ಜನರ ಸಂಬಂಧದ ಕೊಂಡಿ. ಮರವೂರು ಸೇತುವೆ ಕುಸಿತದಿಂದ ಎರಡು ಊರಿನ ಸಂಪರ್ಕ ಕಳೆದುಕೊಂಡು 3 ವಾರಗಳು ಕಳೆದಿವೆ. ಆದರೆ ಇದರ ದುರಸ್ತಿ ಕಾರ್ಯ ಮಾತ್ರ ಆಮೆಗತಿಯಲ್ಲಿ ನಡೆಯುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿದೆ ಈ ಬಗ್ಗೆ ಸ್ಪೆಷಲ್ ರಿಪೋರ್ಟ್. ಮರವೂರು ಸೇತುವೆ ಕುಸಿತವಾಗಿ

ಕೋಟಿ ಗಟ್ಟಲೆ ವೆಚ್ಚದಲ್ಲಿ ನಿರ್ಮಾಣಗೊಂಡು 3ವರ್ಷ ಕಳೆದರೂ, ಆರಂಭವಾಗಿಲ್ಲ ಉರ್ವ ಮಾರುಕಟ್ಟೆ

ಅದು ಬರೋಬರಿ 13.5 ರೂ ಕೋಟಿ ವೆಚ್ಚದಲ್ಲಿ ನಡೆದ ಮಾರ್ಕೇಟ್….. ಉದ್ಘಾಟನೆಗೊಂಡು 3 ವರ್ಷ ಕಳೆದರೂ , ವ್ಯಾಪಾರಕ್ಕಾಗಿ ಗ್ರಾಹಕರಿಗೆ ಬಿಟ್ಟುಕೊಟ್ಟಿಲ್ಲ…. ಬೀಕೋ ಎನ್ನುತ್ತಿರುವ ಕಟ್ಟಡ… ಹಾಗಾದ್ರೆ ಅದು ಯಾವ ಮಾರುಕಟ್ಟೆ ಅಂತೀರಾ ಇಲ್ಲಿದೆ ಸ್ಟೋರಿ… 2019ರ ಜೂನ್ 28ರಂದು ಮಂಗಳೂರಿನ ಉರ್ವನಲ್ಲಿ ನಿರ್ಮಾಣಗೊಂಡ ಮಾರ್ಕೇಟ್…..ಉದ್ಘಾಟನೆಗೊಂಡ ಬಳಿಕ ಮಳಿಗೆಗಳನ್ನು ಏಲಂ ಮಾಡದೇ ಬಿಕೋ ಎನ್ನುತ್ತಿರುವ ಕಟ್ಟಡ….. ಹೌದು ಮಂಗಳೂರು

ಜನರಿಗೆ ಆತಂಕ ಮೂಡಿಸುವ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ: ಕುಂದಾಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 

ಕುಂದಾಪುರ: ಕೆಆರ್‌ಎಸ್ ಅಣೆಕಟ್ಟಿನ ಮಾಮೂಲಿ ನಿರ್ವಹಣೆಯ ಕಾಮಗಾರಿಗಾಗಿ ಹಣ ಬಿಡುಗಡೆ ಆಗಿರಬಹುದು. ಬಿರುಕು ಹಾಗೂ ಇನ್ನಿತರ ತಾಂತ್ರಿಕ ಮಾಹಿತಿಗಳನ್ನು ನೀಡಲು ಪರಿಣಿತ ತಾಂತ್ರಿಕ ತಜ್ಙರ ವಿಭಾಗವೇ ಇದೆ. ಅವರ ವರದಿ ಹಾಗೂ ಸಲಹೆ ಆಧಾರದಲ್ಲಿಯೇ ಕಾಮಗಾರಿಗಳು ನಡೆಯುತ್ತದೆ. ಸುಮ್ಮನೆ ಜನರಿಗೆ ಆತಂಕ ಮೂಡಿಸುವುದು ಹಾಗೂ ಪ್ರಚಾರಕ್ಕಾಗಿ ಹೇಳಿಕೆ ನೀಡುವುದನ್ನು ಎಲ್ಲರೂ ನಿಲ್ಲಿಸುವುದು ಸೂಕ್ತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ಅವರು

ಪಚ್ಚನಾಡಿ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಮೇಯರ್ ಭೇಟಿ, ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್‍ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೇಯರ್ ಪ್ರೇಮಾನಂದ ಶೆಟ್ಟಿ ಪ್ರತಿಕ್ರಿಯೆ ನೀಡಿ,

ಜುಲೈ 9 ರಂದು  ಸಾಗರ ಮಾಲಾ ಯೋಜನೆಯ ವಿರುದ್ದ ಮೀನುಗಾರರಿಂದ ‘ದೋಣಿಯೊಂದಿಗೆ ಪ್ರತಿಭಟನೆ’

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ ಕೋಸ್ಟಲ್ ಬರ್ತ್ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ‌ ನಿರ್ಮಾಣಗೊಳ್ಳುತ್ತಿದೆ. ಇದು ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಬಲವಾದ ಪೆಟ್ಟು ನೀಡುತ್ತದೆ, ದುಡಿಮೆಯ ಅವಕಾಶವನ್ನು ನಾಶಗೊಳಿಸುತ್ತದೆ. ಮೀನುಗಾರರ

ಮಂಗಳೂರಿನ ಹಂಪನಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ವಿರುದ್ಧ CPIM ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ವಾರಾಚರಣೆ ನಡೆಯತ್ತಿದ್ದು, ಇಂದು ನಗರದ ಹ್ರದಯ ಭಾಗವಾದ ಹಂಪನಕಟ್ಟಾ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಪ್ಪು ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಭರಿತರಾಗಿ ಘೋಷಣೆಗಳನ್ನು ಕೂಗುವ ಮೂಲಕ ಸರಕಾರದ ಕ್ರಮವನ್ನು

ಕೊಲ್ಯದಲ್ಲಿ ಎರಡು ಮನೆಗಳಿಂದ ಕಳವಿಗೆ ಯತ್ನ

ಉಳ್ಳಾಲ: ಎರಡು ಮನೆಗಳಿಗೆ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ, ಮನೆಯೊಳಗಿದ್ದ ಸೊತ್ತುಗಳನ್ನು ಹಾನಿಗೈದು ಒಂದು ಮನೆಯಿಂದ ವಾಚ್ ಕಳವುಗೈದು ಪರಾರಿಯಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಮೂಕಾಂಬಿಕಾ ದೇವಸ್ಥಾನ ಬಳಿ ವೇಳೆ ನಡೆದಿದೆ. ವಿದೇಶದಲ್ಲಿ ನೆಲೆಸಿರುವ ಸುರೇಶ್ ಎಂಬವರಿಗೆ ಸೇರಿದ ಮನೆಯ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು ಕಪಾಟು ಪುಡಿಗೈದು, ಮನೆಯೊಳಗಿನ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿಗೈದು ಹಣ ಹಾಗೂ ಒಡವೆಗಾಗಿ ಹುಡುಕಾಡಿ ಏನೂ ಸಿಗದೇ

ವಿಟ್ಲದಲ್ಲಿ  ಅಡುಗೆ ಅನಿಲ ದರ  ಇಳಿಸುವಂತೆ  ಡಿ.ವೈ.ಎಫ್.ಐನಿಂದ ಪ್ರತಿಭಟನೆ

ವಿಟ್ಲ : ಅಡುಗೆ ಅನಿಲ ದರ ಕೂಡಲೇ ಇಳಿಸುವಂತೆ ಒತ್ತಾಯಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ವಿಟ್ಲ ನಾಡ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.ಎಂ ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ ಕೋವಿಡ್ ಮಹಾಮಾರಿಯಿಂದ ಜನತೆ ಈಗಾಗಲೇ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪೆಟ್ರೋಲ್ ಡೀಸೆಲ್ ಬೆಲೆ ಈಗಾಗಲೇ ಗಗನಕ್ಕೇರಿದ್ದು, ಅಲ್ಲದೇ ದಿನ ಬಳಕೆಯ ಎಲ್ಲಾ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ.

ಇಂಧನ ಬೆಲೆ ಏರಿಕೆ ವಿರುದ್ಧ ಅಭಯಚಂದ್ರ ಜೈನ್‌ರಿಂದ ಒಂಟಿಯಾಗಿ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್, ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಅವರು ಮೂಡುಬಿದಿರೆಯಲ್ಲಿ ಒಂಟಿಯಾಗಿ ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಮೂಡುಬಿದಿರೆಯಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮೂಡುಬಿದಿರೆ ಪೊಲೀಸರು ಇದಕ್ಕೆ ಅನುಮತಿ ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಯಚಂದ್ರ ಜೈನ್

ಉದಯ್ ಗಾಣಿಗ ಕೊಲೆ ಪ್ರಕರಣ: ಬಿಜೆಪಿ ಮೌನದ ಬಗ್ಗೆ ಅನುಮಾನ ಹುಟ್ಟುತ್ತಿದೆ: ಡಿಕೆಶಿ

ಕುಂದಾಪುರ: ರಾಜಕೀಯ ದ್ವೇಷ ಸಾಧನೆಗಾಗಿ ಯಡಮೊಗೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ತಮ್ಮ ಪಕ್ಷದವರೇ ಆದ ಉದಯ್ ಗಾಣಿಗ ಅವರನ್ನು ಅಮಾನುಷವಾಗಿ ಹತ್ಯೆ ನಡೆಸಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.ತಾಲೂಕಿನ ಯಡಮೊಗೆಯ ಹೊಸಬಾಳು ಉದಯ್ ಗಾಣಿಗ ಅವರ ಮನೆಗೆ ಮಂಗಳವಾರ ಸಂಜೆ ಭೇಟಿ ನೀಡಿ ಅವರ ಪತ್ನಿ ಹಾಗೂ ಕುಟುಂಬಿಕರಿಗೆ ಸಾಂತ್ವನ ಹೇಳಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪಕ್ಷ, ಜಾತಿ, ಧರ್ಮದ ನೆಲೆಯಲ್ಲಿ