Home Posts tagged #v4stream (Page 297)

ಸ್ವಚ್ಚ ಪರಿಸರ ನಿರ್ಮಾಣ ಮಲೇರಿಯಾ ನಿಯಂತ್ರಣದಲ್ಲಿ ಯಶಸ್ವಿಗೆ ದಾರಿ- ಡಾ. ದೀಪಕ್ ರೈ 

ಪುತ್ತೂರು: ದೇಶದಲ್ಲಿ ಸೊಳ್ಳೆಗಳ ಮೂಲಕ ಹರಡುವ ಹಲವು ರೋಗಗಳಿದ್ದು, ಈ ಪೈಕಿ ಮಲೇರಿಯಾ ರೋಗವೂ ಒಂದಾಗಿದೆ. ನಮ್ಮ ಸುತ್ತ ಮುತ್ತ ನೀರು ನಿಲ್ಲದಂತೆ ಮಾಡಿ ಸ್ವಚ್ಚ ಪರಿಸರ ನಿರ್ಮಾಣ ಮಾಡುವುದರಿಂದ ಮಲೇರಿಯಾ ನಿಯಂತ್ರಣದಲ್ಲಿ ನಾವು ಯಶಸ್ವು ಕಾಣಲು ಸಾಧ್ಯ ಎಂದು ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಹೇಳಿದರು. ಅವರು ದ.ಕ.ಜಿಲ್ಲಾ ಪಂಚಾಯತ್ ಆರೋಗ್ಯ

ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ಮಾದಕ ವಸ್ತುಗಳ ನಾಶ

ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವಯರ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಯಿತು.  ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್

ವಿಟ್ಲದಲ್ಲಿ ವಾರಾಂತ್ಯದ ಕರ್ಪ್ಯೂ ಯಶಸ್ವಿ

ವಿಟ್ಲ: ಜಿಲ್ಲಾಡಳಿತ ಆದೇಶ ನೀಡಿದ ವಾರಾಂತ್ಯ ಕರ್ಫ್ಯೂ ವಿಟ್ಲದಲ್ಲಿ ಯಶಸ್ವಿಯಾಗಿದೆ. ವಿಟ್ಲದ ನಾಲ್ಕು ರಸ್ತೆಗಳಲ್ಲಿ ವಿಟ್ಲ ಪ್ರಭಾರ ಎಸೈ ರಾಜೇಶ್ ಕೆ.ವಿ ನೇತೃತ್ವದಲ್ಲಿ ಪ್ರೊಬೆಷನರಿ ಎಸೈ ಮಂಜುನಾಥ ಮತ್ತು ಪೊಲೀಸರ ತಂಡ ನಾಕಾಬಂಧಿ ಅಳವಡಿಸಿದ್ದರು. ಹಾಲು ಮತ್ತು ಮೆಡಿಕಲ್ ಹೊರತುಪಡಿಸಿ, ಅನಗತ್ಯವಾಗಿ ಪೇಟೆಗೆ ಬಂದ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು. ವಿಟ್ಲ ಪೇಟೆಯಲ್ಲಿ ಜನಸಂಚಾರ, ವಾಹನಗಳಿಲ್ಲದೇ ಬಿಕೋ ಎನ್ನುತ್ತಿದ್ದು, ಪೇಟೆ ಸಂಪೂರ್ಣ ಸ್ತಬ್ಧಗೊಂಡಿದೆ.

ಮರಕಡದಲ್ಲಿ ಹಿರಿಯ ಚೇತನಗಳೊಂದಿಗೆ ಮಾತುಕತೆ : ತ್ಯಾಗವನ್ನು ಅಭಿನಂದಿಸಿ ಸನ್ಮಾನಿಸಿದ ಶಾಸಕ ಡಾ. ಭರತ್ ಶೆಟ್ಟಿ

ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ವಂದೇ ಮಾತರಂ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದ ಕಾರಣಕ್ಕೆ ಜೈಲುವಾಸ ಶಿಕ್ಷೆ ಅನುಭವಿಸಿ ಕಳಪೆ ಆಹಾರವನ್ನು ಸೇವಿಸುವ ಪರಿಸ್ಥಿತಿ ಬಂದಾಗಲೂ ಜೈಲಿನಲ್ಲಿ ಸ್ವಾತಂತ್ರ್ಯಯೋಧರ ಕಥೆಗಳನ್ನು ವಾಚಿಸುತ್ತಾ, ಜೈಲಿನಲ್ಲಿಯೇ ಸಂಘದ ಶಾಖೆ ಮಾಡುತ್ತಾ, ಭಜನೆಗಳನ್ನು ಹಾಡುತ್ತಾ ಕಳೆದ ದಿನಗಳನ್ನು ಹಿರಿಯರು ಹೇಳುವಾಗ ರೋಮಾಂಚನವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ಹೇಳಿದರು. ಅವರು ಮರಕಡ ವಾರ್ಡಿನ ಲೀಲಾ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ : ಮಂಗಳೂರಲ್ಲಿ ಅನಗತ್ಯ ಓಡಾಡುತ್ತಿದ್ದ ವಾಹನಗಳು ಸೀಝ್

 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ವೀಕೆಂಡ್ ಕರ್ಪ್ಯೂ ಹಿನ್ನೆಲೆನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋ ಬಸ್ ಮಾಡಲಾಗಿದೆ. ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ.40ಕ್ಕೂ ಅಧಿಕ ಕಡೆ ಚೆಕ್ ಪೋಸ್ಟ್‍ಗಳನ್ನು ಮಾಡಿದ್ದು ಪ್ರತೀ ಚೆಕ್‍ಪೋಸ್ಟ್‍ನಲ್ಲೂ 10ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.. ಮೆಡಿಕಲ್ ಮತ್ತು ತುರ್ತು ಸೇವೆ ಹೊರತುಪಡಿಸಿ ಸಂಚರಿಸೋ ವಾಹನಗಳನ್ನು ಪೊಲೀಸರು ಸೀಝ್

ವೀಕೆಂಡ್ ಕರ್ಫ್ಯೂಗೆ ಕಟ್ಟುನಿಟ್ಟಿನ ಕ್ರಮ: ಎಸಿಪಿ ಮಹೇಶ್ ಕುಮಾರ್

ಸರಕಾರದ ಆದೇಶದಂತೆ ದಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವ ಕುರಿತಾಗಿ ಪೋಲಿಸರಿಗೆ ಮುಂಜಾಗ್ರತಾ ನಿಯಮಗಳ ಕುರಿತಾಗಿ ಪಣಂಬೂರು ಉಪವಿಭಾಗ ಮಟ್ಟದ ಪೋಲೀಸರಿಗೆ ಮಾಹಿತಿ ಕಾರ್ಯಕ್ರಮವು ಬೈಕಂಪಾಡಿ ಎಪಿ ಎಮ್ ಸಿ ಸಂಕೀರ್ಣ ಕಟ್ಟಡದ ಬಳಿ ಜರುಗಿತು. ಪಣಂಬೂರು ಸಹಾಯಕ ಪೋಲೀಸ್ ಆಯುಕ್ತ ಎಸ್ ಮಹೇಶ್ ಕುಮಾರ್ ಅವರು ಮಾತನಾಡಿ, ಸರಕಾರದ ಹಾಗೂ ದಕ ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಶುಕ್ರವಾರ ಸಂಜೆ ೭ ರಿಂದ ಕಟ್ಟುನಿಟ್ಟಿನ ಕ್ರಮ ಪಾಲಿಸಲು ಆದೇಶ

ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅವರೇ ಉತ್ತರ ಕೊಡಲಿ, ಅವರು ರಾಜೀನಾಮೆ ಕೊಡೋದು ಏನೂ ಆಗಿಲ್ಲ. ಅವರು ಕಾಂಗ್ರೆಸ್‌ನಲ್ಲಿ ಮೋಸ ಆಯ್ತು ಅಂತ ಬಿಜೆಪಿಗೆ ಬಂದವರು, ಸಿಡಿ ಜಾಲ ಸೇರಿ ಬೇರೆ ಬೇರೆ ಕಾರಣಕ್ಕೆ ಈ ವಿದ್ಯಮಾನ ನಡೀತಿದೆ ಎಂದು

ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ : ಜಗದೀಶ್ ಶೇಣವ

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 26ರ ಸಂಜೆ 4ರಂದು ವೆಬೆಕ್ಸ್ ಮೂಲಕ ವಿಚಾರಗೋಷ್ಠಿಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ ವಕ್ತಾರ ಜಗದೀಶ್ ಶೇಣವ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1975ರಲ್ಲಿ ಕಾಂಗ್ರೆಸ್ ಪಕ್ಷವು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಪ್ರಜಾಪ್ರಭುತ್ವದ ಹತ್ಯೆ

ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರಕ್ಕೆ ಹೊಸ ಪ್ಲಾನ್

ಕೊರೋನಾದ ಚೈನ್ ಬ್ರೇಕ್ ಮಾಡುವ ನಿಟ್ಟಿನಿಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಅತ್ಯಂತ ಮುಖ್ಯವಾದುದು, ಆದರೆ ನಮ್ಮ ಮಾರುಕಟ್ಟೆ , ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದೇ ಬಾರೀ ದೊಡ್ಡ ಸಮಸ್ಯೆಯಾಗಿದೆ. ಇಂತಹ ಸಂದರ್ಭದಲ್ಲಿ ಯುನಿವರ್‌ಸಲ್ ಪ್ರಾಪರ್‌ಟೀಸ್ ಐಲಾಂಡ್ ಮಂಗಳೂರಿನ ಮ್ಯಾನೆಜಿಂಗ್ ಪಾರ್ಟ್‌ನರ್ ಆಗಿರುವ ಗಿರ್ಲ್ಬಟ್ ಡಿಸೋಜ ಅವರು ಒಂದು ಹೊಸ ಪ್ಲಾನ್ ಒಂದನ್ನು ರೂಪಿಸಿದ್ದಾರೆ. ಜನರ ಮೊಬೈಲ್ ಫೋನ್ ಸಂಖ್ಯೆಯ ಕೊನೆಯ ಒಂದು ಸಂಖ್ಯೆಯ

ಶ್ರೀಗಂಧದ ಮರ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ರಕ್ಷಿತಾರಣ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಶ್ರೀಗಂಧದ ಮರಗಳನ್ನು ಕಳವು ಮಾಡಿ ಮಾರಾಟ ಮಾಡಲು ಯತ್ನಿಸಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ವಲಯ ಅರಣಾಧಿಕಾರಿಗಳು ಬಂಧಿಸಿದ್ದು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆಯ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪಾತೂರು ನಿವಾಸಿ ಇಬ್ರಾಹಿಂ ಹಾಗೂ ಇರಾ ಗ್ರಾಮದ ಮೊಯ್ದೀನ್ ಬಂಧಿತ ಆರೋಪಿಗಳು. ಸಿದ್ದೀಕ್ ಹಾಗೂ ಕೊರುಂಗು