ಮೂಡುಬಿದಿರೆ: ಪಂಚಾಯತ್ ಗೆ ನೀಡಿರುವ ವಿದ್ಯುತ್ ಬಿಲ್ಲ್ ಗಳಲ್ಲಿ ಆಗಿರುವ ಲೋಪ ದೋಷಗಳ ಬಗ್ಗೆ ಪಂಚಾಯತ್ ಪಿಡಿಒ ಸಹಿತ ಸದಸ್ಯರು ಮೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತಿಗೆಯಲ್ಲಿ ಶನಿವಾರ ನಡೆದಿದೆ. ಪುತ್ತಿಗೆ ಗ್ರಾ.ಪಂ.ಅಧ್ಯಕ್ಷ ಪ್ರವೀಣ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆದ ಮೆಸ್ಕಾಂ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ಈ
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಇದರ ನೇತೃತ್ವದಲ್ಲಿ ಎರ್ಮಾಳು ಇಂಸ್ಟೆಂಟ್ ಸೀ ರೆಸಾರ್ಟ್ ನಲ್ಲಿ ನಡೆದ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನಕ್ಕೆ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡುವುದು ವಿಜಯ ಸಂಕಲ್ಪ ಅಭಿಯಾನದ ಉದ್ದೇಶವಾಗಿದೆ. ಈಗಾಲೇ ಕಾಪು ಕ್ಷೇತ್ರಕ್ಕೆ 2900 ಕೋಟಿ ರೂಪಾಯಿ ಅನುದಾನ ತರಲಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಚುನಾವಣೆ ಎದುರಿಸೋಣ
ಕಾಸರಗೋಡು ಜಿಲ್ಲೆಯ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ತುಳು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ತುಳು ಸಾಹಿತಿ, ತುಲು ಲಿಪಿ ಸಂಶೋಧಕರಾದ ದಿ| ಡಾ.ಪುಂಡೂರು ವೆಂಕಟರಾಜ ಪುಣಿಂಚತ್ತಾಯರ ಹುಟ್ಟೂರು ಸಮೀಪ ಕಾಸರಗೋಡು ಜಿಲ್ಲೆಯ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದ ತುಲು ಲಿಪಿ ನಾಮಫಲಕ ಅನಾವರಣ ಮಾಡಲಾಯಿತು. ದೇವಸ್ಥಾನದಲ್ಲಿ ತುಲು ಲಿಪಿ ನಾಮಫಲಕದ ಉದ್ಘಾಟನೆಯನ್ನು ಪುಂಡೂರು ಪುರುಷೋತ್ತಮ ಪುಣಿಂಚತ್ತಾಯ ನಿವೃತ್ತ ಉಪನ್ಯಾಸಕ, ಮೃದಂಗ ವಾದಕರು
ಬೆಂಗಳೂರು, : ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವುದನ್ನು ತಡೆಯಲು ಶಾಲೆಗಳು ಮತ್ತು ಪಾಲಕರು ನೈತಿಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ “ಕರ್ನಾಟಕ ಮಹಿಳಾ ಮತ್ತು ಮಕ್ಕಳ ಮಾನವ ಹಕ್ಕುಗಳ ಸೇವಾ ಟ್ರಸ್ಟ್ “ ಉದ್ಘಾಟನೆ, ಲಾಂಚನ ಬಿಡುಗಡೆ ಹಾಗೂ ಅಂಧರಿಗೆ ಕೈಗಡಿಯಾರ ಮತ್ತು ವಾಕಿಂಗ್ ಸ್ಟಿಕ್ ವಿತರಿಸಿದರು. ಪೋಷಕ ಕಲಾವಿದರಿಗೆ
ಭಾರತದ ಹೆಸರಾಂತ ಸ್ವರ್ಣದ್ಯಮ ಸಂಸ್ಥೆ ಜೋಸ್ ಆಲುಕ್ಕಾಸ್ ಜ್ಯುವೆಲ್ಲರಿ ಸಿಎಸ್ಆರ್ ನಿಧಿಯಿಂದ ನಗರದ ಜೆಪ್ಪುವಿನಲ್ಲಿರುವ ಸಂತ ಜೋಸೆಫ್ ಪ್ರಶಾಂತ್ ಶ್ರೀನಿವಾಸ್ ವೃದ್ದಾಶ್ರಮದ ನಿವಾಸಿಗಳ ಅನುಕೂಲಕ್ಕಾಗಿ ಮಹೀಂದ್ರಾ ಬೊಲೆರೋ ವಾಹನವನ್ನು ನಗರದ ಕೆಎಸ್ರಾವ್ ರಸ್ತೆಯಲ್ಲಿರುವ ಶೋರೂಂನಲ್ಲಿ ಕೊಡುಗೆಯಾಗಿ ನೀಡಲಾಯಿತು. ಉತ್ತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರಾದ ರಾಘವೇಂದ್ರ ಬೈಂದೂರು ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಂಗಳೂರಿನ ಬಿಜೈನ ಭಾರತೀನಗರದ ಶ್ರೀ ಕ್ಷೇತ್ರ ಬಲಿಪತೋಟ ಶ್ರೀ ದೈವರಾಜ ಬಬ್ಬುಸ್ವಾಮಿ ದೈವಸ್ಥಾನದ ಶ್ರೀ ದೈವರಾಜ ಬಬ್ಬುಸ್ವಾಮಿ ತನ್ನಿಮಾನಿಗ ಹಾಗೂ ಧೂಮಾವತಿ ಬಂಟ ಸಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ನವಕಲಶಾಭಿಷೇಕ ಜನವರಿ 28ರಿಂದ 30ರ ವರೆಗೆ ನಡೆಯಲಿದೆ. ಜನವರಿ 28ರ ಶನಿವಾರದಂದು ಬೆಳಿಗ್ಗೆ 8 ಗಂಟೆಗೆ ನವಕಲಶಾಭಿಷೇಕ, ಗಣಹೋಮ, ಚಪ್ಪರ ಮುಹೂರ್ತ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 5ಕ್ಕೆ ಶ್ರೀ ಕಂಬೇರ್ಲು ದರ್ಶನ ನಂತರ ಭಂಡಾರ ಏರುವುದು. ಸಂಜೆ 7
ಕುಂದಾಪುರ ತಾಲೂಕು ಯುವ ಬಂಟರ ಸಂಫದ ವತಿಯಿಂದ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ ಹಾಗೂ ಬಂಟರ ಸಮ್ಮಿಲನ ಕಾರ್ಯಕ್ರಮವು ಕುಂದಾಪುರದ ಗಾಂಧೀ ಮೈದಾನದಲ್ಲಿ ನಡೆಯಿತು. ರಾಜ್ಯದ ವಿವಿಧ ಕಡೆಗಳಿಂದ ಕ್ರೀಡಾಪಟುಗಳ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಂಘಟನೆ ಮೂಲಕ ಒಂದಷ್ಟು ಜನ ಸಮುದಾಯದವರು ಒಟ್ಟಾಗುವ ಅವಕಾಶ ಇಂತಹ
ಭಾತ್ರತ್ವದ ಸಂದರ್ಭದಲ್ಲಿ ಏಸು ರಾಜ ಕ್ರಿಸ್ತನನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಬಂದು ವಿಶಾಲವಾದ ಮೈದಾನದಲ್ಲಿ ಏಸು ಕ್ರಿಸ್ತನ ದೇವರ ವಾಕ್ಯವನ್ನು ಕೇಳುತ್ತಾ ಅವರನ್ನು ಸ್ತುತಿಸುತ್ತ ಏಸು ಕ್ರಿಸ್ತನ ನಾಮದಲ್ಲಿ ಆಶೀರ್ವಾದ ಪಡೆದಿದ್ದೇವೆ. ಏಕತೆ, ಸಹೋದರತೆ, ಭಾತ್ರತ್ವ ಇರಬೇಕು ಎಂದು ಪ್ರವಚನ ನೀಡಿದಂತ ದಿವ್ಯ ಬಲಿ ಪೂಜೆಯನ್ನು ವಂದನೀಯ ಸ್ವಾಮಿ ಸಿರಿಲ್ ಲೋಬೋ ಉಡುಪಿ ಧರ್ಮಪ್ರಾಂತ್ಯದ ದಿವ್ಯ ಜ್ಯೋತಿ ಇದರ ನಿರ್ದೇಶಕರಾಗಿದ್ದವರು ಮುಂದಿನ ಐದು ದಿನಗಳ ಕಾಲ
ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ಬಳಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನಕ್ಕೆಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸಗೈದರು. ನಂತರ ಮಾತನಾಡಿದ ಅವರು 1500 ಅಂಬೇಡ್ಕರ್ ಭವನಗಳು ಸೂಕ್ತ ರೀತಿಯಲ್ಲಿ ನಿರ್ವಹಣೆಯಿಲ್ಲದಿರುವುದರಿಂದ ಅವುಗಳನ್ನು ಗ್ರಂಥಾಲಯವಾಗಿ ಪರಿವರ್ತಿಸಲು ಈಗಾಗಲೇ ಆದೇಶಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡದ
ಬೆಂಗಳೂರು; ಸ್ಯಾಂಡಲ್ ವುಡ್ ಇದೀಗ ಮತ್ತೊಮ್ಮೆ ಆಘಾತ ಎದುರಾಗಿದೆ. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಲಕ್ಷ್ಮಣ್ (74) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಣ್ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಆ ಬಳಿಕ ಅವರಿಗೆ ಹೃದಯಾಘಾತವಾಗಿದೆ. ಇದೀಗ