ಕಳೆದ ಕೆಲವು ದಿನಗಳಿಂದ ಮುಷ್ಕರ ಹೂಡಿದ್ದ ಸ್ವಚ್ಛತಾ ಕಾರ್ಮಿಕರು ಇಂದಿನಿಂದ ಕೆಲಸಕ್ಕೆ ಹಾಜರಾಗಿದ್ದು, ಎಲ್ಲಾ ಸ್ವಚ್ಚತಾ ಕಾರ್ಮಿಕರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಧನ್ಯವಾದ ಸಲ್ಲಿಸಿದ್ದಾರೆ. ಸಾರ್ವಜನಿಕರಿಗೆ ಸಹಕಾರವಾಗುವಂತೆ ಶಾಸಕರ ಕಚೇರಿಯಲ್ಲಿ ವಾರ್ ರೂಂ ತೆರೆಯಲಾಗಿದ್ದು ಮುಂದಿನ 2-3 ದಿನಗಳ ಕಾಲ ವಾರ್ ರೂಂ ಕಾರ್ಯಾಚರಿಸಲಿದೆ ಎಂದು ಶಾಸಕ ವೇದವ್ಯಾಸ
ಅಜೆಕಾರು ಎಣ್ಣೆಹೊಳೆ ಎಂಬಲ್ಲಿ ಸ್ವರ್ಣ ನದಿಗೆ ನಿರ್ಮಿಸಲಾಗಿದ್ದ ಎಣ್ಣೆಹೊಳೆ ಏತನೀರಾವರಿ ಯೋಜನೆ ಸಂಪೂರ್ಣ ವಿಫಲವಾಗಿದೆ. ರೂ. 138 ಕೋಟಿ ಹಣವನ್ನು ಪೋಲುಮಾಡಲಾಗಿದೆ. ಮಹಾಭ್ರಷ್ಟಾಚಾರ ಇದಾಗಿದ್ದು, ಸಂಬಂಧ ಪಟ್ಟ ಇಲಾಖಾಧಿಕಾರಿಗಳನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸುತ್ತೇನೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಅಭಿವೃದ್ಧಿಯ ಹೆಸರಿನಲ್ಲಿ ಕೆಲವೇ ಕೆಲ ವ್ಯಕ್ತಿಗಳು ಅಭಿವೃದ್ಧಿ ಹೊಂದುತ್ತಿದ್ದಾರೆ. ಬಿಟ್ಟಿ
ಬಂಟ್ವಾಳ: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಯಾರಿಯನ್ನು ಆರಂಭಿಸಿದೆ. ಇತ್ತ ಚುನಾವಣೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ದ.ಕ. ಜಿಲ್ಲಾಡಳಿತವೂ ಕಾಯೋನ್ಮುಖವಾಗಿದ್ದು ಆಯ್ದ ಮತಗಟ್ಟೆಗಳಲ್ಲಿ(ಶಾಲೆಗಳಲ್ಲಿ) ಬಣ್ಣದ ಚಿತ್ರಗಳನ್ನು ರಚಿಸಿ ಮತದಾರರನ್ನು ಮತಗಟ್ಟೆಗೆ ಸೆಳೆಯಲು ಹೊಸ ಪ್ರಯತ್ನ ನಡೆಸಿದೆ. ಕರಾವಳಿಯ ಜಾನಪದ ಕಲೆಗಳಾದ ಯಕ್ಷಗಾನ, ಕಂಬಳ ಸೇರಿದಂತೆ ಪರಂಪರೆ
ಮುದರಂಗಡಿಯಲ್ಲಿ ತೆರೆದ ಬಾವಿಯಲ್ಲಿ ಸ್ಥಳೀಯ ಸಾಕು ನಾಯಿ ಬಿದ್ದ ಮಾಹಿತಿ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ಸಿಬ್ಬಂದಿಗಳು ಬಾವಿಯಲ್ಲಿ ಬಿದ್ದ ನಾಯಿಯನ್ನು ರಕ್ಷಿಸಿದ ಘಟನೆ ಮುದರಂಗಡಿಯಲ್ಲಿ ನಡೆದಿದೆ.ಇವರ ಈ ಕಾರ್ಯಕ್ಕೆ ಸ್ಥಳೀಯರ ಮೆಚ್ಚುಗೆ ವ್ಯಕ್ತವಾಗಿದೆ ನಾಯಿಯನ್ನು ರಕ್ಷಿಸುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗ್ತಿದೆ
ನಗರ ಮರೋಳಿಯಲ್ಲಿ ರಂಗ್ ದೇ ಬರ್ಸಾ ಹೋಲಿ ಸಂಭ್ರಮದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ ಘಟನೆ ನಡೆದಿದೆ. ಹೋಳಿ ಆಚರಣೆಯಲ್ಲಿ ಬಣ್ಣ ಎರಚಿಕೊಂಡು ಯುವಕ ಯುವತಿಯರು ಸಂಭ್ರಮಿಸುತ್ತಿದ್ದರು. ಅನ್ಯಧರ್ಮದ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ. ಈ ವೇಳೆ ಬಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ನಡುವೆ ಮಾತಿನ ಚಕಮಕಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ
ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿರುವುದು ಏಕೆ ಎಂದು ಲೋಕಾಯುಕ್ತ ಎಸ್ಪಿ ಸೈಮನ್ ಗರಂ ಆದ ಘಟನೆ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಕರೆದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಡೆಯಿತು. ಎಸ್ಪಿ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಕ್ರಮದಲ್ಲಿ ಸುಮಾರು ಹದಿನೈದರಷ್ಟು ಮಂದಿ ತಮ್ಮ ದೂರು, ದುಮ್ಮಾನ ಸಲ್ಲಿಸಿದರು. ಈ ಸಂದರ್ಭ ಕರೋಪಾಡಿ ಗ್ರಾಮದ ವಿಕ್ಟರ್ ವೇಗಸ್ ಎಂಬವರು ದೂರು ನೀಡಿ, ತನ್ನ ಕಡತಗಳ
ಉಳ್ಳಾಲ: ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿ ಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ವೇಳೆ ಸಂಭವಿಸಿದೆ. ಹೆದ್ದಾರಿ ಮದ್ಯೆಯೇ ಪಲ್ಟಿಯಾಗಿ ಬಿದ್ದು ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅವರನ್ನು ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ 1ರ ವರೆಗೆ ನಡೆದ ತೆರವು ಕಾರ್ಯಾಚರಣೆ !ಲಾರಿ ಹಾಗೂ
ಕಾಪುವಿನಲ್ಲಿ ನಡೆಯುವ ಮಾರಿಪೂಜೆ ಹಾಗೂ ಪಡುಬಿದ್ರಿ ದೇವಳದಲ್ಲಿ ನಡೆಯುವ ರಥೋತ್ಸವ ಸಂದರ್ಭ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ದೇವಳಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿಯವರಿಗೆ ಬಜರಂಗದಳ ಕಾಪು ಪ್ರಖಂಡ ಸದಸ್ಯರು ಮನವಿ ಸಲ್ಲಿಸಿದ್ದಾರೆ. ದೇಶದ ಕಾನೂನನ್ನು ಹಾಗೂ ಹಿಂದೂ ಸನಾತನ ಧರ್ಮದ ಆಚಾರ-ವಿಚಾರಗಳನ್ನು ಗೌರವಿಸದ ಅನ್ಯಧರ್ಮಿಯರಿಗೆ ಜಾತ್ರಾ ಸಂಧರ್ಭದಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡದಂತೆ ಮನವಿಯನ್ನು
ಮೂಡುಬಿದಿರೆ: ಸಂಸ್ಕೃತಿ, ಪರಂಪರೆ, ಇತಿಹಾಸ ಇವೆಲ್ಲದಕ್ಕೂ ಮಾದರಿಯಾಗಿ ಭಾರತ ಮೆರೆಯುತ್ತಿದೆ. ಕಾಂಗ್ರೆಸ್ನದ್ದು ವಿದೇಶಿ ಸಿದ್ದಾಂತ. ರಾಷ್ಟ್ರೀಯತೆಯನ್ನು ಮರೆತು ವಿದೇಶಿ ಸಂಸ್ಕೃತಿಯೊಂದಿಗೆ ಕಾಂಗ್ರೆಸ್ ಸಾಗಿ ಬಂದಿರುವುದರಿಂದ ಇಂದು ನೆಲಕಚ್ಚಿದೆ. ಅಭಿವೃದ್ಧಿಯ ಜೊತೆಗೆ ರಾಷ್ಟ್ರೀಯತೆ ಮೌಲ್ಯಗಳ ಸಿದ್ಧಾಂತಕ್ಕೆ ಅನುಗುಣವಾಗಿ ಮುನ್ನಡೆಯುತ್ತಿರುವ ಬಿಜೆಪಿ ಇಂದು ವಿಶ್ವದಲ್ಲೇ ನಂ.1 ಪಕ್ಷಗಾಗಿ ಗುರುತಿಸಿಕೊಂಡಿದೆ ಎಂದು ಬಿಜೆಪಿ ದ.ಕ ಜಿಲ್ಲಾಧ್ಯಕ್ಷ
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳಾಯರು ಮತ್ತು ಮುಂಚೂರಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 250-300 ಲೋಡ್ ಮರಳನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೇಳ್ಯಾರು ಗ್ರಾಮ ಪಂಚಾಯತ್ ಬಳಿ ರಸ್ತೆ ಬದಿಯ ಕಾಂಪೌಂಡ್ ಒಳಭಾಗದಲ್ಲಿ ಸಿಸಿ ಕ್ಯಾಮಾರ ಕಣ್ಗಾವಲಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 150-200 ಲೋಡ್ ಮರಳು ಹಾಗೂ ಮುಂಚೂರು ರಸ್ತೆಯ ಬದಿಯ ಕಾಂಪೌಂಡ್ನ ಒಳಭಾಗದಲ್ಲಿ ರಸ್ತೆಯಲ್ಲಿ ಸಂಚರಿಸುವವರಿಗೆ ಕಾಣದಿರಲು ಮರ