ಕಾಲ್ತೋಡು ಗ್ರಾಮದ ಯಡೇರಿ ಎಂಬಲ್ಲಿ ಸರ್ವೇ ನಂಬರ್ 293/* ರಲ್ಲಿ 0.50 ಎಕ್ರೆ ಸ್ಥಳವು 1998 ರಂದು ಮಾನ್ಯ ಸಹಾಯಕ ಕಮೀಷನರ್ ಆದೇಶದಂತೆ ಹಿಂದೂ ರುದ್ರಭೂಮಿಗೆ ಕಾಯ್ದಿರಿಸಲಾಗಿದೆ. ಅದನ್ನು ಖಾಸಾಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಬಡ ಜನರ ಮೃತ ದೇಹವನ್ನು ದಫನ ಮಾಡಲು ಜಾಗವಿಲ್ಲದೆ ಪರದಾಡುವಂತಾಗಿದೆ ಎಂದು ಜನತಾ ಕಾಲೋನಿಯ ಜನರು ಅಳಲು ತೋಡಿಕೊಂಡಿದ್ದಾರೆ
ಬಂಟ್ವಾಳ : ಬಿ ಸಿ ರೋಡು-ಹಾಸನ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಗುರುವಾರ ಮಧ್ಯಾಹ್ನ ವೇಳೆ ಹಠಾತ್ ಕುಸಿತಗೊಂಡ ಘಟನೆ ನಡೆದಿದೆ.ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಬಹಳ ನಿಧಾನಗತಿಯಲ್ಲಿ ಸಾಗುತ್ತಿದ್ದು, ಮೊದಲೇ ವಾಹನ ಸವಾರರು ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ತೀರಾ
ಪುತ್ತೂರು: ಮಾದಕ ದ್ರವ್ಯ ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ನಡೆದಿದೆ. ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36ವ) ಬಂಧಿತ ಆರೋಪಿ. ಎಸ್.ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿರುವಾಗ ಕಬಕ ಗ್ರಾಮದ ಪೋಳ್ಯ ಸಾರ್ವಜನಿಕ ಬಸ್ ತಂಗುದಾಣದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತ
ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ಉಪ್ಪಿನಂಗಡಿಯ ಲಕ್ಷ್ಮೀ ಸ್ಟೋರ್ ನ ಷಟರ್ ಮುರಿದು ಒಳನುಗ್ಗಿರುವ ಕಳ್ಳರು ಸುಮಾರು 40 ಸಾವಿರ ರೂಪಾಯಿ ನಗದು ಹಾಗೂ ಸೊತ್ತುಗಳನ್ನು ದೋಚಿದ್ದಾರೆ. ಬಸ್ ನಿಲ್ದಾಣ ಬಳಿಯ ಸೆಲ್ ಸೈಟ್ ಮೊಬೈಲ್ ಶಾಪ್ ಗೆ ನುಗ್ಗಿದ ಕಳ್ಳರು 5 ಸಾವಿರ ರೂಪಾಯಿ ನಗದು ದೋಚಿದ್ದಾರೆ. ಬ್ಯಾಂಕ್ ರಸ್ತೆಯಲ್ಲಿರುವ ಕಾಮತ್ ಕೋಲ್ಡ್ ಹೌಸ್ ಗೆ
ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PಈI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ
ಈ ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣವು ಅಕ್ಟೋಬರ್ 25ರಂದು ಗೋಚರವಾಗಲಿದೆ. ದೀಪಾವಳಿಯಂದೇ ಈ ಸೂರ್ಯಗ್ರಹಣ ಉಂಟಾಗಲಿದ್ದು, ಯುರೋಪ್, ಪಶ್ಚಿಮ ಸೈಬೀರಿಯಾ, ಮಧ್ಯ ಏಷ್ಯಾ, ಪಶ್ಚಿಮ ಏಷ್ಯಾ ಮತ್ತು ಆಫ್ರಿಕಾದ ಈಶಾನ್ಯ ಭಾಗದಲ್ಲಿ ಗೋಚರಿಸುತ್ತದೆ. ಈ ಸೂರ್ಯಗ್ರಹಣವು ಭಾರತದ ಬಹುತೇಕ ಪ್ರದೇಶಗಳಲ್ಲಿ ಗೋಚರಿಸಲಿದೆ ಎಂದು ಹೇಳಲಾಗುತ್ತಿದೆ. ಅಕ್ಟೋಬರ್ 25ರ ಪಾರ್ಶ್ವ ಸೂರ್ಯ ಗ್ರಹಣವು ಸಂಜೆ ಗಂಟೆ 5.08ಕ್ಕೆ ಪ್ರಾರಂಭವಾಗಿ 6.29ಕ್ಕೆ ಅಂತ್ಯವಾಗಲಿದ್ದು, ಸೂರ್ಯ ಗ್ರಹಣವನ್ನು
ಶತಮಾನ ಸಂವತ್ಸರಗಳನ್ನು ದಾಟಿ ಮುನ್ನಡೆಯುತ್ತಿರುವ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆಯು ಅ.16ರಂದು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಜರುಗಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಅವರು ತಿಳಿಸಿದರು. ಅವರು ಸುಳ್ಯದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕನಕಮಜಲು ಪ್ರಾ.ಕೃ. ಪ.ಸ.ಸಂಘವು
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜ್ಯೋತಿ (33) ಅವರು ಆತ್ಮಹತ್ಯೆ ಯತ್ನವೊಂದರಲ್ಲಿ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾರೆ. ಕೌಟುಂಬಿಕ ವಿವಾದದ ನಂತರದ ತೀವ್ರ ಹತಾಶೆಯಲ್ಲಿ ಅವರು ಈ ಕೃತ್ಯ ಎಸಗಿದ್ದಾರೆಂದು ಹೇಳಲಾಗುತ್ತದೆ. ಪತಿ ಪತ್ನಿ ಇಬ್ಬರೂ ರಾಜಸ್ಥಾನದ ಭರತ್ ಪುರ ಜಿಲ್ಲೆಯವರು. “ಗಾಯಾಳುವನ್ನು ನಗರದ ಎ.ಜೆ ಆಸ್ಪತ್ರೆಗೆ ಸೇರಿಲಾಗಿದೆ. ಶಾಸ್ತ್ರಚಿಕಿತ್ಸೆ ನಡೆಯುತ್ತಿದೆ” ಎಂದು ಮಂಗಳೂರು ನಗರ
ಯಕ್ಷಗಾನವೆಂದರೆ ಕರಾವಳಿ ಬಾಗದಲ್ಲಿ ತನ್ನದೆ ಆದ ಛಾಪನ್ನು ಮೂಡಿಸಿದ ಕಲೆ, ಇದೀಗ ಸಚಿವರೊಬ್ಬರು ಈ ಕರಾವಳಿಯ ಕಲೆಗೆ ಮನಸೋತು ತಾನೆ ವೇಷ ಧರಿಸುವ ಮೂಲಕ ಸಂಭ್ರಮಿಸಿದ್ದಾರೆ. ಆರೋಗ್ಯ ಸಚಿವರಾದ ಡಾ.ಸುಧಾಕರ್ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಕಲ್ಪಿಸುವ ಸಂಬಂಧ ಪರಿಶೀಲನೆಗೆ ಆಗಮಿಸಿದ್ದ ಅವರು ಬಳಿಕ ಅಧಿಕಾರಿಗಳ ಸಭೆ ನಡೆಸಿ ರಾತ್ರಿ ಶಾಸಕ ಸುನೀಲ್ ನಾಯ್ಕ್ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ರಾತ್ರಿ ಶಾಸಕ ಸುನೀಲ್ ನಾಯ್ಕ್ ಅವರ
ಮುಂಬೈ: ಮಲಾಡ್ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಯುವ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್ 30ರಂದು ಮಲಾಡ್ ಪೂರ್ವದ ಚಿಲ್ಡ್ರನ್ಸ್ ಅಕಾಡೆಮಿ ಶಾಲೆಯ ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿರುವ ಮಕ್ಕಳ ಉತ್ಸವದ ಆಮಂತ್ರನ ಪತ್ರಿಕೆಯನ್ನು ಬಿಲ್ಲವರ ಅಸೋಸಿಯೇಷನ್ ಮಲಾಡ್ ಸ್ಥಳೀಯ ಕಚೇರಿಯ ಕಾರ್ಯಾಲಯದಲ್ಲಿ ಪೂಜಾ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಎನ್ ಶೆಟ್ಟಿ ಪಣಿಯೂರು ಬಿಡುಗಡೆಗೊಳಿಸಿದರು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ