ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ 30ನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 24, 2022 ರ ಶನಿವಾರದಂದು ಸಂಘದ ಕೋಟೇಶ್ವರ ಗೋವಿಂದ್ರಾಯ ವಿಠ್ಠಲ ಕಾಮತ್ ಸಭಾಂಗಣದಲ್ಲಿ ಜರುಗಿತ್ತು. ಶ್ರೀ ಕೆ ಪ್ರಶಾಂತ್ ಬಾಳಿಗಾ, ಕೆ.ಕೆ. ಫಿಶ್ ನೆಟ್ ಕೋ, ನೇಜಾರ್ ಇವರು 2022-23 ನೇ ಸಾಲಿನ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ, ಶ್ರೀ ಹರೀಶ್
ಕಾರ್ಕಳ: ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟ ಎಲ್ಲೆಮೀರಿದೆ. ಅದಕ್ಕೆ ಕಡಿವಾಣ ಹಾಕುವುದಕ್ಕೆ ಇನ್ನೂ ಸಾಧ್ಯವಾಗಿಲ್ಲ. ಒಂದೊಂದು ಕಾರಣಗಳನ್ನು ಅಧಿಕಾರಿಗಳು ಸಭೆಗೆ ನೀಡುತ್ತಿರುವುದರಿಂದ ಸಮಸ್ಯೆ ಶಾಶ್ವತವಾಗಿ ಉಳಿದಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಪುರಸಭಾ ಪ್ರತಿಪಕ್ಷ ಮುಖಂಡ ಅಶ್ಪಕ್ ಅಹಮ್ಮದ್ ಆಗ್ರಹಿಸಿದಾರೆ.ಕಾರ್ಕಳ ಪುರಸಭೆಯ ಅಧ್ಯಕ್ಷೆ ಸುಮಾ ಅಧ್ಯಕ್ಷತೆಯಲ್ಲಿ ಬಿ.ಮಂಜುನಾಥ ಪೈ ಸಭಾಂಗಣದಲ್ಲಿ ಜರುಗಿದ್ದ ಸಾಮಾನ್ಯ ಸಭೆಯಲ್ಲಿ ಮೇಲಿನ
ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಕೆ. ನಂದಿಕೇಶ ಹೆಗ್ಡೆಯವರು ನಿರ್ಮಿಸಿ ಜಗದೀಶ್ ಶೆಟ್ಟಿಯವರು ನಿರ್ದೇಶಿಸಿರುವ 7 is Not Even ಕಿರುಚಿತ್ರದ ಪೋಸ್ಟರ್ ಬಿಡುಗಡೆ ಕಿರುಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಮಂಗಳೂರು ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪೋಸ್ಟರ್ ಬಿಡುಗಡೆ ಗೊಳಿಸಿ ಸಿನಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಿರುಚಿತ್ರದ ತಂಡ ಉಪಸ್ಥಿತರಿದ್ದರು.
ದೇಶದಲ್ಲಿ ಈಗಾಗಲೇ ಕೇಂದ್ರ ಗೃಹ ಇಲಾಖೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ನಿಷೇಧವನ್ನು ಹೊರಡಿಸಿರುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ಪ್ರವೀಣ್ ಸೂದ್ ತಿಳಿಸಿದ್ದಾರೆ.ರಾಜ್ಯದಲ್ಲಿ ಪಿಎಫ್ ಐ ಚಟುವಟಿಕೆಗಳನ್ನು ನಡೆಸುವುದಾಗಲಿ, ಆ ಸಂಘಟನೆ ಪರವಾಗಿ ಮಾತನಾಡುವುದಾಗಲೀ ಮಾಡಬಾರದು. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ ರಾಜ್ಯದ ನಾನಾ
ಮೂಡುಬಿದಿರೆ: ಇಲ್ಲಿನ ಪುರಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಸರಕಾರದಿಂದ ರೂ 1 ಕೋಟಿ ಅನುದಾನ ಬಂದಿದ್ದು ಈ ಕಾಮಗಾರಿಯಲ್ಲಿ ಶೇ. 20ರಷ್ಟು ಕಮೀಷನ್ ವ್ಯವಹಾರ ನಡೆದಿದೆ ಎಂದು ವಿಪಕ್ಷೀಯ ಸದಸ್ಯ ಸುರೇಶ್ ಕೋಟ್ಯಾನ್, ಶಂಕ ವ್ಯಕ್ತಪಡಿಸಿ, ಆರೋಪಿಸಿದ ಘಟನೆ ನಡೆದಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆಡಳಿತ ಪಕ್ಷದ ಸದಸ್ಯರು ಆರೋಪಕ್ಕೆ ಸಾಕ್ಷಿ ಸಮೇತ ದಾಖಲೆ ನೀಡಿ ಆಗ ನಾವೂ ಬೆಂಬಲಿಸುತ್ತೇವೆ. ಸುಳ್ಳು ಆರೋಪ ಮಾಡಬೇಡಿ ದಾಖಲೆ ನೀಡುವಂತೆ ಪಟ್ಟು
ಮೂಡುಬಿದಿರೆಯ ತಾಲೂಕು ಆಡಳಿತ ಸೌಧದಲ್ಲಿ ಲೋಕಾಯುಕ್ತ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ನಂತರ ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ಮಾಧ್ಯಮದವರಿಗೆ ಮಾಹಿತಿ ನೀಡಿ ತಾಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ 8 ದೂರುಗಳು ಸಾರ್ವಜನಿಕರಿಂದ ಬಂದಿದ್ದು, ಆರ್ ಟಿಸಿ ಸಂಬಂಧಪಟ್ಟಂತೆ ಒಂದು ಪ್ರಕರಣವನ್ನು ಮಂಗಳವಾರ ಇತ್ಯರ್ಥ ಮಾಡಲಾಗಿದೆ. ಮೂರು ದೂರುಗಳಿಗೆ ಸೂಕ್ತ ನಮೂನೆ `ಸಲ್ಲಿಸುವಂತೆ ದೂರುದಾರರಿಗೆ ಸೂಚಿಸಲಾಗಿದೆ,
ನವದೆಹಲಿ; ದೇಶಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಪಿಎಫ್ ಐ ಯನ್ನು ಕೇಂದ್ರ ಗೃಹ ಇಲಾಖೆ ಘೋಷಿಸಿದ ಬಗ್ಗೆ ANI ಟ್ವೀಟ್ ಮಾಡಿದೆ.ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ ಎಂದು
ಮಂಗಳೂರು: ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ ಆಚಾರ್ಯ ಮಠದ ವಠಾರದಲ್ಲಿ ಪೂಜಿಸಲ್ಪಡುವ ಮಂಗಳೂರು ಶಾರದಾ ಮಹೋತ್ಸವದ ಶತಮಾನೋತ್ಸವ ಸವಿನೆನಪಿಗಾಗಿ ಸೋಮವಾರ ಕ್ಷೇತ್ರದ ಸರಸ್ವತಿ ಕಲಾ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ವಿಶೇಷ ಅಂಚೆ ಲಕೋಟೆ ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಲಾಯಿತು. ಅಂಚೆ ಇಲಾಖೆಯ ಹಿರಿಯ ಅಂಚೆ ಅಧೀಕ್ಷಕ ಹರ್ಷ, ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ಎನ್. ಡಾ.ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಕೋಶಾಧಿಕಾರಿ ಪಂಡಿತ ವಿಠಲ
ಪುತ್ತೂರು: ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರಾವಳಿಯ ಆಯ್ದ ತಂಡಗಳ ಹುಲಿವೇಷ ಸ್ಪರ್ಧೆ “ಪುತ್ತೂರ್ದ ಪಿಲಿ ರಂಗ್’ ಅಕ್ಟೋಬರ್ 1ರಂದು ಶನಿವಾರ ನಗರದ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವರಾತ್ರಿ ಸಂದರ್ಭದಲ್ಲಿ ಯುವ ಜನತೆಯನ್ನು ಸಾಂಪ್ರದಾಯಿಕ ಹುಲಿವೇಷ ಕುಣಿತಕ್ಕೆ ಪೆÇ್ರೀತ್ಸಾಹಿಸಲು ಮತ್ತು ಅಪ್ಪಟ ನಮ್ಮ ಮಣ್ಣಿನ ನೆಲದ ಜಾನಪದ ಕುಣಿತವನ್ನು
ಬೆಂಗಳೂರು, 27 ಸೆಪ್ಟೆಂಬರ್ 2022: ಕೋಮುವಾದಿ ಫಾಸಿಸ್ಟ್ ಬಿಜೆಪಿ ಸರ್ಕಾರ ತನ್ನ ರಾಜಕೀಯ ಶತ್ರುಗಳನ್ನು ಗುರಿಯಾಗಿಸಿಕೊಂಡು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ವಿರುದ್ಧ ಆರಂಭಿಸಿದ ಅಸಂವಿಧಾನಿಕ ದಾಳಿ ಮತ್ತು ಕಾನೂನುಬಾಹಿರ ಬಂಧನಗಳ ಮುಂದುವರಿದ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿ.ಎಫ್.ಐ) ಕಾರ್ಯಕರ್ತರನ್ನು ಕೂಡ ಕಾನೂನುಬಾಹಿರವಾಗಿ ಬಂಧಿಸುತ್ತಿದೆ. ಯಾವುದೇ