Home Posts tagged #vitla (Page 3)

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ : ವಿಟ್ಲ ವ್ಯಾಪ್ತಿಯಲ್ಲಿ ತಪಾಸಣಾ ಕೇಂದ್ರಗಳ ಸ್ಥಾಪನೆ

ವಿಟ್ಲ: ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೆÇೀಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ : 11ನೇ ಸಾಲೆತ್ತೂರು ಶಾಖೆಯ ಶುಭಾರಂಭ

ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 11ನೇ ಸಾಲೆತ್ತೂರು ಶಾಖೆ ಸಾಲೆತ್ತೂರಿನ ರಥನ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಮೂರ್ತೆದಾರಿಕೆ ಕಡಿಮೆಯಾಗುತ್ತ ಬರುತ್ತಿದ್ದಂತೆಯೇ ಮೂರ್ತೆದಾರರ ಸಹಕಾರಿ ಸಂಘವನ್ನು ಸ್ಥಾಪನೆ ಮಾಡುವ ಮೂಲಕ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಪರಿಣಾಮ ಇಂದು

ಏಪ್ರಿಲ್ 11ರಂದು ವಿಟ್ಲ ಅರಮನೆಯಲ್ಲಿ ತ್ರಿಕಾಲ ಪೂಜೆ : ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ ತ್ರಿಕಾಲ ಪೂಜಾ ಸಮಿತಿ ವತಿಯಿಂದ ವಿಟ್ಲದ ಅರಮನೆಯಲ್ಲಿ ಏಪ್ರಿಲ್ 11 ರಂದು ನಡೆಯಲಿರುವ ತ್ರಿಕಾಲ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ವಿಟ್ಲ ಅರಮನೆಯಲ್ಲಿ ನಡೆಯಿತು. ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಏಪ್ರಿಲ್ 11 ರಂದು ವಿಟ್ಲ ಸೀಮೆಯ ಡೊಂಬ ಹೆಗ್ಗಡೆ ಮನೆತನದ ಅರಮನೆಯಲ್ಲಿ ಶ್ರೀದೇವಿಯ ಪ್ರೀತ್ಯರ್ಥವಾಗಿ ಸಮಸ್ತ ಸಮಾಜದ ಒಳಿತಿಗಾಗಿ ಅರಮನೆಯ ಮಠದಲ್ಲಿ ಶ್ರೀದೇವಿಗೆ ತ್ರಿಕಾಲ ಪೂಜೆ ನಡೆಯಲಿದೆ.

ವಿಟ್ಲ: ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಪತಿಯ ಕೊಲೆ

ವಿಟ್ಲ: ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಅವರನ್ನು ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢ ಪಟ್ಟಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರವಿಂದ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್‌ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ. ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳಿಂದ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್‌ ಕೆಲಸವನ್ನು ಯೋಗೀಶ

ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ಕಾರು ಪಲ್ಟಿ

ವಿಟ್ಲ: ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಕಾರು ಪಲ್ಟಿಯಾದ ಘಟನೆ ವಿಟ್ಲ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.ಕಾರೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಕಾರು ಪಲ್ಟಿಯಾಗಿದೆ. ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ

ವಿಟ್ಲ : ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ.ಮೃತರನ್ನು ಆಟೋ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿದ್ದ ದಿನೇಶ್ ರವರು ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಇಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ.

ಕಡಬ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ : ಮಗು ಮೃತ್ಯು, ನಾಲ್ವರಿಗೆ ಗಾಯ

ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂಕೆ ಎಸ್ ಆರ್ ಟಿ ಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು,

ವಿಟ್ಲ : ಗುಡ್ಡಕ್ಕೆ ಹತ್ತಿದ ಬಸ್‌ : ಬಾಲಕಿ ಕಾಲಿಗೆ ಗಂಭೀರ ಗಾಯ

ವಿಟ್ಲ: ಖಾಸಗಿ ಬಸ್ಸೊಂದು ಗುಡ್ಡಕ್ಕೆ ಹತ್ತಿದ ಘಟನೆ ವಿಟ್ಲ -ಮಂಗಳೂರು ರಸ್ತೆಯ ಕೆಲಿಂಜದ ಮಾಜೋನಿ ಎಂಬಲ್ಲಿ ನಡೆದಿದೆ. ವಿಟ್ಲದಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್‌ ಗುಡ್ಡಕ್ಕೆ ಹತ್ತಿದೆ. ಘಟನೆಯಿಂದ ಚಂದಳಿಕೆಯ ಬಾಲಕಿಗೆ ಕಾಲಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಕೆಲ ಪ್ರಯಾಣಿಕರಿಗೆ ಸಣ್ಣ -ಪುಟ್ಟ ಗಾಯಾವಾಗಿದೆ. ಸ್ಥಳಕ್ಕೆ ವಿಟ್ಲ ಪೋಲೀಸರು ಭೇಟಿ ನೀಡಿದ್ದಾರೆ

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆ ಕೇರಳದಲ್ಲಿ ಬಂಧನ

ವಿಟ್ಲ: ಪ್ರಕರಣಯೊಂದರಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ವಿಟ್ಲ ಪೊಲೀಸರು ಕೇರಳದಲ್ಲಿ ಬಂಧಿಸಿದ ಘಟನೆ ನಡೆದಿದೆ.‌ ಕೇರಳ ರಾಜ್ಯದ ಪಯ್ಯನ್ನೂರು ಜಿಲ್ಲೆಯ ಕುಂಞಮಂಗಲ ಪಾಣಚೇರಿ ನಿವಾಸಿಸುಜಾತ(42) ಬಂಧಿತ ಆರೋಪಿ ಮಹಿಳೆ.ಈಕೆಯ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಕಲಂ:379,311,406,417, 418,419.420.423.427.465,467,468,471,504,506 r/w 34 IPC ಯಂತೆ ಪ್ರಕರಣ ದಾಖಲಾಗಿತ್ತು.ಈಕೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ

ವಿಟ್ಲ: ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಕಳ್ಳತನಕ್ಕೆ ಯತ್ನ: ಓರ್ವ ಆರೋಪಿ ಪೊಲೀಸರ ವಶಕ್ಕೆ

ವಿಟ್ಲ: ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶೆಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿಯಲು ಪ್ರಯತ್ನಿಸಿ ರಾತ್ರಿ ಕಳವು ಮಾಡಲು ಪ್ರಯತ್ನಿಸಿದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಟಿ.ಕೆ ಅಬ್ದುಲ್ (37) ಎಂದು. ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾದ ನಾಗರಾಜ ಹೆಚ್ .ಇ. ರವರ ಮಾರ್ಗದರ್ಶನದಂತೆ, ವಿಟ್ಲ ಪೊಲೀಸ್ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ