Home Posts tagged #vitla (Page 7)

ಬುಡೋಳಿಯಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ

ವಿಟ್ಲ: ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ಆಕ್ಟೀವಾ ಸವಾರ. ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ಆಕ್ಟೀವಾ ವಾಹನಕ್ಕೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ

ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು

ವಿಟ್ಲ: ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಸವಾರ ವಾಹನ ದಾಖಲೆಗಳ ಪ್ರಕಾರ ಕನ್ಯಾನ ಗ್ರಾಮದ ನಿವಾಸಿ ಗಣೇಶ ಬಂಗೇರ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮಾಣಿಯಿಂದ ಬುಡೋಳಿಗೆ ಆಕ್ಟೀವಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ಸವಾರನ ತಲೆಗೆ ಛಿದ್ರಗೊಂಡು ಸ್ಥಳದಲ್ಲೇ

ಗಾಂಜಾ ಜೊತೆ ಸಿಕ್ಕಿಬಿದ್ದ ಕಳ್ಳರು : ವಿಟ್ಲ ಪೊಲೀಸರ ಕಾರ್ಯಾಚರಣೆ

ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್ ಯಾನೆ ಅಚಿ (28) ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಫರಾಝ್ (23) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಉಕ್ಕುಡ ಕಡೆಯಿಂದ ವಿಟ್ಲ

ವಿಟ್ಲದಲ್ಲಿ ಚಿರತೆಗಳ ಕಾಟ: ಬೇಸತ್ತ ಸಾರ್ವಜನಿಕರಿಂದ ಬೋನು ಅಳವಡಿಕೆ

ಬಂಟ್ವಾಳ ತಾಲೂಕಿನ ವಿಟ್ಲದ ಕೊಳ್ನಾಡು ಗ್ರಾಮದ ಮದಕ, ಪಡಾರು, ಮಾದಕಟ್ಟೆ, ಬಾರೆಬೆಟ್ಟು, ಮುಂಡತ್ತಜೆ ಮತ್ತು ತಾಳಿತ್ತನೂಜಿ ಸುತ್ತಮುತ್ತ ಕಳೆದ ಎರಡು ತಿಂಗಳಿಂದ ಮಿತಿಮೀರಿದ ಚಿರತೆಗಳ ಕಾಟದಿಂದ ಬೇಸತ್ತ ಸಾರ್ವಜನಿಕರು ಬೋನು ಅಳವಡಿಸಿದ್ದಾರೆ. ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಒಂದು ಬಾರಿ ಮಾತ್ರ ಸ್ಥಳಕ್ಕಾಗಮಿಸಿ ಹರಕೆ ತೀರಿಸಿದ್ದಾರೆ. ಬೋನು ತಂದಿಟ್ಟು ಚಿರತೆ ಹಿಡಿಯುವಂತೆ ಸ್ಥಳೀಯರು ಅಂಗಲಾಚಿದ್ದರೂ  ತಂದಿರಿಸುತ್ತೇವೆಂದು ತಿಳಿಸಿದ್ದರು. ಅದಾದ ಬಳಿಕ

ಕರಾವಳಿಯಲ್ಲಿ ಭಾರೀ ಮಳೆ: ವಿಟ್ಲ ಹೋಬಳಿ ವ್ಯಾಪ್ತಿಯಲ್ಲಿ ಅಪಾರ ಹಾನಿ

ವಿಟ್ಲ: ವಿಟ್ಲ ಹೋಬಳಿ ವ್ಯಾಪ್ತಿಯ ಹಲವೆಡೆ ಮಳೆಗೆ ಭಾರೀ ಹಾನಿ ಸಂಭವಿಸಿದೆ. ಬೋಳಂತೂರು ಗ್ರಾಮದ ಕೊಕ್ಕಪುಣಿ ಎಂಬಲ್ಲಿ ಗಾಳಿ ಮಳೆಗೆ ನೇಮಕ್ಕುರವರ ಮನೆಯ ಮೇಲಿನ ಬರೆ (ಅವರಣ ಗೋಡೆ) ಕುಸಿದು ಬಿದ್ದಿದ್ದು, ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಪಂಚಾಯತ್ ಸದಸ್ಯ ಯಾಕುಬು ಮತ್ತು ಗ್ರಾಮಕರಣಿಕ ಕರಿಬಸಪ್ಪ ಆಗಮಿಸಿ ಪರಿಶೀಲಿಸಿದರು. ಬೋಳಂತೂರು ಗ್ರಾಮದ ಅಬ್ದುಲ್ ಖಾದ್ರಿ ಅವರ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ. ಚೆನ್ನಪ್ಪ ಪೂಜಾರಿ ಅವರ ಮನೆಯ ಹಿಂಭಾಗದಲ್ಲಿರುವ

ಕೊಳ್ನಾಡುವಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಅನುದಾನ ಮಂಜೂರು: ಎಂ.ಎಸ್.ಮಹಮ್ಮದ್

ವಿಟ್ಲ : ಕೊಳ್ನಾಡು ಜಿ.ಪಂ. ವ್ಯಾಪ್ತಿಯ ಕನ್ಯಾನ, ಕರೋಪಾಡಿ, ಕೊಳ್ನಾಡು, ಸಾಲೆತ್ತೂರು ಗ್ರಾ.ಪಂ.ಗಳಿಗೆ ಒಟ್ಟು ಜಲಜೀವನ್ ಮಿಷನ್ ಯೋಜನೆಯಡಿ 7.81 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಜಿ.ಪಂ.ಮಾಜಿ ಎಂ.ಎಸ್.ಮಹಮ್ಮದ್ ತಿಳಿಸಿದರು.ಅವರು ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾನು ಪ್ರತಿನಿಧಿಸಿದ ಕೊಳ್ನಾಡು ಜಿ.ಪಂ.ಕ್ಷೇತ್ರವು ದ.ಕ.ಜಿಲ್ಲೆಯಲ್ಲೇ ಅತೀ ಹೆಚ್ಚು ಅನುದಾನ ಪಡೆದಿದೆ. ಗ್ರಾ.ಪಂ.ನ ನೀರು ಮತ್ತು ನೈರ್ಮಲ್ಯ ಸಮಿತಿಯು

ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆ

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆಯಾಗಿದೆ. ಕಳೆದ ಭಾರಿಯ ಮಳೆಗೆ ಎರಡು ಬಾರಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿತ್ತು. ಇದರಿಂದ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆಗಿನ ಶಾಸಕಿ ಶಕುಂತಾಳ ಶೆಟ್ಟಿ ಅವರ ಮೂಲಕ ಒಂದು ಕೋಟಿ ರೂ. ಅನುದಾನದಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು. ಕಳೆದ ವರ್ಷ ಈ ಹೊಳೆಯಲ್ಲಿ ಕೊಚ್ಚಿಕೊಂಡು

 ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ: ಮನೆ ಭಾಗಶಃ ಹಾನಿ

ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಭಾಗಶಃ ಹಾನಿಗೊಂಡ ಘಟನೆ ವೀರಕಂಬ ಗ್ರಾಮದ ಕಲ್ಮಲೆ ಎಂಬಲ್ಲಿ ಸಂಭವಿಸಿದೆ.ಜಯಂತಿ ಮಕ್ಕಳ ಮಕ್ಕಳಾದ ಪ್ರಜೀತಾ(19) ರಕ್ಷಿತ (24) ಅವರು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೀರಕಂಬ ಕಲ್ಮಲೆ ಜಯಂತಿ ಮತ್ತು ರಘುನಾಥ ಶೆಟ್ಟಿ ದಂಪತಿಗಳ ಮನೆಗೆ ಸಂಜೆ ವೇಳೆ ಸಂಭವಿಸಿದ ಭಾರೀ ಸಿಡಿಲು ಅವರ ಮನೆಗೆ ಬಡಿದಿದೆ. ಇದರಿಂದ ಮನೆ ಭಾಗಶಃ ಹಾನಿಗೊಂಡಿದೆ. ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳು

ವಿಟ್ಲದಲ್ಲಿ  ಅಡುಗೆ ಅನಿಲ ದರ  ಇಳಿಸುವಂತೆ  ಡಿ.ವೈ.ಎಫ್.ಐನಿಂದ ಪ್ರತಿಭಟನೆ

ವಿಟ್ಲ : ಅಡುಗೆ ಅನಿಲ ದರ ಕೂಡಲೇ ಇಳಿಸುವಂತೆ ಒತ್ತಾಯಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ವಿಟ್ಲ ನಾಡ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.ಎಂ ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ ಕೋವಿಡ್ ಮಹಾಮಾರಿಯಿಂದ ಜನತೆ ಈಗಾಗಲೇ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪೆಟ್ರೋಲ್ ಡೀಸೆಲ್ ಬೆಲೆ ಈಗಾಗಲೇ ಗಗನಕ್ಕೇರಿದ್ದು, ಅಲ್ಲದೇ ದಿನ ಬಳಕೆಯ ಎಲ್ಲಾ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ.

ಕೊಳ್ನಾಡಿನಲ್ಲಿ ಯುವಕನೊರ್ವನಿಗೆ ನಾಲ್ವರ ತಂಡದಿಂದ ಹಲ್ಲೆ

ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ