ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂದತ್ವ ವಿಭಾಗ) ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಮೂಡುಬಿದಿರೆ: ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇರಿಸಿದ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸ್ಮಾರ್ಟ್ ಶಾಕ್ವೇವ್ ವೆಲಾಸಿಟಿ ಮೆಷರ್ಮೆಂಟ್ ಸಿಸ್ಟಮ್ (ಸ್ಮಾರ್ಟ್ ಆಘಾತ ತರಂಗಗಳ ವೇಗ ಮಾಪನ ವ್ಯವಸ್ಥೆ) ಪೇಟೆಂಟ್ ಪಡೆದುಕೊಂಡಿದೆ.ಈ ಆವಿಷ್ಕಾರವು ಕೇವಲ ಆಘಾತ ತರಂಗಗಳ ವೇಗ ಮಾಪನ ಮಾತ್ರವಲ್ಲ, ವಿವಿಧ ಅನುಷ್ಠಾನಗಳು ಹಾಗೂ ಅಗ್ನಿ ಸಂಬಂಧಿತ ಹಾಗೂ ಬೆಳಕಿನ ತಂತ್ರಜ್ಞಾನದಲ್ಲಿ ವಿಶೇಷವಾಗಿ ಕ್ರಾಂತಿಕಾರಿ ಕೊಡುಗೆ
ಮೂಡುಬಿದಿರೆ : ‘ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ, ಮೌಲ್ಯ ಹಾಗೂ ಗೌರವವು ಅವಶ್ಯವಾಗಿದೆ. ಮಹಿಳೆಯರ ಆಶಯ ಪರಿಗಣಿಸದೇ ಯಾವುದೇ ಪ್ರಗತಿ ಸಾಧ್ಯವಿಲ್ಲ ಎಂಬುದನ್ನು ಪುರುಷರು ಅರಿತುಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ಹೇಳಿದರು.ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ -2024ರ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿವಿಧ ಸಂಘ -ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಳ್ವಾಸ್ ಕಾಲೇಜಿನ
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯು ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣ ಪಡೆಯಲು ರಾಜ್ಯದ ವಿದ್ಯಾರ್ಥಿಗಳಿಗೆ ಭಾನುವಾರದಂದು ಪ್ರವೇಶ ಪರೀಕ್ಷೆ ನಡೆಸಿದ್ದು ನಾಡಿನ ಮೂಲೆ ಮೂಲೆಯಿಂದ ವಿದ್ಯಾಗಿರಿಗೆ 15,986 ಹೆಚ್ಚಿನ ವಿದ್ಯಾರ್ಥಿಗಳು ಅವರ ಪೋಷಕರು, ಜತೆಗೂಡಿ ಆಗಮಿಸಿ ವಿದ್ಯಾಗಿರಿ ಮತ್ತು ಪುತ್ತಿಗೆಯಲ್ಲಿ ಪರೀಕ್ಷೆಯನ್ನು ಬರೆದಿದ್ದಾರೆ. ಪ್ರತೀ ವರ್ಷದಂತೆ ಈ ಬಾರಿಯೂ ತನ್ನ ಕನಸಿನ ನಾಡಿನ ಏಕೈಕ ಶೂನ್ಯ ಶುಲ್ಕದ ಕನ್ನಡ ಮಾಧ್ಯಮ ಶಾಲೆಗೆ ಉಚಿತ ದಾಖಲಾತಿ
ಮೂಡುಬಿದಿರೆ : ಜೆಇಇ ಮೈನ್ಸ್ ಫೆಸ್-1 ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆ ಮಾಡಿದ್ದಾರೆ. 53 ವಿದ್ಯಾರ್ಥಿಗಳು 95 ಪರ್ಸಂಟೈಲ್ಗಿಂತ ಅಧಿಕ ಅಂಕ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.ವಿದ್ಯಾರ್ಥಿ ಎಚ್.ಆರ್. ರಜತ್ 99.271023 ಪರ್ಸಂಟೈಲ್ (ಭೌತಶಾಸ್ತ್ರ- 97.2200028, ರಸಾಯನಶಾಸ್ತ್ರ – 97.1516355 ಹಾಗೂ ಗಣಿತ- 99.537079)
ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು 2023-24ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕಾಲೇಜಿಗೆ 2023-24ರಿಂದ ಮುಂದಿನ ಹತ್ತು ವರ್ಷಗಳಿಗೆ ಅನ್ವಯವಾಗುವಂತೆ ಸ್ವಾಯತ್ತ ಸ್ಥಾನಮಾನ ನೀಡುವ ಕುರಿತು ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು
ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು. ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ,
ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29ನೇ ವರ್ಷದ ಸಡಗರಕ್ಕೆ ಸಜ್ಜಾಗಿದ್ದು ಇಂದಿನಿಂದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಲಾಸಕ್ತರಿಗೆ ರಸದೌತಣ
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್ನಲ್ಲಿ ಉಜಿರೆ ಎಸ್ಡಿಎಂ ಕಾಲೇಜು ವಿರುದ್ಧ ಜಯ
ಮಿಜಾರು: ಪರಿಶ್ರಮ ಇಲ್ಲದೆ ಸಾಧನೆ ಅಸಾಧ್ಯ. ಶ್ರಮದಿಂದ ಮಾತ್ರ ನಮ್ಮ ಗುರಿ ತಲುಪಲು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಯಂಗ್ ಇಂಡಿಯಾದ ‘ಯುವ’ ಕಾರ್ಯ ನಿರ್ವಹಣಾ ಮಂಡಳಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಬುಧವಾರ ಅವರು ಮಾತನಾಡಿದರು. ಸಮಯಕ್ಕೆ ತಕ್ಕಂತೆ ನಾವು ಬದಲಾಗಬೇಕು. ನಮ್ಮ ಆಲೋಚನೆಗಳನ್ನು ಬದಲಾಯಿಸಿಕೊಳ್ಳಬೇಕು. ಜೀವನದಲ್ಲಿ ನೀತಿ-ನಿಯಮ