Home Posts tagged #Yakshagana

ಕುಂದಾಪುರ: ಹೇರಿಕುದ್ರುವಿನಲ್ಲಿ ಮಕ್ಕಳ ಯಕ್ಷಗಾನ ಅರ್ಧದಲ್ಲೇ ಸ್ಥಗಿತ: ಯಕ್ಷಗಾನ ಪ್ರೇಮಿಗಳಿಂದ ತೀವ್ರ ಆಕ್ರೋಶ

ಕುಂದಾಪುರ ಸಮೀಪದ ಹೇರಿಕುದ್ರು ಎಂಬಲ್ಲಿ ಮಹಾಗಣಪತಿ ಮಾನಸ ಮಂದಿರದಲ್ಲಿ ರಾತ್ರಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಅನುಮತಿಸಿದ ಸಮಯ ಮೀರಿ ಮೈಕ್ ಬಳಕೆ ಮಾಡಲಾಗುತ್ತಿದೆ ಎಂಬ ದೂರಿನ ಮೇಲೆ ಆಗಮಿಸಿದ ಪೆÇಲೀಸರು ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಿದ್ದಾರೆ. ಈ ಘಟನೆ ವ್ಯಾಪಕ ಟೀಕೆಗೆ, ಯಕ್ಷಗಾನ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಯಕ್ಷಗಾನ

ಬೆಳ್ತಂಗಡಿ: ಶ್ರೀ ವನ ದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಕಲಾವಿದರಿಂದ ಮನೆ ಮನೆ ಯಕ್ಷಗಾನ

ಬೆಳ್ತಂಗಡಿ ತಾಲೂಕಿನ ಶಿಶಿಲ ಶ್ರೀ ವನ ದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಕಲಾವಿದರಿಂದ ಮನೆ ಮನೆ ಯಕ್ಷಗಾನ ಕಾರ್ಯಕ್ರಮ ನಡೆಯಿತು. ಮೇಳದ ಭಾಗವತರಾದ ಮೋಹನ್ ಶಿಶಿಲ ಮಾತನಾಡಿ, ಯಕ್ಷಗಾನ ಕಲೆ ಹಲವಾರು ವರ್ಗಗಳಿಂದ ಇದೆ ಆದರೆ ಜನರು ಈಗೀಗ ಟಿವಿ ಮೊಬೈಲ್ ಗಳಲ್ಲಿ ಬೇರೆ ಬೇರೆ ಕಾರ್ಯಕ್ರಮ ನೋಡುತ್ತಾರೆ ಆದ್ದರಿಂದ ಹಳ್ಳಿ ಜನರಿಗೆ ಯಕ್ಷಗಾನದ ಅರಿವು ಮೂಡಿಸುವ ಕಾರ್ಯಕ್ರಮ ನಾವು ಮಾಡುತ್ತಿದ್ದೇವೆ,ಇದರಿಂದ ಬಂದ ಉಳಿಕೆ ಹಣವನ್ನು ಅಂಗವಿಕಲರಿಗೆ ಹಾಗೂ

ಬ್ರಹ್ಮಾವರ : ಬಾಲಕಿಯರ ಯಕ್ಷಗಾನ ತಂಡದಿಂದ 1334 ಪ್ರದರ್ಶನ ಕಂಡ ಶ್ರೀ ಕೃಷ್ಣ ಪಾರಿಜಾತ ಯಕ್ಷಗಾನ

ಬ್ರಹ್ಮಾವರ : ಬ್ರಹ್ಮಾವರ ಬಳಿಯ ಚೇರ್ಕಾಡಿಯಲ್ಲಿ ಬಡಗುತಿಟ್ಟಿನ ಯಕ್ಷಗಾನ ಸವ್ಯಸಾಚಿ ಗುರು ಮಂಜುನಾಥ್ ಪ್ರಭು 32 ವರ್ಷದ ಹಿಂದೆ ಸ್ಥಾಪಿಸಿದ ಕಲಾಶ್ರೀ ಬಾಲಕಿಯರ ಯಕ್ಷಗಾನ ಮೇಳದವರಿಂದ ಶ್ರೀ ಕೃಷ್ಣ ಪಾರಿಜಾತ ಪ್ರಸಂಗ ನೀಲಾವರ ಶ್ರೀ ಮಹಿಷಮರ್ಧಿನೀ ದೇವಸ್ಥಾನದಲ್ಲಿ ಜರುಗಿತು. ಎಂಜಿನಿಯರಿಂಗ್ ಸೇರಿದಂತೆ ನಾನಾ ಉನ್ನತ ಶಿಕ್ಷಣ ಪಡೆಯುವ 7 ಯುವತಿಯರಿಂದ ಪ್ರದರ್ಶನ ಕಂಡ ಶ್ರೀ ಕೃಷ್ಣ ಪಾರಿಜಾತ ಪ್ರಸಂಗ ಯಕ್ಷಗಾನ ಈ ತಂಡದ 1334 ನೇ ಪ್ರದರ್ಶನವಾಗಿದೆ . ರಜಾ ದಿನದಲ್ಲಿ

ಹರಿದಾಸ- ಜಿನದಾಸ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ವಿಧಿವಶ

ಅತ್ಯಂತ ವಿನೀತ, ಮೃದು ಭಾಷಿ,ಸಾತ್ವಿಕ ಮನೋಭಾವದ ಸಹೃದಯಿ ವಿದ್ವಾಂಸ ಹರಿದಾಸ ಅಂಬಾತನಯ ಮುದ್ರಾಡಿ (88) ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. ಶಿಕ್ಷಕ, ಹರಿದಾಸ,ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಪ್ರವಚನಕಾರ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ,ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ ಇದ್ದು ಮಾರ್ಗದರ್ಶನ ಮಾಡಿ ಸಾರ್ಥಕವಾಗಿ ಬದುಕನ್ನು ಪೂರೈಸಿದ ಅಂಬಾತನಯರದ್ದು ಆದರ್ಶ ಜೀವನ. ಕಳೆದ ವಾರ ಉಡುಪಿಯಲ್ಲಿ ಜರಗಿದ ಪ್ರಥಮ

ಕಲಾಪೋಷಕರಿಂದ ಯಕ್ಷಗಾನ ಉಳಿವು: ಅನಂತ ಆಸ್ರಣ್ಣ

ಮಂಗಳೂರು: ‘ಯಕ್ಷಗಾನವನ್ನು ನಿರಂತರವಾಗಿ ಉಳಿಸಿ, ಬೆಳೆಸಲು ಕಲಾಪೋಷಕರ ಪಾತ್ರ ಹಿರಿದು, ಬೊಂಡಾಲದಲ್ಲಿ ದೀರ್ಘಕಾಲ ಯಕ್ಷಗಾನವನ್ನು ಸೇವಾರೂಪದಲ್ಲಿ ಆಡಿಸುವುದಲ್ಲದೆ, ಕಲಾವಿದರನ್ನು ಸನ್ಮಾನಿಸುವ ಮೂಲಕ ಕಲಾಮಾತೆಯ ಸೇವೆಯನ್ನೂ ನಡೆಸಿಕೊಂಡು ಬರುತ್ತಿರುವುದು ಸ್ತುತ್ಯರ್ಹ’ ಎಂದು ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದ್ದಾರೆ. ಹಳೆ ತಲೆಮಾರಿನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ಧನ

ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು : ‘ಕೃಷ್ಣ ಗಾರುಡಿ’ ಮತ್ತು ‘ಜಾಂಬವತಿ’ ಎಂಬ ಕಥಾನಕ ಪ್ರದರ್ಶನ

ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಇವರ ಪ್ರೊತ್ಸಾಹದೊಂದಿಗೆ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಇದೇ ಬರುವ ಜನವರಿ 22 ರಂದು ಸಂಜೆ 4 ರಿಂದ ರಾತ್ರಿ 10 ರವರೆಗೆ ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳವಾಗಿರುವ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳ, ಇವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ‘ಕೃಷ್ಣ ಗಾರುಡಿ’ ಮತ್ತು

ಏಷ್ಯಾದ ಅತಿದೊಡ್ಡ ಕಲಾ ಸಂಭ್ರಮ, ಬಾಂಗ್ಲಾದೇಶದ 19ನೇ ಏಷ್ಯಾನ್ ಆರ್ಟ್ ಬಿಯೆನ್ನಲ್

ಡಿಸೆಂಬರ್ 8, 2022 ರಿಂದ ಜನವರಿ 7, 2023 ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದ ನ್ಯಾಷನಲ್ ಆರ್ಟ್ ಗ್ಯಾಲರಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 19ನೇ ಏಷ್ಯನ್ ಆರ್ಟ್ ಬಿಯೆನ್ನಲ್‍ಗೆ ಮಂಗಳೂರಿನ ಕಲಾವಿದ ಸಂತೋಷ್ ಅಂದ್ರಾದೆ ಆಯ್ಕೆಯಾಗಿದ್ದಾರೆ.ಈ ಏμÁ್ಯದ ಅತಿದೊಡ್ಡ ಕಲಾ ಸಂಭ್ರಮದ 19ನೇ ಆವೃತ್ತಿಯನ್ನು ಮೂಲತಃ 2020ಕ್ಕೆ ನಿಗದಿಪಡಿಸಲಾಗಿತ್ತು ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಇದನ್ನು ಬಾಂಗ್ಲಾದೇಶ ಸಾಂಸ್ಕøತಿಕ ವ್ಯವಹಾರಗಳ

ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದ ನಿಧನ – Guruvappa Bayar

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ‌ ಮೇಳದ ಗುರುವಪ್ಪ ಬಾಯಾರು  ಯಕ್ಷಗಾನ(Yakshagana) ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು(Guruvappa Bayaru) ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ 

ಯಕ್ಷಗಾನ ತರಬೇತಿ ಕೇಂದ್ರ ಸ್ಥಾಪನೆ : ರಕ್ಷಿತ್ ಶಿವರಾಂ

ಉಜಿರೆ : ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ,ದೇಯಿ ಬೈದೆತಿ ಅಮ್ಮನರ ಬೆಳಕಿನಗೆಜ್ಜೆ ಸೇವೆಯ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಯಕ್ಷಗಾನ ಬಯಲಾಟ , ಯಕ್ಷಗಾನ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬಳಿ ಯಕ್ಷ ಬಳಗ ಬೆಳ್ತಂಗಡಿ ಬಳಗದ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಕ್ಷ ಬಳಗ ಬೆಳ್ತಂಗಡಿ ಗೌರವ ಅಧ್ಯಕ್ಷರಾದ , ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರು ಯಕ್ಷಗಾನವನ್ನು ಉಳಿಸಿ

Kumble Sundar Rao : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ,