HomeFresh Newsಜೇನಿನ ಸಿಹಿಯ ಹಿಂದೆ ಶ್ರಮದ ಸವಿ: ದ.ಕನ್ನಡ, ತುಮಕೂರು ಜೇನುತುಪ್ಪದ ಸಾಧನೆ ಹಾಡಿಹೊಗಳಿದ ಪ್ರಧಾನಿ ಮೋದಿ

ಜೇನಿನ ಸಿಹಿಯ ಹಿಂದೆ ಶ್ರಮದ ಸವಿ: ದ.ಕನ್ನಡ, ತುಮಕೂರು ಜೇನುತುಪ್ಪದ ಸಾಧನೆ ಹಾಡಿಹೊಗಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ, ದಕ್ಷಿಣ ಕನ್ನಡ ಮತ್ತು ತುಮಕೂರು ಜಿಲ್ಲೆಗಳ ಜೇನುತುಪ್ಪದ ಅಸಾಧಾರಣ ಗುಣಮಟ್ಟವನ್ನು ಉಲ್ಲೇಖಿಸಿ, ಅದರ ಹಿಂದೆ ಇರುವ ರೈತರ ಶ್ರಮವನ್ನು ಹಾಡಿಹೊಗಳಿದರು.

ದ.ಕ. ಜಿಲ್ಲೆಯ ಪರಿಸರವು ಉತ್ತಮ ಗುಣಮಟ್ಟದ ಜೇನು ಉತ್ಪಾದನೆಗೆ ಹೇಳಿ ಮಾಡಿಸಿದಂತಿದೆ. ಈ ಸಾಮರ್ಥ್ಯವನ್ನು ಗುರುತಿಸಿ, ಗ್ರಾಮಜನ್ಯ ಎಂಬ ಸಂಸ್ಥೆಯು ಜೇನನ್ನು ಬ್ರಾಂಡ್ ಮಾಡಿ ನಗರ ಮಾರುಕಟ್ಟೆಗೆ ತಲುಪಿಸುತ್ತಿದ್ದು, ಇದರಿಂದ ರೈತರಿಗೆ ಭಾರಿ ಲಾಭವಾಗಿದೆ ಎಂದು ಮೋದಿ ತಿಳಿಸಿದರು. ಹಾಗೆಯೇ, ತುಮಕೂರಿನ ಶಿವಗಂಗಾ ಕಾಳಂಜಿಯಾ ಜೀವಿದಂ ಸಂಸ್ಥೆಯೂ ಹಲವು ರೈತರಿಗೆ ಉದ್ಯೋಗ ನೀಡಿರುವುದನ್ನು ಪ್ರಶಂಸಿಸಿದರು.

ಭಾರತವು ಜೇನುತುಪ್ಪ ಉತ್ಪಾದನೆಯಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ. ಪ್ರಸ್ತುತ ಉತ್ಪಾದನೆಯು 1.5 ಲಕ್ಷ ಮೆಟ್ರಿಕ್ ಟನ್‌ಗಳನ್ನು ಮೀರಿದೆ, ಇದು ಸಾವಿರಾರು ಜನರಿಗೆ ಉದ್ಯೋಗ ನೀಡಿ, ರೈತರ ಆದಾಯವನ್ನು ಹೆಚ್ಚಿಸುತ್ತಿದೆ ಎಂದು ಪ್ರಧಾನಿ ಹೇಳಿದರು.

ಭಾರತದ ಕ್ರೀಡಾ ಸಾಧನೆಗೆ ಸಲ್ಯೂಟ್: ಮಹಿಳಾ ಬಾಕ್ಸರ್‌, ಕಬಡ್ಡಿ, ಮತ್ತು ಅಂಧರ ತಂಡಕ್ಕೆ ಪ್ರಧಾನಿ ಮೆಚ್ಚುಗೆ
ಕ್ರೀಡಾ ಜಗತ್ತಿನಲ್ಲಿ ಭಾರತವು ತನ್ನ ಛಾಪು ಮೂಡಿಸುತ್ತಿರುವುದಕ್ಕೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದರು. ಈ ಸಾಧನೆಗಳು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿ ನೀಡುತ್ತವೆ ಮತ್ತು ಈ ಸಾಮೂಹಿಕ ಪ್ರಯತ್ನಗಳು ದೇಶದ ಶಕ್ತಿಯನ್ನು ತೋರಿಸುತ್ತವೆ ಎಂದು ಅವರು ಹೇಳಿದರು.

ಬಾಹ್ಯಾಕಾಶ ಮತ್ತು ಡಿಜಿಟಲ್ ಪುನರುತ್ಥಾನ: ಚಂದ್ರಯಾನ-3 ಯಶಸ್ಸು ಮತ್ತು ಮಹಾಭಾರತದ ಡಿಜಿಟಲ್ ಅನುಭವ
ಇದೇ ವೇಳೆ, ದೇಶದ ವಿಜ್ಞಾನ ಮತ್ತು సాంಕೇತಿಕ ಸಾಧನೆಗಳ ಬಗ್ಗೆಯೂ ಪ್ರಧಾನಿ ಮಾತನಾಡಿದರು. ಚಂದ್ರಯಾನ-2 ಸಂಪರ್ಕ ಕಡಿತಗೊಂಡಾಗ ಇಡೀ ದೇಶ ನಿರಾಶೆಗೊಂಡರೂ, ಅದೇ ಕ್ಷಣ ವಿಜ್ಞಾನಿಗಳು ಚಂದ್ರಯಾನ-3 ರ ಯಶೋಗಾಥೆಯನ್ನು ಬರೆಯಲು ಆರಂಭಿಸಿದರು. ಯುವಕರ ಹುಮ್ಮಸ್ಸು ಮತ್ತು ವಿಜ್ಞಾನಿಗಳ ಸಮರ್ಪಣೆಯಿಂದ ಈ ದೇಶದ ಶಕ್ತಿ ಅಡಗಿದೆ ಎಂದು ಅವರು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments