ಉಡುಪಿ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ವತಿಯಿಂದ ಪ್ರತಿಭಟನೆ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರವು ಹೆಚ್ಚುತ್ತಿದ್ದು, ಸ್ವಜನಪಕ್ಷಪಾತ ತುಂಬಿ ತುಳುಕುತ್ತಿದೆ.
ಈ ಬಗ್ಗೆ ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರುಗಳು ರಾಜ್ಯ ಸರ್ಕಾರದ ಮತ್ತು ಸಚಿವರುಗಳ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ಪದಾಖಲೆಗಳೊಂದಿಗೆ ಮಾಧ್ಯಮಗಳಲ್ಲಿ ಆರೋಪಿಸಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ವಸತಿ ಇಲಾಖೆಯು ರಾಜ್ಯದಲ್ಲಿನ ಅತ್ಯಂತ ಹಿಂದುಳಿದ, ಬಡತನದ ಕುಟುಂಬಗಳ ನಿವೇಶನ ಹಾಗೂ ವಸತಿ ರಹಿತ ನೈಜ್ಯ ಫಲಾನುಭವಿಗಳಿಗೆ ಮೀಸಲಾಗಿರುವ ವಸತಿ ಯೋಜನೆಗಳನ್ನು ಲಂಚ ನೀಡುವವರಿಗೆ ಮಾತ್ರ ನೀಡುತ್ತಿದ್ದು, ಇಲಾಖೆಯು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿರುವುದಾಗಿ ಈಗಾಗಲೇ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳು ಸಾಕಷ್ಟು ವರದಿ ಮಾಡಿವೆ.


ಇದಲ್ಲದೆ, ರಾಜ್ಯ ಸರ್ಕಾರ ಇದುವರೆಗೂ ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಕೆರೆ ಕಟ್ಟೆಗಳ ಪುನಶ್ಚೇತನ, ಒಳಚರಂಡಿ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮುಂತಾದವುಗಳನ್ನು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುತ್ತದೆ. ಅಂತೆಯೇ, ಗುತ್ತಿಗೆದಾರರ ಬಾಕಿ ಹಣ ಪಾವತಿ ಮಾಡುವಲ್ಲಿಯೂ ಸಹ ವಿಳಂಬ ಮಾಡುತ್ತಾ ಬಂದಿದ್ದು ಬಡವರ ಹಾಗೂ ರೈತ ವಿರೋಧಿ ಸರ್ಕಾರವಾಗಿ ಮಾರ್ಪಟ್ಟಿರುತ್ತದೆ. ಪರಿಶಿಷ್ಟರಿಗೆ ಮೀಸಲಾಗಿರುವ ಹಣದಲ್ಲಿಯೂ ಅತ್ಯಂತ ತಾರತಮ್ಯವೆಸಗುತ್ತಿದ್ದು ಆ ವರ್ಗದ ಜನರಿಗೆ ಅನ್ಯಾಯ ಮಾಡುತ್ತಲಿದ್ದು, ಕೇವಲ ತುಷ್ಠಿಕರಣ ರಾಜಕಾರಣ ಮಾಡುತ್ತಲಿದ್ದು, ರಾಜ್ಯದ ಜನರಿಗೆ ಘನಘೋರ ಅನ್ಯಾಯವೆಸಗಿದೆ.
ಇದಲ್ಲದೆ, ರಾಜೀವ್‌ಗಾಂಧಿ ವಸತಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಮನೆಗಳ ಹಂಚಿಕೆಯಲ್ಲಿ ವ್ಯಾಪಕವಾದ ಭ್ರಷ್ಟಾಚಾರ ನಡೆದಿರುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರೇ ನೇರವಾಗಿ ವಸತಿ ಸಚಿವರಾದ ಶ್ರೀ ಜಮೀರ್ ಅಹಮದ್ ರವರ ವಿರುದ್ಧ ಆಪಾದನೆ ಮಾಡಿರುತ್ತಾರೆ.
ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು, ರಾಜ್ಯ ಸರ್ಕಾರ ಕಳೆದ 2 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ ಜನರನ್ನು ವಂಚಿಸುತ್ತಿರುವುದಾಗಿ ಆರೋಪಿಸಿದ್ದ
ಹಿನ್ನಲೆಯಲ್ಲಿ ಭ್ರಷ್ಟಾಚಾರ ಹೊತ್ತಿರುವ ಶ್ರೀ ಜಮೀರ್ ಅಹಮದ್ ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರೊಂದಿಗೆ
ಅತೀವ ಭ್ರಷ್ಟಾಚಾರ ಆಡಳಿತ ವೈಫಲ್ಯದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಸೂಕ್ತ ರೀತಿಯಲ್ಲಿ ಸಂವಿಧಾನ ಬದ್ಧವಾಗಿ ಆಡಳಿತ ನಡೆಸಲು ನಿರ್ದೇಶನ ನೀಡಬೇಕೆಂದು ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಗ್ರಹಿಸಿ ತದನಂತರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು ಪ್ರಕಟನೆಯ ಮೂಲಕ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಯಧ್ಯಕ್ಷರಾದ ವಾಸುದೇವ ರಾವ್, ರಾಜ್ಯ ಕಾರ್ಯದರ್ಶಿ ಸುಧಾಕರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಮಾಜಿ ಜಿಲ್ಲಾಧ್ಯಕ್ಷರಾದ ದಕ್ಷತ್ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಗಂಗಾಧರ ಬಿರ್ತಿ, ಉದಯ ಹೆಗ್ಡೆ, ನಾಯಕರುಗಳಾದ ಚಂದ್ರಹಾಸ ಎರ್ಮಾಳ್, ಬ್ಲಾಕ್ ಅಧ್ಯಕ್ಷರುಗಳಾದ ಸಂದೇಶ್ ಭಟ್, ಮತ್ತು ಶ್ರೀಕಾಂತ್ ಹೆಬ್ರಿ, ದೇವರಾಜ್ ತೊಟ್ಟಂ, ಯುವ ಜನತಾದಳ ಅಧ್ಯಕ್ಷ ಸಂಜಯ್ ಕುಮಾರ್, ನಾಯಕರುಗಳಾದ ಭರತ್ ಶೆಟ್ಟಿ, ರಮೇಶ್ ಕುಂದಾಪುರ, ಮನ್ಸೂರ್ ಇಬ್ರಾಹಿಂ, ಹುಸೇನ್ ಹೈಕಾಡಿ, ಸುರೇಶ್ ದೇವಾಡಿಗ, ರಾಮ ರಾವ್, ವೆಂಕಟೇಶ್ ಪಡುಬಿದ್ರಿ, ಬಿಕೆ ಮೊಹಮ್ಮದ್, ವಿನ್ಸೆಂಟ್ ಸುನಿಲ್, ರಂಗ ಕೋಟ್ಯಾನ್, ಆಶ್ರಫ್ ಪಡುಬಿದ್ರಿ, ಗುರುರಾಜ್ ಶೆಟ್ಟಿ, ಉಮಾನಾಥ ಶೆಟ್ಟಿ, ಶಂಶುದ್ದಿನ್ ಮಜೂರು, ಮಧುಕರ್ ಅಂಬಲಪಾಡಿ, ಸುರೇಶ್ ಉಡುಪಿ, ಪ್ರವೀಣ್ ಎರ್ಮಾಳ್, ಪ್ರಸಾದ್ ಪೂಜಾರಿ, ಉಮೇಶ್ ಶೆಟ್ಟಿ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.