ಉಳ್ಳಾಲ : ಸೋಮೇಶ್ವರ ಸ್ಕೂಟರ್ ಅಪಘಾತ – ಸವಾರ ಸಾವು

ಉಳ್ಳಾಲ : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ.


ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ (44)ಯಾನೆ ರಘು ಮೃತ ದುರ್ದೈವಿ.


ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ಅವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್ ಗ್ಯಾರೇಜ್ ಬಳಿ ರಸ್ತೆ ಅಪಘಾತ ನಡೆದಿದೆ. ಅಂಬುಲೆನ್ಸ್ ತುರ್ತು ವಾಹನವು ಸ್ಥಳಕ್ಕೆ ಬರಲು ತಡವಾದ ಕಾರಣ ಸ್ಥಳೀಯ ಯುವಕರು ಆಟೋ ರಿಕ್ಷಾದಲ್ಲಿ ಗಾಯಾಳು ರಾಘವೇಂದ್ರ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ.


ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಮೃತ ರಾಘವೇಂದ್ರ ಅವರು ತಾಯಿ,ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.

add - Rai's spices

Related Posts

Leave a Reply

Your email address will not be published.