ಕೆಟ್ಟು ನಿಂತ ಲಾರಿಗೆ ಸ್ಕೂಟರ್ ಢಿಕ್ಕಿ: ಸ್ಕೂಟರ್ ಚಾಲಕ ಮೃತ್ಯು : ಸಹ ಸವಾರನಿಗೆ ಗಾಯ

ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.
ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26) ಸಾವನ್ನಪ್ಪಿ ದವರು. ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಇನ್ನೊಂದು ಸ್ಕೂಟರಿನಲ್ಲಿದ್ದ ಗಾಯಾಳುಗಳ ವಿವರ ತಿಳಿದುಬಂದಿಲ್ಲ. ಇಬ್ಬರೂ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಒಂದು ಸ್ಕೂಟರ್ ಢಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಇನ್ನೊಂದು ಸ್ಕೂಟರ್ ಕೂಡ ಢಿಕ್ಕಿ ಹೊಡೆದಿದೆ.ನೇತ್ರಾವತಿ ಸೇತುವೆಯಲ್ಲಿ ಕೆಟ್ಟು ನಿಂತಿದ್ದ ಟಿಂಬರ್ ಲಾರಿ ಹಿಂಭಾಗಕ್ಕೆ ಎರಡೂ ಸ್ಕೂಟರ್ ಗಳು ಢಿಕ್ಕಿ ಹೊಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಪೆÇಲೀಸ್ ಠಾಣೆಯವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Posts

Leave a Reply

Your email address will not be published.