HomeFresh Newsಉಳ್ಳಾಲ ಅಬ್ಬಕ್ಕ ಥೀಮ್ ಪಾರ್ಕ್ ಗೆ ಪ್ರಯತ್ನ:  ಸಚಿವೆ ಶೋಭಾ ಕರಂದ್ಲಾಜೆ

ಉಳ್ಳಾಲ ಅಬ್ಬಕ್ಕ ಥೀಮ್ ಪಾರ್ಕ್ ಗೆ ಪ್ರಯತ್ನ:  ಸಚಿವೆ ಶೋಭಾ ಕರಂದ್ಲಾಜೆ

ಉಳ್ಳಾಲದ ವೀರರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮನಂತಹ ಸ್ವಾತಂತ್ರ ಹೋರಾಟಗಾರರು ನಮ್ಮ ರಾಜ್ಯದ ಮಹಿಳೆಯರಿಗೆ ಪ್ರೇರಣ ಶಕ್ತಿಯಾಗಿದ್ದು, ಉಳ್ಳಾಲದಲ್ಲಿ ಅಬ್ಬಕ್ಕಳ ಶೌರ್ಯವನ್ನು ದೇಶ ವಿದೇಶಗಳಿಗೆ ತಿಳಿಸುವ ನಿಟ್ಟಿನಲ್ಲಿ ಥೀಮ್ ಪಾರ್ಕ್ ಆಗಬೇಕು, ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರು ಇಡಲು ಪ್ರಧಾನಿಗೆ ಮತ್ತು ಸಂಬಂಧಿತ ಇಲಾಖೆಯ ಸಚಿವರಿಗೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆದ ವೀರ ರಾಣಿ ಅಬ್ಬಕ್ಕ ಉತ್ಸವದಲ್ಲಿ ಅವರು ಮಾತನಾಡಿ ಅಬ್ಬಕ್ಕಳ ಉತ್ಸವ ಕೇವಲ ಉಳ್ಳಾಲಕ್ಕೆ ಸೀಮಿತವಾಗಬಾರದು. ರಾಜ್ಯಮಟ್ಟದ ಉತ್ಸವವಾಗಿ ಸ್ವಾತಂತ್ರ ಹೋರಾಟಗಾರರ ಉತ್ಸವ ಆಚರಿಸಲು ರಾಜ್ಯ ಸರಕಾರ ಮುಂದಾಗಬೇಕು. ಅಬ್ಬಕ್ಕ ಭವನ ನಿರ್ಮಾಣದ ಸಂದರ್ಭ ಸುಸಜ್ಜಿತ ಥಿಯೇಟರ್ ನಿರ್ಮಾಣ ಮಾಡಿ ಅವರ ಸಾಹಸ ಗಾಥೆಯನ್ನು ಚಿತ್ರೀಕರಣದ ಮೂಲಕ ಮಕ್ಕಳಿಗೆ ತಿಳಿಸುವ ಕಾರ್ಯ ಆಗಬೇಕು. ಇದರೊಂದಿಗೆ ಪಠ್ಯಕ್ರಮದಲ್ಲೂ ಆಬ್ಬಕ್ಕಳ ಸಾಹಸಗಾಥೆಯನ್ನು ಅಳವಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದೊಂದಿಗೆ ಮಾತುಕತೆ ನಡೆಸುತ್ತೇನೆ ಎಂದರು.

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇAದ್ರ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿಧಾನ ಪರಿಷತ್ ನಾಯಕ ಬಸವರಾಜ ಹೊರಟ್ಟಿ, ಕರ್ನಾಟಕ ವಿಧಾನಪರಿಷತ್ ಸದಸ್ಯ ಹಾಗೂ ಭರವಸೆ ಸಮಿತಿಯ ಅಧ್ಯಕ್ಷ ಬಿ.ಎ. ಫಾರೂಕ್, ಕಾಂತಾರ ಚಲನಚಿತ್ರ ಖ್ಯಾತಿಯ

ನಟಿ ವಿದುಷಿ ಮಾನಸಿ ಸುಧೀರ್ ಪಾನೀರ್‌ದಯಾಮಾತೆಯ ದೇವಾಲಯದ ಧರ್ಮಗುರು ವಂ| ಫಾ| ವಿಕ್ಟರ್ ಡಿಮೆಲ್ಲೊ, ಜಿಲ್ಲಾಧಿಕಾರಿ ರವಿ ಕುಮಾರ್ ಎಂ. ಆರ್., ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾAತ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕವಿತಾ, ಪ್ರಮುಖರಾದ ರವೀಂದ್ರನಾಥ್ ರೈ, ಸದಾಶಿವ ಉಳ್ಳಾಲ್, ಕೃಷ್ಣಪ್ಪ ಸಾಲ್ಯಾನ್, ಗಂಗಾಧರ ಉಳ್ಳಾಲ್, ಸದಾನಂದ ಬಂಗೇರ, ಹೈದರ್ ಪರ್ತಿಪ್ಪಾಡಿ, ಚೆನ್ನಕೇಶವ, ನಝೀರ್ ಉಳ್ಳಾಲ್, ಭವಾನಿ ಕಾಪಿಕಾಡು, ಜಬ್ಟಾರ್, ಆನಂದ ಕೆ. ಅಸೈಗೋಳಿ, ದೇವಕಿ ಆರ್. ಉಳ್ಳಾಲ್, ಆಲಿಯಬ್ಬ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments