HomeFresh Newsವಾಲ್ಪಾಡಿ : ಶುಕ್ರವಾರ ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ವಾಲ್ಪಾಡಿ : ಶುಕ್ರವಾರ ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಮೂಡುಬಿದಿರೆ : ಕಳೆದ ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ ಆನೆಗುಡ್ಡೆಯ ಗುರುಪ್ರಸಾದ್ ಅವರ ಮೃತದೇಹವನ್ನು ಈಜು ತಜ್ಞ ಈಶ್ವರ್ ಮಲ್ಪೆ ಅವರು ಮೇಲಕ್ಕೆತ್ತಿದ್ದಾರೆ.

ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿತ್ತು ಅದರ ಹಲಗೆಯನ್ನು ತೆಗೆಯಲೆಂದು ಗುರುಪ್ರಸಾದ್ ಅವರು ಕೆಳಗಿಳಿಯುತ್ತಿದ್ದ ಸಂದಭ೯ದಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದರು.
ಭಾನುವಾರ ಈಶ್ವರ್ ಮಲ್ಪೆ ಅವರ ತಂಡ ನೀರಿಗೆ ಇಳಿದು ಹುಡುಕಾಟ ನಡೆಸಿ ಶಿತಾ೯ಡಿಯ ಕಜೆ ಬಳಿ ಮೃತ ದೇಹವನ್ನು ಪತ್ತೆ ಮಾಡಿ ಮೇಲಕ್ಕೆತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments