HomeFresh Newsಕ್ರೀಡಾಂಗಣ, ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಅನುದಾನ: ಶಾಸಕ ಕಾಮತ್‌

ಕ್ರೀಡಾಂಗಣ, ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಅನುದಾನ: ಶಾಸಕ ಕಾಮತ್‌

ಮಂಗಳೂರು: ಕ್ರೀಡೆಗೆ ಮತ್ತು ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಭಾರತೀಯ ಜನತಾ ಪಕ್ಷದ ಸರಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಜನತೆಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನು ಮಂಜೂರುಗೊಳಿಸಿದ್ದಾರೆ. ರಾಜ್ಯ ಸರಕಾರದ ಪಿಡಬ್ಲ್ಯುಡಿ ಇಲಾಖೆಯ ಅನುದಾನದ ಮೂಲಕ ಉರ್ವಸ್ಟೋರ್ ಮೈದಾನದ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್‌ ಹೇಳಿದರು.

ಅವರು ಉರ್ವ ಸ್ಟೋರ್‍‌ನ ಧನ್ಯವಾದ್ ಫ್ರೆಂಡ್ಸ್‌ ಸರ್ಕಲ್‌ ಇವರ ವಿಶೇಷ ಮನವಿಯ ಮೇರೆಗೆ ಉರ್ವಸ್ಟೋರ್‍‌ ಮೈದಾನವನ್ನು 15 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಯುವಕರು ದೈಹಿಕ ಮತ್ತು ಮಾನಸಿಕವಾಗಿ ಹೆಚ್ರಚು ಸದೃಢರಾಗಲು ಕ್ರೀಡಾ ಚಟುವಟಿಕೆಗಳನ್ನು ಹೆಚ್ಚು ಹೆಚ್ಚು ನಡೆಸಬೇಕು. ಅದಕ್ಕೆ ಪ್ರೋತ್ಸಾಹ ನೀಡಲು ಸರಕಾರ ನಾನಾ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದು ಅವರು ನುಡಿದರು.

ಆಟದ ಮೈದಾನಗಳಿಗೆ ಪೂರ್ಣ ಪ್ರಮಾಣದಲ್ಲಿ ಉತ್ತೇಜನ ನೀಡಲುವಾಲಿಬಾಲ್‌ ಸ್ಪೋಟ್ಸ್‌ ಕ್ಲಬ್‌ಗೆ 65 ಸೆಂಟ್ಸ್‌ ಭೂಮಿ ಮತ್ತು 40 ಲಕ್ಷ ರೂ.ಗಳ ಅನುದಾನ ಒದಗಿಸಲಾಗಿದೆ. ಉರ್ವ ಮೈದಾನದಲ್ಲಿ ಫ್ಲಡ್‌ಲೈಟ್‌ ಸೌಕರ್ಯ ಒದಗಿಸಲಾಗುತ್ತಿದೆ. ಇಂಟರ್‍‌ನ್ಯಾಷನಲ್‌ ಕಬಡ್ಡಿ ಕ್ರೀಡಾಂಗಣವನ್ನು ಮಂಗಳೂರಿನ ಜನತೆಗಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಎಮ್ಮೆಕೆರೆಯಲ್ಲಿ ಸ್ವಿಮ್ಮಿಂಗ್ ಪೂಲ್‌ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕರು ವಿವರವಾಗಿ ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯರಾದ ಗಣೇಶ್ ಕುಲಾಲ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಶಕೀಲಾ ಕಾವಾ, ಕಿಶೋರ್ ಕೊಟ್ಟಾರಿ,ಜಿಲ್ಲಾ ಯುಮೋರ್ಚಾ ದ ಉಪಾಧ್ಯಕ್ಷರಾದ ಅಮಿತ್ ರಾಜ್, ಬಿಜೆಪಿ ಮಂಡಲದ ಪ್ರಮುಖರಾದ ಭಾಸ್ಕರ್ ಚಂದ್ರ ಶೆಟ್ಟಿ,ಮನಪಾ ಸದಸ್ಯರಾದ ಮನೋಜ್ ಕುಮಾರ್ ಕೊಡಿಕಲ್, ಮಂಡಲ ಪ್ರಮುಖರಾದ ಅರುಣ್ ಉರ್ವ,ರಘುವಿರ್ ಬಾಬುಗುಡ್ಡ, ಮಂಡಲದ ಸಾಮಾಜಿಕ ಜಾಲತಾಣ ಪ್ರಮುಖರಾದ ಸಾಯಿಪ್ರಸಾದ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಸುಭ್ರಮಣ್ಯ ಅಂಗಡಿಗುಡ್ಡೆ, ಪ್ರಮುಖರಾದ ಗುರುಪ್ರಸಾದ್ ರಾವ್,ದೀಕ್ಷಿತ್ ಅಶೋಕನಗರ,ಧನ್ಯವಾದ್ ಫ್ರೆಂಡ್ಸ್ ಸರ್ಕಲ್ ಊರ್ವಸ್ಟೋರ್ ಇದರ ಪ್ರಮುಖರು ಹಾಗೂ ಸ್ಥಳೀಯ ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments