ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಕುತ್ತಾರಿನಿಂದ ದೇರಳಕಟ್ಟೆವರೆಗೆ ಪೊಲೀಸ್ ಪಥಸಂಚಲನ

ಉಳ್ಳಾಲ: ಕರ್ನಾಟಕ ವಿಧಾನಸಭಾ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದಿಂದ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆವರೆಗೆ ಸಿಆರ್ ಪಿಎಫ್ , ಉಳ್ಳಾಲ ಪೊಲೀಸ್ ಠಾಣೆ, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹಾಗೂ ಕೆಎಸ್ ಆರ್ ಪಿ ಅಸೈಗೋಳಿ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್ , ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾಧಿಕಾರಿ ರಮೇಶ್ ಹಾನಾಪುರ ಹಾಗೂ ಸಿಆರ್ ಪಿಎಫ್ ಸುಬೇದಾರ್ ಎಂ.ಪಿ ಸಿಂಗ್ ನೇತೃತ್ವ ವಹಿಸಿದ್ದರು.

Related Posts

Leave a Reply

Your email address will not be published.