HomeFresh Newsಕಾಂಗ್ರೆಸ್ ನ ಪದ್ಮರಾಜ್ ಗೆ ಮತ ಹಾಕಿ ಬಿಜೆಪಿಯನ್ನು ಸೋಲಿಸಿ: ಸಿಪಿಐಎಂನ ಯಾದವ ಶೆಟ್ಟಿ ಕರೆ

ಕಾಂಗ್ರೆಸ್ ನ ಪದ್ಮರಾಜ್ ಗೆ ಮತ ಹಾಕಿ ಬಿಜೆಪಿಯನ್ನು ಸೋಲಿಸಿ: ಸಿಪಿಐಎಂನ ಯಾದವ ಶೆಟ್ಟಿ ಕರೆ

ಮೂಡುಬಿದಿರೆ: ದ.ಕ.ಜಿಲ್ಲೆಯಲ್ಲಿ ಕಳೆದ 32 ವರ್ಷಗಳಿಂದ ಬಿಜೆಪಿಯ ಸಂಸದರಿದ್ದರು. ಆದರೆ ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಆಗಿದೆ. ಮನು ಸಂಸ್ಕೃತಿಯನ್ನು ಪ್ರತಿಪಾದಿಸುವ ಬಿಜೆಪಿಯು ಅಧಿಕಾರಕ್ಕೆ ಬರಬಾರದು ಆದ್ದರಿಂದ ನಾವು ಕಾಂಗ್ರೆಸ್ ನ ಪದ್ಮರಾಜ್ ಗೆ ಮತವನ್ನು ಹಾಕಿ ಬಿಜೆಪಿಯನ್ನು ಸೋಲಿಸಬೇಕು ಎಂದು ಸಿಪಿಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ ಕರೆ ನೀಡಿದರು.

ಅವರು ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಪಕ್ಷದ ಮೂಡುಬಿದಿರೆ ತಾಲೂಕು ಮಟ್ಟದ ರಾಜಕೀಯ ಸಮಾವೇಶವನ್ನುದ್ದೇಶಿಸಿ ಮಾತನಾಡಿ ಕಾಂಗ್ರೆಸನ್ನು ಬೆಂಬಲಿಸಿದರು.
ಬಿಜೆಪಿಯವರು ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ, ಕಾರ್ಮಿಕರ, ಬಡವರ ಪರವಾಗಿ ಅಥವಾ ಭೂ ಸುಧಾರಣೆಯಂತಹ ಹೋರಾಟದಲ್ಲಿ ಎಲ್ಲಿಯೂ ಭಾಗವಹಿಸಿಲ್ಲ ಬದಲಾಗಿ ರಾಜಕೀಯ ಸೇರಿ ನಮ್ಮ ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯಲು ಅವಕಾಶ ಮಾಡಿಕೊಟ್ಟಿದ್ದಾರಷ್ಟೇ ಎಂದು ಆರೋಪಿಸಿದ ಅವರು ಈ ಬಾರಿ ನರೇಂದ್ರ ಮೋದಿಗೆ ಅವಕಾಶ ನೀಡಬಾರದು ಎಂದರು.


ಸಿಪಿಐಎಂನ ಇನ್ನೋರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ ರಾಜಕೀಯ ವಿಷಯಗಳ ಕುರಿತು ಮಾತನಾಡಿದರು.
ಪಕ್ಷದ ಕಾರ್ಯದರ್ಶಿ ರಮಣಿ ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ಸಮಿತಿಯ ಸದಸ್ಯರಾದ ರಾಧ, ಗಿರಿಜ, ಲಕ್ಷ್ಮೀ, ಸುಂದರ ಶೆಟ್ಟಿ, ಸೀತಾರಾಮ ಶೆಟ್ಟಿ ಮತ್ತು ಕೃಷ್ಣಪ್ಪ ಕೋಣಾಜೆ ಈ ಸಂದರ್ಭದಲ್ಲಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments